ಮಂಗಳೂರಿನಲ್ಲಿ ವಶಕ್ಕೆ ಪಡೆದಿದ್ದ 50 ಮಂದಿ ಕೇರಳ ಪತ್ರಕರ್ತರ ಬಿಡುಗಡೆ
ಮಂಗಳೂರು, ಡಿಸೆಂಬರ್ 20: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ಮಂಗಳೂರಿನಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ನಿಯಂತ್ರಣಕ್ಕೆ ಗೋಲಿಬಾರ್ ನಡೆದಿದ್ದು, ಇಬ್ಬರು ಪ್ರತಿಭಟನಾಕಾರರು ಸಾವನ್ನಪ್ಪಿದ್ದರು. ಈ ಘಟನೆ ಬೆನ್ನಲ್ಲೆ ಇಂದು ಕೇರಳದಿಂದ ಬಂದ ಐವತ್ತು ಮಂದಿ ಪತ್ರಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಅವರನ್ನು ಬಿಡುಗಡೆಗೊಳಿಸಲಾಗಿದೆ.
ಪ್ರತಿಭಟನೆಯಲ್ಲಿ ಸಾವನ್ನಪ್ಪಿದ ಇಬ್ಬರ ಮೃತದೇಹವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಆಸ್ಪತ್ರೆ ಸುತ್ತ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು. ಈ ಸಂದರ್ಭ ಆಸ್ಪತ್ರೆ ಪ್ರವೇಶಿಸಲು ಬಂದಿದ್ದ ಪತ್ರಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಇಂದು ಬೆಳಿಗ್ಗೆ ಐವತ್ತು ಮಂದಿ ಕೇರಳದ ಪತ್ರಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ನಿನ್ನೆ ಗೋಲಿಬಾರ್ ನಲ್ಲಿ ಸಾವನ್ನಪ್ಪಿದ್ದ ಪ್ರತಿಭಟನಾಕಾರರ ಕುಟುಂಬದವರ ಸಂದರ್ಶನಕ್ಕೆಂದು ಬಂದಿದ್ದ ಈ ಪತ್ರಕರ್ತರು ವೆನ್ಲಾಕ್ ಆಸ್ಪತ್ರೆ ಪ್ರವೇಶಿಸುವ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದರು. ಪತ್ರಕರ್ತರು ಎನ್ನುವುದಕ್ಕೆ ಸೂಕ್ತ ದಾಖಲೆಗಳು ಸಿಗದ ಕಾರಣ ತಕ್ಷಣವೇ ಅವರಿಗೆ ತಡೆ ನೀಡಲಾಗಿತ್ತು. ಪರಿಶೀಲನೆ ನಂತರ ಆ ಐವತ್ತು ಮಂದಿಯನ್ನೂ ಬಿಡುಗಡೆಗೊಳಿಸಲಾಗಿದೆ.

ಪತ್ರಕರ್ತರನ್ನು ನಕಲಿ ಪತ್ರಕರ್ತರು ಎಂದು ಬಿಂಬಿಸಿ ವಶಕ್ಕೆ ಪಡೆದ ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಗೊಂಡಿದೆ.












Click it and Unblock the Notifications