ಎಂಎಲ್ಸಿ ತೇಜಸ್ವಿನಿ ಗೌಡ ಆರೋಪಕ್ಕೆ ಠಕ್ಕರ್ ನೀಡಿದ ಮಂಗಳೂರು ಕಮೀಷನರ್
ಮಂಗಳೂರು, ಸೆಪ್ಟೆಂಬರ್ 23: ವಿಧಾನ ಪರಿಷತ್ ಕಲಾಪದಲ್ಲಿ ಮಂಗಳೂರು ಪೊಲೀಸರ ಮೇಲೆ ಎಂಎಲ್ಸಿ ತೇಜಸ್ವಿನಿ ಗೌಡ ಗಂಭೀರ ಆರೋಪ ಮಾಡಿದ್ದಾರೆ. "ಮದುವೆಯಾಗುವುದಾಗಿ ನಂಬಿಸಿ, ಯುವತಿಯ ಜೊತೆ ದೈಹಿಕ ಸಂಪರ್ಕವನ್ನು ಹೊಂದಿ, ಆಕೆಯಿಂದ ಸುಮಾರು 30 ಲಕ್ಷ ರೂಪಾಯಿ ಪಟಾಯಿಸಿದ ವ್ಯಕ್ತಿಯಿಂದ ಅನ್ಯಾಯಕ್ಕೊಳಗಾದ ಸಂತ್ರಸ್ತ ಮಹಿಳೆಯಿಂದ ಮಂಗಳೂರು ಪೊಲೀಸರು ದೂರ ಸ್ವೀಕರಿಸಿಲ್ಲ," ಎಂದು ಆರೋಪಿಸಿದ್ದರು.
"ಕೋಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸೆಪ್ಟೆಂಬರ್ 21ರಂದು ಮಂಗಳೂರಿಗೆ ಮೈಸೂರು ಮೂಲದ ಯುವತಿ ಬಂದಿದ್ದು, ಮೈಸೂರಿನಲ್ಲಿ ಮಂಗಳೂರು ಯುವಕನಿಂದ ಯುವತಿಗೆ ಲವ್ ದೋಖಾವಾಗಿತ್ತು. ಇದನ್ನು ಪ್ರಶ್ನಿಸಲು ಮಂಗಳೂರಿನ ಕೋಣಾಜೆಗೆ ಬಂದಿದ್ದು, ಈ ವೇಳೆ ಪೊಲೀಸರು ದೂರು ಪಡೆದಿಲ್ಲ ಎಂದು ಆರೋಪಿಸಲಾಗಿದೆ. ದೂರು ನೀಡುವುದಕ್ಕೆ ಬಂದಾಕೆಯನ್ನು ಪೊಲೀಸರು ಬಸ್ ಹತ್ತಿಸಿ ವಾಪಸ್ ಮೈಸೂರಿಗೆ ಕಳುಹಿಸಿದ್ದಾರೆ," ಅಂತಾ ತೇಜಸ್ವಿನಿ ಆರೋಪ ಮಾಡಿದ್ದರು.
ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಆರೋಪಕ್ಕೆ ಮಂಗಳೂರು ಪೊಲೀಸರು ಠಕ್ಕರ್ ಕೊಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್, "ಈ ಪ್ರಕರಣದಲ್ಲಿ ಪೊಲೀಸರಿಂದ ಯಾವುದೇ ಲೋಪ ಆಗಿಲ್ಲ," ಎಂದು ಸ್ಪಷ್ಟನೆ ನೀಡಿದ್ದಾರೆ.

"ಮೈಸೂರಿನ ನಂಜನಗೂಡು ಯುವತಿ ತನಗೆ ಮೋಸ ಆಗಿದೆ ಅಂತಾ ಮಂಗಳೂರಿನ ಯುವಕನ ಮನೆಗೆ ಬಂದಿದ್ದಾಳೆ. ಈ ವೇಳೆ ಯುವಕನ ಮನೆಯಲ್ಲಿ ಯುವತಿಗೆ ಕಪಾಳಮೋಕ್ಷ ಮಾಡಿ ಮನೆಯಿಂದ ಹೊರ ಕಳುಹಿಸಿದ್ದಾರೆ. ಇದರಿಂದ ಬೇಸರಗೊಂಡ ಯುವತಿ ಕೋಣಾಜೆ ಬಸ್ ನಿಲ್ದಾಣಕ್ಕೆ ಬಂದು ಅಳುತ್ತಾ ಕುಳಿತಿದ್ದಾಳೆ. ಇದನ್ನು ಗಮನಿಸಿದ ಸಾರ್ವಜನಿಕರು ವಿಚಾರಿಸಿ ಪೊಲೀಸ್ ಕಂಟ್ರೋಲ್ ನಂಬರ್ 112ಗೆ ಕರೆ ಮಾಡಿದ್ದಾರೆ."
"ಪೊಲೀಸರೇ ಬಸ್ಸ್ಟಾಂಡ್ಗೆ ಹೋಗಿ ಮಹಿಳೆಯ ಕಷ್ಟ ಕೇಳಿದ್ದಾರೆ. ಬಳಿಕ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಅಲ್ಲಿ ವಿಚಾರಿಸಿದ್ದಾರೆ. ದೂರನ್ನು ಇಲ್ಲಿ ಕೂಡ ಕೊಡಬಹುದು ಅಂತಾ ಹೇಳಿದ್ದಾರೆ. ಆದರೆ ಮೈಸೂರಿನಲ್ಲೇ ಮೋಸ ಆಗಿರುವುದು ಅಲ್ಲೇ ದೂರು ಕೊಡುತ್ತೇನೆ ಎಂದು ಯುವತಿ ಹೇಳಿದ್ದಾರೆ. ಬಳಿಕ ಪೊಲೀಸ್ ಇಲಾಖೆ ವಾಹನದಲ್ಲಿ ಕರೆದುಕೊಂಡು ಹೋಗಿ ಬಸ್ ಹತ್ತಿಸಿದ್ದಾರೆ."

"ಬಸ್ ಚಾಲಕ ಮತ್ತು ನಿರ್ವಾಹಕರಿಗೂ ಯುವತಿಯನ್ನು ಜೋಪಾನವಾಗಿ ಮೈಸೂರಿಗೆ ಕರೆದುಕೊಂಡು ಹೋಗಲು ಹೇಳಿದ್ದಾರೆ. ಆದರೆ ಯುವತಿ ಬಸ್ನಲ್ಲಿರುವಾಗ ಅವರ ವಕೀಲರು ಇಲ್ಲೇ ದೂರು ನೀಡಲು ಹೇಳಿದ್ದಾರೆ. ಬಳಿಕ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ನಾವು ಅವತ್ತೇ ಪ್ರಕರಣ ದಾಖಲು ಮಾಡಿಕೊಂಡಿದ್ದೇವೆ," ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.
ನಂಜನಗೂಡಿನ ಯುವತಿಗೆ ಮಂಗಳೂರಿನ ಮುಡಿಪು ಮೂಲದ ಯುವಕ ಮಹಮ್ಮದ್ ಅಜ್ವಾನ್ ಎಂಬಾತ ಬೆಂಗಳೂರಿನಲ್ಲಿ ಪರಿಚಯವಾಗಿದ್ದ. ಬೆಂಗಳೂರಿನಲ್ಲಿ ಕೆಲ ವರ್ಷಗಳ ಕಾಲ ಇವರು ಜೊತೆಗಿದ್ದು, ಮಹಮ್ಮದ್ ಅಜ್ವಾನ್ ಯುವತಿಯ ಜೊತೆ ಪ್ರೀತಿಯ ನಾಟಕವಾಡಿ ಹಲವು ಬಾರಿ ದೈಹಿಕ ಸಂಪರ್ಕ ಹೊಂದಿದ್ದಾನೆ.
ಈ ನಡುವೆ ಯುವತಿಯಿಂದ ಸುಮಾರು ಮೂವತ್ತು ಲಕ್ಷ ರೂಪಾಯಿಯನ್ನು ಪ್ರೀತಿಯ ನಾಟಕವಾಡಿ ಲಪಟಾಯಿಸಿದ್ದಾನೆ. ಯುವತಿ ತನ್ನ ಆಭರಣ ಮತ್ತು ತಾಯಿಯ ಆಭರಣಗಳನ್ನು ಒತ್ತೆ ಇಟ್ಟು ಯುವಕನಿಗೆ ಹಣ ನೀಡಿದ್ದಾಳೆ. ಇದಾದ ಕೆಲ ಸಮಯದ ಬಳಿಕ ಯುವತಿ ಯುವಕನ ಬಳಿ ಹಣ ಕೇಳಿದ್ದು, ಯುವಕ ಉಲ್ಟಾ ಹೊಡೆದಿದ್ದಾನೆ.
ಲವ್ ಬ್ರೇಕಪ್ ಎಂದು ಹೇಳಿ ಯುವತಿ ಜೊತೆ ಅಂತರ ಕಾಯ್ದುಕೊಂಡಿದ್ದಾನೆ. ಯುವತಿ ಹಲವು ಬಾರಿ ಪ್ರಯತ್ನಪಟ್ಟರೂ ಆರೋಪಿಯು ಯುವತಿಯನ್ನು ದೂರ ಇಟ್ಟಿದ್ದಾನೆ. ಇದರಿಂದ ಕೋಪಗೊಂಡ ಯುವತಿ ಬೇರೆ ದಾರಿ ಕಾಣದೆ ಮಂಗಳೂರಿನ ಮುಡಿಪುನಲ್ಲಿರುವ ಯುವಕನ ಮನೆಗೆ ಬಂದಿದ್ದಾಳೆ. ಆದರೆ ಯುವಕನ ಮನೆಯವರು ಯುವತಿಗೆ ಅವಾಚ್ಯವಾಗಿ ನಿಂದಿಸಿ ಕಪಾಳಮೋಕ್ಷ ಮಾಡಿ ಕಳುಹಿಸಿದ್ದಾರೆ.
ಇದಾದ ಬಳಿಕ ಯುವತಿ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಯುವಕ ಮಹಮ್ಮದ್ ಅಜ್ವಾನ್ ಮೇಲೆ ದೂರು ನೀಡಿದ್ದಾಳೆ. ಆರೋಪಿಯನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications