ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ; ಮತ್ತಿಬ್ಬರ ಬಂಧನ

ಮಂಗಳೂರು, ನವೆಂಬರ್ 3: ತುಳುನಟ ಸುರೇಂದ್ರ ಬಂಟ್ವಾಳ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮತ್ತಿಬ್ಬರನ್ನು ಬಂಧಿಸಲಾಗಿದೆ.

ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಪ್ರತೀಕ್ ಬೆಳ್ತಂಗಡಿ ಹಾಗೂ ಜಯಶ್ ಎಂಬ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಅಕ್ಟೋಬರ್ 20ರಂದು ಬಂಟ್ವಾಳದ ಬಿ.ಸಿ.ರಸ್ತೆಯಲ್ಲಿರುವ ಫ್ಲಾಟ್ ನಲ್ಲಿ ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಎಸ್ಪಿ ಬಿಎಂ ಲಕ್ಷ್ಮಿಪ್ರಸಾದ್ ಅವರ ನೇತೃತ್ವದಲ್ಲಿ ಐದು ವಿಶೇಷ ಪತ್ತೆ ತಂಡವನ್ನು ರಚಿಸಲಾಗಿತ್ತು.

Mangaluru: Police Arrested Two More Person In Surendra Bantwal Murder Case

ಈ ಕೊಲೆ ಪ್ರಕರಣದ ಆರೋಪಿಗಳಾದ ಸತೀಶ್ ಕುಲಾಲ್, ಗಿರೀಶ್ ಕಿನ್ನಿಗೋಳಿ, ಆಕಾಶ್ ಭವವ್ ಶರಣ್, ವೆಂಕಟೇಶ್ ಪೂಜಾರಿ, ಪ್ರದೀಪ್, ಶರೀಫ್, ದಿವರಾಜ್, ರಾಜೇಶ್ ಮತ್ತು ಅನಿಲ್ ಪಂಪ್ ವೆಲ್ ಎಂಬುವರನ್ನು ಅಕ್ಟೋಬರ್ 25ರಂದು ಬಂಟ್ವಾಳ ಪೊಲೀಸರು ಬಂಧಿಸಿ ವಿಚಾರಣೆ ಕೈಗೊಂಡಿದ್ದರು. ಇದೀಗ ಈ ಒಂಬತ್ತು ಮಂದಿಯೊಂದಿಗೆ, ಈ ಆರೋಪಿಗಳಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಮತ್ತಿಬ್ಬರನ್ನು ಬಂಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+