ಬಲಿಪ ನಾರಾಯಣ ಭಾಗವತರು ವಿಧಿವಶ: ಕರಾವಳಿ ಕಲಾವಿದನ ಅಗಲಿಕೆ ಸಂತಾಪ ಸೂಚಿಸಿದ ಮೋದಿ
'ಬಲಿಪ' ಪರಂಪರೆಯನ್ನು ಸಮರ್ಥವಾಗಿ ಮುನ್ನಡೆಸಿ ಆ ಪರಂಪರೆಗೆ ಮೆರುಗು ತಂದ ತೆಂಕುತಿಟ್ಟಿನ ಮೇರು ಭಾಗವತವರಾದ ಬಲಿಪ ನಾರಾಯಣ ಭಾಗವತರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಮಂಗಳೂರು, ಫೆಬ್ರವರಿ 17: ಯಕ್ಷಗಾನದ ದಂತಕಥೆಯೆನಿಸಿದ್ದ ಬಲಿಪ ನಾರಾಯಣ ಭಾಗವತರು(86) ಫೆಬ್ರವರಿ 16ರಂದು ವಿಧಿವಶರಾಗಿದ್ದಾರೆ. 'ಬಲಿಪ' ಪರಂಪರೆಯನ್ನು ಸಮರ್ಥವಾಗಿ ಮುನ್ನಡೆಸಿ ಆ ಪರಂಪರೆಗೆ ಮೆರುಗು ತಂದ ತೆಂಕುತಿಟ್ಟಿನ ಮೇರು ಭಾಗವತರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
Shri Balipa Narayana Bhagawatha made a mark in the world of culture. He devoted his life towards Yakshagana playback singing and was admired for his exemplary style. His works will be admired by the coming generations. Pained by his demise. Condolences to his family. Om Shanti.
— Narendra Modi (@narendramodi) February 17, 2023
'ಬಲಿಪ ನಾರಾಯಣ ಭಾಗವತರು ಸಾಂಸ್ಕೃತಿಕ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಯಕ್ಷಗಾನದ ಹಿನ್ನೆಲೆ ಗಾಯನ ಭಾಗವತಿಕೆಗಾಗಿ ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟವರು. ಅನುಕರಣೀಯ ಜೀವನ ಶೈಲಿ ಮೂಲಕ ಎಲ್ಲರ ಮೆಚ್ಚುಗೆ ಪಡೆದವರು. ಅವರ ಕಾರ್ಯಗಳು ಮುಂದಿನ ಪೀಳಿಗೆಗೆ ಸ್ಫೂರ್ತಿ. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು' ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ತಮ್ಮ ತಂದೆ ಮಾಧವ ಭಟ್ಟರಿಂದ ಯಕ್ಷಗಾನ ಭಾಗವತಿಕೆಯನ್ನು ಕಲಿತ ಬಲಿಪ ನಾರಾಯಣ ಭಾಗವತರು ಅನಂತರ ತಮ್ಮ ಅಜ್ಜ ಬಲಿಪ ಭಾಗವತರಿಂದ ಭಾಗವತಿಕೆಯ, ಯಕ್ಷಗಾನ ನಡೆಯ ಪಟ್ಟುಗಳನ್ನು ಕರಗತ ಮಾಡಿಕೊಂಡರು. 1952ರಲ್ಲಿ ಮುಲ್ಕಿ ಮೇಳದಲ್ಲಿ ಸಂಗೀತಗಾರರಾಗಿ ಯಕ್ಷ ಪಯಣವನ್ನು ಆರಂಭಿಸಿದರು. ಬಳಿಕ ಕೂಡ್ಲು ಮೇಳದಲ್ಲಿ ಸಂಗೀತಗಾರರಾಗಿ ತಿರುಗಾಟ ಮಾಡಿದರು. 1953ರಲ್ಲಿ ಭಗವತಿ ಮೇಳದಲ್ಲಿ ಭಾಗವತರಾಗಿ ತಿರುಗಾಟ ಮಾಡಿ ಬಳಿಕ ಪೆಡ್ರೆ ಜಟಾಧಾರಿ ಮೇಳ, ಕೂಡ್ಲು, ಇರಾ, ರೆಂಜಾಳ, ಸೌಕೂರು, ಧರ್ಮಸ್ಥಳ, ಸುರತ್ಕಲ್ ಮೇಳಗಳಲ್ಲಿ ಸೇವೆ ಸಲ್ಲಿಸಿದರು. 1972ರಲ್ಲಿ ಕಟೀಲು ಮೇಳ ಸೇರಿದ ಅವರು 2003ರವರೆಗೆ ದೀರ್ಘಾವಧಿ ಕಾಲ ಪ್ರಧಾನ ಭಾಗವತರಾಗಿ ತಿರುಗಾಟ ನಡೆಸಿದ್ದರು. ಹಲವಾರು ಯಕ್ಷಗಾನ ಪ್ರಸಂಗಗಳು ಇವರಿಗೆ ಕಂಠಸ್ಥವಾಗಿತ್ತು. ರಂಗಸ್ಥಳದಲ್ಲಿ ಇವರ ಕಂಚಿನ ಕಂಠವನ್ನು ಆಲಿಸಲೆಂದೇ ಯಕ್ಷ ರಸಿಕರು ಭಾರೀ ಸಂಖ್ಯೆಯಲ್ಲಿ ಸೇರುತ್ತಿದ್ದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications