ಮಂಗಳೂರು: ಹಿಂದೂ ಮುಖಂಡರ ಮನೆಗಳ ಮೇಲೆ ಪೊಲೀಸರ ದಾಳಿ ನಿಲ್ಲಲಿ
ಮಂಗಳೂರು, ಜುಲೈ 14 : ಹಿಂದೂ ಸಂಘಟನೆಗಳ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡುವುದನ್ನು ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್ ಎಚ್ಚರಿಸಿದ್ದಾರೆ.
ಶುಕ್ರವಾರ ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, "ಹಿಂದೂ ಸಂಘಟನೆಯ ಮುಖಂಡರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಪೊಲೀಸರು ಬಂಧನಕ್ಕೆ ಮುಂದಾಗುತ್ತಿದ್ದಾರೆ. ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿ ಕುಟುಂಬಸ್ಥರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ" ಎಂದು ಆರೋಪಿಸಿದರು.

ಪೊಲೀಸರು ದಾಳಿ ನಡೆಸುವುದನ್ನು ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು. ಮುಂದಿನ ಅನಾಹುತಗಳಿಗೆ ರಾಜ್ಯ ಸರಕಾರವೇ ನೇರ ಹೊಣೆಯಾಗಲಿದೆ ಎಂದು ಅವರು ಎಚ್ಚರಿಸಿದರು.
ರಾಜ್ಯ ಸರಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ತುಷ್ಠೀಕರಣದ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಎಸ್ ಡಿಪಿಐ ಮುಖಂಡ ಅಶ್ರಫ್ ಕೊಲೆ ಪ್ರಕರಣವನ್ನು 48 ಗಂಟೆಗಳಲ್ಲಿ ಭೇದಿಸಿದ ಪೊಲೀಸರಿಗೆ ಆರ್ ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಹತ್ಯೆ ನಡೆದ 7 ದಿನಗಳು ಕಳೆದರೂ ಕೊಲೆಗಡುಕರನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ" ಎಂದು ದೂರಿದರು.
ರಾಜ್ಯದಲ್ಲಿ ಮತಾಂಧರನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಕಿಡಿಕಾರಿದ ಅವರು ಪೊಲೀಸ್ ಅಧಿಕಾರಿಗಳ ಮೇಲೆ ಅನಾವಶ್ಯಕ ಒತ್ತಡ ಹೇರಿ ಪಕ್ಷಪಾತ ಧೋರಣೆಗೆ ಕಾರಣರಾಗುತ್ತಿರುವ ನಿವೃತ್ತ ಪೊಲೀಸ್ ಅಧಿಕಾರಿ ಕೆಂಪಯ್ಯ ಅವರನ್ನು ವಾಪಾಸ್ ಕರೆಸಿಕೊಳ್ಳಬೇಕೆಂದು ಒತ್ತಾಯಿಸಿದರು.
ಉಡುಪಿಯ ಪೇಜಾವರ ಸ್ವಾಮಿಜಿಯವರ 5ನೇ ಪರ್ಯಾಯದ ಸಮಯದಲ್ಲಿ ವಿಶ್ವಹಿಂದೂ ಪರಿಷತ್ ಬರುವ ನವೆಂಬರ್ 24,25,26 ರಂದು 3 ದಿನಗಳ ಕಾಲ ಸಂತರ ಮಹಾಸಭೆ ಧರ್ಮ ಸಂಸದ್ ನಡೆಯಲಿದ್ದು,ದೇಶದ ವಿವಿಧ ಭಾಗಗಳ 2 ಸಾವಿರಕ್ಕೂ ಹೆಚ್ಚು ಸಂತರು ಈ ಧರ್ಮ ಸಂಸತ್ ನಲ್ಲಿ ಪಾಲ್ಗೊಳ್ಳಲಿದ್ದು ಮತಾಂತರ ತಡೆ, ಗೋವಂಶ ರಕ್ಷಣೆ, ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ವಿಚಾರದ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications