ಡ್ಯಾನ್ಸರ್ ಕಿಶೋರ್ ಶೆಟ್ಟಿಯ ಶರ್ಟ್ ಬಿಚ್ಚಿಸಿದ ಮಂಗಳೂರು ಕಮೀಷನರ್
ಮಂಗಳೂರು, ಜುಲೈ 7: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ರಾಜ್ಯದ ಗಮನಸೆಳೆದ ಪ್ರಮುಖ ಆರೋಪಿಯಾಗಿ ಬಂಧಿತನಾಗಿದ್ದ ಮಂಗಳೂರಿನ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಯನ್ನು ಪರೇಡ್ ವೇಳೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಚಳಿ ಬಿಡಿಸಿದ್ದಾರೆ.
ಮಂಗಳೂರಿನ ಪೊಲೀಸ್ ಗ್ರೌಂಡ್ನಲ್ಲಿ ನಡೆದ ರೌಡಿ ಪರೇಡ್ನಲ್ಲಿ ಡ್ರಗ್ಸ್ ಪ್ರಕರಣದ ಆರೋಪಿಯಾಗಿದ್ದ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಯ ಅಂಗಿ ಬಿಚ್ಚಿಸಿ ಆತನ ಕತ್ತಿನಲ್ಲಿದ್ದ ಹಾರಗಳ ಬಗ್ಗೆ ಪ್ರಶ್ನಿಸಿದ್ದಾರೆ. ಆತನ ಎದೆಯ ಮೇಲಿದ್ದ ಟ್ಯಾಟೂ ನೋಡಿ 'ಏನಪ್ಪಾ ಮೈ ಮೇಲೆ ಇಷ್ಟು ಟ್ಯಾಟೋ ಹಾಕಿಸಿಕೊಂಡಿದ್ಯಾ' ಎಂದು ಪ್ರಶ್ನಿಸಿದ್ದಾರೆ.
ತಾಯಿಯ ಟ್ಯಾಟೂ ಹಾಕಿರುವೆ ಎಂದ ಕಿಶೋರ್ಗೆ 'ಮಾಡೋದೆಲ್ಲಾ ಮಾಡಿ ತಾಯಿಯದ್ದು ಯಾಕೆ ಹಾಕಿಸಿಕೊಂಡಿದ್ದೀಯಾ. ನೆಟ್ಟಗೆ ಬಾಳಿದರೆ ಸಾಕು ಹಚ್ಚೆ ಹಾಕಿಸಿಕೊಳ್ಳಬೇಕಿಲ್ಲ. ಎಲ್ಲಿಂದ ಡ್ರಗ್ಸ್ ಸಪ್ಲೈ ಮಾಡಿಕೊಂಡಿದ್ದಿ. ನೀನೇ ತಿನ್ನೋದಾ ಅಥವಾ ಬೇರೆಯವರಿಗೆ ತಿನ್ನಿಸುತ್ತಿಯಾ?' ಎಂದು ಜೋರಾಗಿ ಗದರಿಸಿದರು. ಅಲ್ಲದೆ ಆತ ಉದ್ದ ಕೂದಲು ಬಿಟ್ಟಿದ್ದನ್ನು, ಕಣ್ಣು-ಕಿವಿ-ಬಾಯಿ ಬಳಿ ಚುಚ್ಚಿಸಿರೋದನ್ನು ಪ್ರಶ್ನಿಸಿದ ಕಮೀಷನರ್ಗೆ ಡ್ಯಾನ್ಸ್ಗಾಗಿ ಈ ರೀತಿ ಮಾಡಿಕೊಂಡಿದ್ದೇನೆ ಎಂದು ಕಿಶೋರ್ ಅಮನ್ ಶೆಟ್ಟಿ ಹೇಳಿದ್ದಾನೆ.

ನಂತರ ಡಿಸಿಪಿ ಅಂಶುಕುಮಾರ್ ಕಿಶೋರ್ ಶೆಟ್ಟಿಯ ಶರ್ಟ್ ಬಿಚ್ಚಿಸಿದ್ದಾರೆ. ಕಿಶೋರ್ ಕುತ್ತಿಗೆಯಲ್ಲಿದ್ದ ವಿವಿಧ ಸರಗಳನ್ನು ಗಮನಿಸಿದ ಡಿಸಿಪಿ ಅಂಶುಕುಮಾರ್, ಇದು ಚಿನ್ನದ್ದಾ ಅಲ್ಲಾ ಪ್ಲಾಟಿನಂನದ್ದಾ ಎಂದು ಕೇಳಿದ್ದಾರೆ. ಈ ವೇಳೆ ಕಿಶೋರ್ ಇದು ಜಸ್ಟ್ ಫ್ಯಾಷನ್ಗಾಗಿ ಎಂದು ಹೇಳಿದ್ದಾನೆ.
ಡ್ರಗ್ಸ್ ಪಡೆದ ಬಗ್ಗೆ ಕಿಶೋರ್ ಅಮನ್ ಶೆಟ್ಟಿಯ ವಿಚಾರಣೆ ಮಾಡಿದ ಕಮೀಷನರ್ ಎನ್ ಶಶಿಕುಮಾರ್, ಡ್ರಗ್ಸ್ ಯಾವಾಗ ಕೊನೆಯದಾಗಿ ಪಡೆದಿದ್ದೀಯಾ? ನೀನು ಡ್ರಗ್ಸ್ ಸಾಗಾಟ ಮಾಡಿದ್ದಾ? ಡ್ರಗ್ಸ್ ಪಡೆದಿದ್ದಾ? ನೀನು ಹೇಗೆ ಡ್ರಗ್ಸ್ ಸೇವನೆ ಮಾಡಿದ್ದು ಎಂದು ಕಮೀಷನರ್ ಕಿಶೋರ್ ಕುಮಾರ್ನನ್ನು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಕಿಶೋರ್ ಒಮ್ಮೆ ಮಾತ್ರ ಸೇವನೆ ಮಾಡಿದ್ದು, ಅದು ನೀರಿನಲ್ಲಿ ಅಂತಾ ಹೇಳಿದ್ದಾನೆ.
ಎಲ್ಲಾ ಕ್ರಿಮಿನಲ್ ಗಳ ಜೊತೆ ಕಿಶೋರ್ ಶೆಟ್ಟಿ ಯೂ ಮೈದಾನದಲ್ಲಿ ನಡೆದ ಪರೇಡ್ನಲ್ಲಿ ಲೆಫ್ಟ್ ರೈಟ್ ಹೆಜ್ಜೆ ಹಾಕಿದ್ದಾನೆ. ಕಿಶೋರ್ ಶೆಟ್ಟಿ ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಸಂಧರ್ಭದಲ್ಲಿ ಕಿಶೋರ್ ಅಮನ್ ಶೆಟ್ಟಿಯನ್ನು ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಕಿಶೋರ್ ಜೊತೆ ರಾಜ್ಯದ ಖ್ಯಾತ ನಿರೂಪಕಿಯೋರ್ವರ ಹೆಸರೂ ತಳುಕು ಹಾಕಿಕೊಂಡಿತ್ತು. ಡ್ಯಾನ್ಸ್ ಕೊರಿಯೋಗ್ರಾಫಿ ಮಾಡುವ ಸಂಧರ್ಭದಲ್ಲಿ ಆ ನಿರೂಪಕಿಯೂ ಡ್ರಗ್ಸ್ ಸೇವನೆ ಮಾಡಿದ ಬಗ್ಗೆ ಸುದ್ದಿಯಾಗಿತ್ತು. ಕಿಶೋರ್ ಬಂಧನವಾಗಿ ಕೆಲ ಕಾಲ ಜೈಲಿನೊಳಗಿದ್ದ. ಸದ್ಯ ಜಾಮೀನು ಮೇಲೆ ಹೊರಗೆ ಬಂದಿರುವ ಕಿಶೋರ್, ಮಂಗಳೂರಿನ ಖಾಸಗಿ ಟಿವಿ ವಾಹಿನಿಯೊಂದರ ಡ್ಯಾನ್ಸ್ ಸ್ಪರ್ಧೆಯ ಜಡ್ಜ್ ಆಗಿದ್ದಾನೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ












Click it and Unblock the Notifications