ಕಾಸರಗೋಡಿನಲ್ಲಿ ಸಹೋದ್ಯೋಗಿಯಿಂದಲೇ ಶಿಕ್ಷಕಿ ಕೊಲೆ; ಗುಟ್ಟು ಬಿಟ್ಟುಕೊಟ್ಟಿತು ಒಂದೆಳೆ ಕೂದಲು
ಕಾಸರಗೋಡು, ಜನವರಿ 25: ಜನವರಿ 14ರಂದು ನಾಪತ್ತೆಯಾಗಿ, ಶವವಾಗಿ ಪತ್ತೆಯಾಗಿದ್ದ ಇಲ್ಲಿನ ಮೀಯಪದವು ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಶಿಕ್ಷಕಿ ರೂಪಶ್ರೀ (44) ಕೊಲೆಗೆ ಸಂಬಂಧಿಸಿದಂತೆ ಸಹ ಶಿಕ್ಷಕ ಸೇರಿದಂತೆ ಇಬ್ಬರು ಆರೋಪಿಗಳನ್ನು ನಿನ್ನೆ ಪೊಲೀಸರು ಬಂಧಿಸಿದ್ದಾರೆ.
Recommended Video
ಜನವರಿ 14ರ ಸಂಜೆಯಿಂದ ನಾಪತ್ತೆಯಾಗಿದ್ದ ಶಿಕ್ಷಕಿ ರೂಪಶ್ರೀ ಎರಡು ದಿನಗಳ ನಂತರ, ಅಂದರೆ ಜ.16ರಂದು ಶವವಾಗಿ ಪೆರುವಾಡು ಕಡಲ ತೀರದಲ್ಲಿ ಪತ್ತೆಯಾಗಿದ್ದರು. ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ ಇಬ್ಬರನ್ನು ಬಂಧಿಸಿದ್ದಾರೆ. ರೂಪಶ್ರೀ ಅವರ ಶಾಲೆಯಲ್ಲೇ ಡ್ರಾಯಿಂಗ್ ಶಿಕ್ಷಕ ಆಗಿದ್ದ ವೆಂಕಟರಮಣ ಕಾರಂತ (50) ಹಾಗೂ ಆತನ ಸ್ನೇಹಿತ ನಿರಂಜನ್ ಎಂಬುವರನ್ನು ಬಂಧಿಸಿದ್ದಾರೆ.

ಅದೇ ಶಾಲೆಯ ಡ್ರಾಯಿಂಗ್ ಶಿಕ್ಷಕನಿಂದಲೇ ಕೃತ್ಯ
ಶಿಕ್ಷಕಿ ರೂಪಶ್ರೀ ಹಾಗೂ ಅದೇ ಶಾಲೆಯಲ್ಲಿ ಡ್ರಾಯಿಂಗ್ ಶಿಕ್ಷಕನಾಗಿದ್ದ ವೆಂಕಟರಮಣ ಅವರ ನಡುವೆ ಸ್ನೇಹ ಇತ್ತು. ಅವರ ನಡುವೆ ಆರ್ಥಿಕ ವ್ಯವಹಾರವೂ ಇತ್ತು. ಕೆಲ ಸಮಯದ ನಂತರ ಇದೇ ವಿಷಯಗಳು ಇಬ್ಬರ ನಡುವೆ ಕಲಹಕ್ಕೆ ಕಾರಣವಾಗಿದ್ದವು ಎಂದು ತಿಳಿದುಬಂದಿದೆ. ಹೀಗಾಗೇ ಮನೆಗೆ ಕರೆಸಿಕೊಂಡು ರೂಪಶ್ರೀ ಅವರನ್ನು ವೆಂಕಟರಮಣ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಬಕೆಟ್ ನಲ್ಲಿ ಮುಖ ಮುಳುಗಿಸಿ ಕೊಲೆ
ಜನವರಿ 14ರಂದು ಕಾರಣವೊಂದನ್ನು ನೀಡಿ ರೂಪಶ್ರೀಯನ್ನು ಮನೆಗೆ ಕರೆಸಿಕೊಂಡಿದ್ದ ವೆಂಕಟರಮಣ್ ನಂತರ ಜಗಳ ತೆಗೆದು ಬಕೆಟ್ ನಲ್ಲಿ ಅವರ ಮುಖ ಮುಳುಗಿಸಿ ಕೊಲೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ತನ್ನ ಸ್ನೇಹಿತ ನಿರಂಜನ್ ಜೊತೆ ಸೇರಿ, ಅವರ ಕಾರಿನಲ್ಲಿ ಹಾಕಿಕೊಂಡು ಹೊಳೆಗೆ ತೆಗೆದುಕೊಂಡು ಹೋಗಿ ಎಸೆದಿದ್ದಾರೆ. ಹೊಳೆಯಲ್ಲಿ ಮೃತದೇಹ ಸಿಕ್ಕಿದಂದಿನಿಂದಲೂ ಪೊಲೀಸರಿಗೆ ವೆಂಕಟರಮಣನ ಮೇಲೆ ಅನುಮಾನವಿತ್ತು.

ಕಡಲ ತೀರದಲ್ಲಿ ಪತ್ತೆಯಾಗಿದ್ದ ಶವ
ರೂಪಶ್ರಿ ಅವರ ಮೃತದೇಹ ಜನವರಿ 16ರಂದು ಕುಂಬಳೆ ಸಮೀಪದ ಪೆರುವಾಡು ಕಡಲ ತೀರದಲ್ಲಿ ದೊರೆತಿತ್ತು. ಮಂಜೇಶ್ವರ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿದ್ದರು. ಕುಟುಂಬಸ್ಥರು ಇದನ್ನು ಕೊಲೆ ಎಂದು ಆರೋಪಿಸಿದ್ದರು. ವಿವಿಧ ನಾಗರಿಕ ಸಂಘಟನೆಗಳು ಶಿಕ್ಷಕಿ ರೂಪಶ್ರೀ ಅವರ ಸಾವಿನ ಕುರಿತು ಸೂಕ್ತ ತನಿಖೆ ನಡೆಸಬೇಕೆಂದು ಆದೇಶಿಸಿ ಹೋರಾಟ ನಡೆಸಿದ್ದವು.

ಗುಟ್ಟು ಬಿಚ್ಚಿಟ್ಟ ಕೂದಲು
ಕೊನೆಗೂ ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ರೂಪಶ್ರೀ ಶಿಕ್ಷಕಿಯಾಗಿರುವ ಶಾಲೆಯಲ್ಲೇ ಶಿಕ್ಷಕನಾಗಿದ್ದ ವೆಂಟರಮಣ ಈ ಕೃತ್ಯ ನಡೆಸಿದ್ದು ಬೆಳಕಿಗೆ ಬಂದಿದೆ. ಕಾರನ್ನು ತಪಾಸಣೆ ನಡೆಸಿದಾಗ ಕಾರಿನ ಡಿಕ್ಕಿಯಲ್ಲಿ ಕೂದಲು ಪತ್ತೆಯಾಗಿತ್ತು. ಅದನ್ನು ಇಟ್ಟುಕೊಂಡು ಫಾರೆನ್ಸಿಕ್ ತಜ್ಞರು ಪರೀಕ್ಷಿಸಿದ್ದರು. ವೆಂಕಟರಮಣನನ್ನು ಹೆಚ್ಚಿನ ತನಿಖೆ ನಡೆಸಿದಾಗ ವಿಷಯ ಬಾಯಿ ಬಿಟ್ಟಿದ್ದಾನೆ. ವೆಂಕಟರಮಣನನ್ನು ಮೊದಲ ದಿನದಿಂದಲೇ ವಿಚಾರಣೆ ನಡೆಸಿದ್ದರೂ, ಯಾವುದೇ ಸುಳಿವು ಸಿಕ್ಕಿರಲಿಲ್ಲ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications