ಸಲಿಂಗಕಾಮಕ್ಕೆ ಬಳಸಿಕೊಂಡು, ಹಣ ಕೇಳಿದ್ದಕ್ಕೆ ವೃದ್ಧನ ಕೊಲೆಗೈದ ಯುವಕ
ಮಂಗಳೂರು, ಅಕ್ಟೋಬರ್ 12: 'ಸಲಿಂಗ ಕಾಮ'ಕ್ಕೆಂದು ಕರೆದೊಯ್ದು ನಂತರ ಹಣ ಕೇಳಿದ್ದ ವೃದ್ಧರೊಬ್ಬರನ್ನು ಯುವಕನೊರ್ವ ಕೊಲೆ ಮಾಡಿದ ಘಟನೆ ಮಂಗಳೂರಿನ ಹರಿಪದವು ಎಂಬಲ್ಲಿ ನಡೆದಿದೆ.
ಮಂಗಳೂರು ನಗರದ ಮಂದಾರಬೈಲು ಜಯಾನಂದ ಆಚಾರ್ಯ(65) ಕೊಲೆಯಾದ ವ್ಯಕ್ತಿ. ಕುಂಜತ್ ಬೈಲ್, ದೇವಿನಗರ ನಿವಾಸಿ ರಾಜೇಶ್ ಪೂಜಾರಿ(31) ಬಂಧಿತ ಆರೋಪಿ.
ಜಯಾನಂದ ಆಚಾರ್ಯ ಕೂಲಿ ಕೆಲಸ ಮಾಡುತ್ತಿದ್ದು, ದಸರಾ ಸಂದರ್ಭದಲ್ಲಿ ಹೆಣ್ಣು ವೇಷ ಹಾಕುತ್ತಿದ್ದರು. ವಿಪರೀತ ಮದ್ಯದ ಚಟ ಹೊಂದಿದ್ದರು. ರಾಜೇಶ್ ಪೂಜಾರಿ ನಗರದ ಲಾಲ್ ಬಾಗ್ನಲ್ಲಿರುವ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದ. ಜಯಾನಂದರನ್ನು ಆರೋಪಿ ರಾಜೇಶ್ ಪೂಜಾರಿ ಸಲಿಂಗಕಾಮದ ಉದ್ದೇಶಕ್ಕೆಂದು ಅ.7 ರಿಂದ ಅ.8ರ ನಡುವೆ ಕರೆದೊಯ್ದಿದ್ದಾರೆ.
ಆದರೆ

ಪ್ರಕರಣದ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ''ವೃದ್ಧ ಜಯಾನಂದ ಆಚಾರ್ಯರನ್ನು 300 ರೂಪಾಯಿ ಕೊಡೋದಾಗಿ ಹೇಳಿ ಯುವಕನೊಬ್ಬ ಕಾಡಿಗೆ ಕರೆದುಕೊಂಡು ಹೋಗಿ ಅಲ್ಲಿ ಸಲಿಂಗಕಾಮ ಮಾಡಿದ್ದಾರೆ. ಸಲಿಂಗಕಾಮ ಆದ ಬಳಿಕ ಯುವಕನನ್ನು ಹಣ ಕೇಳಿದಾಗ ಆತ ತಿರಸ್ಕರಿಸಿ ವೃದ್ಧನ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಆರೋಪಿ ಯುವಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 302 ಮತ್ತು 377 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ'' ಎಂದು ಹೇಳಿದ್ದಾರೆ.
ಶಾರದೋತ್ಸವ ಮತ್ತು ಹುಲಿವೇಷದ ಬ್ಯಾನರ್ಗಳಿಗೆ ಹಾನಿ: ಮೂವರ ಬಂಧನ
ವಾಮಂಜೂರಿನಲ್ಲಿ ಇತ್ತೀಚೆಗೆ ಶಾರದೋತ್ಸವ ಮತ್ತು ಫ್ರೆಂಡ್ಸ್ ಹುಲಿಯ ಪ್ರಚಾರಾರ್ಥದ ಸಲುವಾಗಿ ಹಾಕಲಾಗಿದ್ದ ಬ್ಯಾನರ್ಗಳಿಗೆ ಹಾನಿಯುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಸುಮಿತ್ ಹೆಗ್ಡೆ (25), ಪ್ರವೀಣ್ ಪೂಜಾರಿ (24), ಯತೀಶ್ ಪೂಜಾರಿ (24) ಬಂಧಿತರು.
ಇವರು ನಗರದ ಹೊರವಲಯದ ವಾಮಂಜೂರಿನಲ್ಲಿ ವಾಮಂಜೂರು ಫ್ರೆಂಡ್ಸ್ ಹುಲಿ ವೇಷ ತಂಡದವರು ದಸರಾ ಸಂದರ್ಭ ಹುಲಿ ವೇಷ ಹಾಕಿದರೆ, ವಾಮಂಜೂರು ಟೈಗರ್ಸ್ ತಂಡದವರು ಗಣೇಶೋತ್ಸವಕ್ಕೆ ಹುಲಿ ವೇಷ ಹಾಕುತ್ತಿದ್ದರು. ಬಂಧಿತ ಆರೋಪಿಗಳು ವಾಮಂಜೂರು ಟೈಗರ್ಸ್ ತಂಡದ ಸದಸ್ಯರು. ಈ ತಂಡಗಳ ಮಧ್ಯೆ ಇರುವ ಅಸಮಾಧಾನದಿಂದ ಮೂವರು ಆರೋಪಿಗಳು ಅಕ್ಟೋಬರ್ 8 ರಂದು ವಾಮಂಜೂರು ಸುತ್ತಮುತ್ತ ಹಾಕಿದ ಶಾರದೋತ್ಸವ ಮತ್ತು ಹುಲಿ ವೇಷದ ಬ್ಯಾನರ್ಗೆ ಹಾನಿ ಮಾಡಿದ್ದಾರೆ. ಈ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದು ಸಾಮಾಜಿಕ ಶಾಂತಿ ಕದಡುವ ಹುನ್ನಾರವೂ ಆರೋಪಿಗಳದ್ದಾಗಿತ್ತು ಎಂದು ತಿಳಿದು ಬಂದಿದೆ.
ಮೂವರು ಆರೋಪಿಗಳ ದುಷ್ಕೃತ್ಯ ವಾಮಂಜೂರಿನಲ್ಲಿ ಹಾಕಲಾದ ಸಿಸಿ ಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಇದೇ ಆಧಾರವಾಗಿಟ್ಟುಕೊಂಡು ಪೊಲೀಸರು ಬಂಧಿಸಿದ್ದಾರೆ.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications