ಯಕ್ಷಗಾನ ಭಾಗವತ ದಿ.ಬಲಿಪ ಭಾಗವತರಿಗೆ ಶ್ರದ್ಧಾಂಜಲಿ ಸಲ್ಲಿಸಿ ಪತ್ರ ಬರೆದ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿವರು ಈ ಪತ್ರವನ್ನು ದಿ.ಬಲಿಪ ಭಾಗವತರ ಪುತ್ರ ಬಲಿಪ ಶಿವಶಂಕರ ಭಾಗವತರಿಗೆ ಬರೆದಿದ್ದಾರೆ. ಫೆಬ್ರವರಿ 21ರಂದು ಬರೆದಿರುವ ಈ ಪತ್ರ ಇದೀಗ ಜಾಲತಾಣಗಳಲ್ಲಿ ವೈರಲ್ ಆಗಿ ಸದ್ದು ಮಾಡುತ್ತಿದೆ.
ಮಂಗಳೂರು, ಮಾರ್ಚ್ 2: ಇತ್ತೀಚಿಗೆ ಇಹಲೋಕ ತ್ಯಜಿಸಿರುವ ತೆಂಕುತಿಟ್ಟು ಯಕ್ಷಗಾನದ ದಂತಕತೆ, ಬಲಿಪ ಪರಂಪರೆಯ ಮೇರು ಶಿಖರ ದಿ.ಬಲಿಪ ನಾರಾಯಣ ಭಾಗವತರಿಗೆ ಶ್ರದ್ಧಾಂಜಲಿ ಅರ್ಪಿಸಿ ಪ್ರಧಾನಿ ಮೋದಿಯವರು ಬರೆದಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿವರು ಈ ಪತ್ರವನ್ನು ದಿ.ಬಲಿಪ ಭಾಗವತರ ಪುತ್ರ ಬಲಿಪ ಶಿವಶಂಕರ ಭಾಗವತರಿಗೆ ಬರೆದಿದ್ದಾರೆ. ಫೆಬ್ರವರಿ 21ರಂದು ಬರೆದಿರುವ ಈ ಪತ್ರ ಇದೀಗ ಜಾಲತಾಣಗಳಲ್ಲಿ ವೈರಲ್ ಆಗಿ ಸದ್ದು ಮಾಡುತ್ತಿದೆ. "ಶ್ರೀ ಬಲಿಪ ಭಾಗವತರ ನಿಧನವು ನನಗೆ ಅತೀವ ನೋವನ್ನುಂಟು ಮಾಡಿದೆ. ಅವರ ಕುಟುಂಬದವರಿಗೆ ಅತೀವ ಸಂತಾಪ ಸೂಚಿಸುತ್ತಿದ್ದೇನೆ" ಎಂದು ಮೋದಿಯವರು ಪತ್ರದಲ್ಲಿ ಬರೆದಿದ್ದಾರೆ.

"ಬಲಿಪ ಭಾಗವತರು ಅವರ ಇಡೀ ಜೀವನವನ್ನೇ ಯಕ್ಷಗಾನ ಕಲೆಗೆ ಮುಡಿಪಾಗಿಟ್ಟವರು. ಬಲಿಪ ಶೈಲಿಯ ಭಾಗವತಿಕೆಯಿಂದಲೇ ಅವರು ಜನಮನ್ನಣೆ ಪಡೆದು ಕಲಾ ರಸಿಕರ ಮೆಚ್ಚುಗೆ ಗಳಿಸಿದ್ದರು. ಯಕ್ಷಗಾನ ಕಲೆಯನ್ನು ಜನಪ್ರಿಯಗೊಳಿಸುವಲ್ಲಿ ಅವರ ಪಾತ್ರ ಮಹತ್ತರವಾದದ್ದು. ಆದ್ದರಿಂದ ಕಲಾ ರಸಿಕರ ಅತೀವ ದುಃಖವನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಈಗ ಭಾಗವತರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿರಬಹುದು. ಆದರೆ ಅವರ ಮೌಲ್ಯ, ಆದರ್ಶ ನಮಗೆ ದಾರಿದೀಪವಾಗಲಿದೆ. ಅವರ ಅಗಲುವಿಕೆಯಿಂದ ದುಃಖ ತಪ್ತರಾಗಿರುವ ಕುಟುಂಬ ಸದಸ್ಯ ರಿಗೆ,ಸ್ನೇಹಿತರಿಗೆ ಹಾಗೂ ಯಕ್ಷಗಾನ ಕಲಾ ರಸಿಕರಿಗೆ ದೇವರು ಶಕ್ತಿ ನೀಡಲಿ" ಎಂದು ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ.
ಯಕ್ಷಗಾನದ ಮೇರುಶಿಖರ, ಬಲಿಪ ಪರಂಪರೆಯನ್ನು ಸಮರ್ಥವಾಗಿ ಮುನ್ನಡೆಸಿ ಇಹಲೋಕದ ಯಾತ್ರೆ ಮುಗಿಸಿದ ಬಲಿಪ ನಾರಾಯಣ ಭಾಗವತರಿಗೆ ಪ್ರಧಾನಿ ಮೋದಿಯವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದರು.

'ಬಲಿಪ ನಾರಾಯಣ ಭಾಗವತರು ಸಾಂಸ್ಕೃತಿಕ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರು ಯಕ್ಷಗಾನ ಭಾಗವತಿಕೆಗಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ತಮ್ಮ ಶೈಲಿಯಿಂದಲೇ ಕಲಾರಸಿಕರ ಮೆಚ್ಚುಗೆ ಪಡೆದರು. ಅವರು ಯಕ್ಷಗಾನದಲ್ಲಿ ಮಾಡಿರು ಕಾರ್ಯ ಮುಂದಿನ ಪೀಳಿಗೆಯವರಿಗೆ ದಾರಿದೀಪವಾಗಿದೆ. ಇಂತಹ ಬಲಿಪ ಭಾಗವತರ ನಿಧನದಿಂದ ನೋವು ತಂದಿದೆ. ಅವರ ಕುಟುಂಬಕ್ಕೆ ಸಂತಾಪ. ಓಂ ಶಾಂತಿ' ಎಂದು ಪ್ರಧಾನಿಮೋದಿಯವರು ಬಲಿಪ ನಾರಾಯಣರು ಮೃತರಾದ ದಿನ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications