ವಾರದಲ್ಲಿ 127 ಗೂಂಡಾಗಳಿಂದ ಬಾಂಡ್ ಪಡೆದ ಮಂಗಳೂರು ಪೊಲೀಸರು
ನವೆಂಬರ್ 08, ಮಂಗಳೂರು : ಟಿಪ್ಪು ಜಯಂತಿ ಹಾಗೂ ಬಿಜೆಪಿಯ ಪರಿವರ್ತನಾ ಯಾತ್ರೆ ಸಮಯದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಲ್ಲಿ 127 ಗೂಂಡಾಗಳಿಂದ ಭದ್ರತಾ ಬಾಂಡ್ ಪಡೆದಿದ್ದಾರೆ ಮಂಗಳೂರು ಪೊಲೀಸರು.
ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಬುಧವಾರ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಸ್ವತಃ ರಾಜ್ಯ ಕಾನೂನು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್ ಈ ವಿಷಯ ತಿಳಿಸಿದರು.

ಟಿಪ್ಪು ಜಯಂತಿ ಹಿನ್ನೆಲಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಲ್ಲಿ ಭದ್ರತಾ ಕಾರ್ಯಕ್ಕೆ 2,000 ಪೊಲೀಸರನ್ನು ಪೊಲೀಸರನ್ನು ನಿಯೋಜಿಸಲಾಗಿದೆ, ಇದರ ಜೊತೆಗೆ ರಾಜ್ಯ ಮೀಸಲು ಪೊಲೀಸ್ ಪಡೆಯ 13 ತುಕಡಿ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆಯ ಒಂದು ಕಂಪನಿ ನಗರದಲ್ಲಿ ನಿಯೋಜಿಸಲಾಗಿದೆ.
ಬಿಜೆಪಿಯ ಪರಿವರ್ತನಾ ಸಮಾವೇಶಗಳ ಮೇಲೂ ಪೊಲೀಸರ ಅನುಮಾನದ ದೃಷ್ಠಿ ಬಿದ್ದಿದ್ದು. ಪರಿವರ್ತನಾ ರ್ಯಾಲಿಗೆ ಅನುಮತಿ ಕೋರಿ ಬಂದಿರುವ ಪತ್ರಗಳನ್ನು ಇನ್ನೂ ಖಡತಗಳಲ್ಲೇ ಇಡಲಾಗಿದೆ. ಬಿ.ಜೆ.ಪಿ ರ್ಯಾಲಿ ಇಂದಲೂ ಕೋಮು ಸೌಹಾರ್ಧಕ್ಕೆ ಧಕ್ಕೆ ಉಂಟಾಗುವ ಸಂಭವ ಇರುವ ಬಗ್ಗೆ ಶಂಕಿಸುತ್ತಿರುವ ಪೊಲೀಸರು ಪರಿವರ್ತನಾ ರ್ಯಾಲಿಗೆ ಅನುಮತಿ ನೀಡುವ ಬಗ್ಗೆ ಶೀಘ್ರದಲ್ಲೇ ನಿರ್ಣಯ ಕೈಗೊಳ್ಳಲಾಗುವುದು ಎಂದು ಅಡ್ಡಗೋಡೆಯ ಮೇಲೆ ದೀಪ ಇಟ್ಟಿದ್ದಾರೆ.
ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಕುರಿತು ಪರಿಸ್ಥಿತಿ ಆಧರಿಸಿ ಸ್ಥಳೀಯ ಅಧಿಕಾರಿಗಳು ತೀರ್ಮಾನಿಸಲಿದ್ದಾರೆ ಎಂದು ಕಮಲ್ ಪಂತ್ ಹೇಳಿದ್ದಾರೆ.












Click it and Unblock the Notifications