Breaking: ಬೈಕಿನ ಹಿಂಬದಿ ಸವಾರರಿಗೆ ನಿರ್ಬಂಧ; ಬೆಳಗ್ಗೆ ಆದೇಶ- ಸಂಜೆ ವಾಪಸ್
ಮಂಗಳೂರು ಆಗಸ್ಟ್ 04: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ನಡೆಯದಂತೆ ವಿಧಿಸಲಾಗಿದ್ದ ಬೈಕ್ನಲ್ಲಿ ಹಿಂಬದಿ ಸವಾರರ ನಿರ್ಬಂಧ ಆದೇಶವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ವಾಪಾಸ್ ಪಡೆದಿದ್ದಾರೆ.
ಗುರುವಾರ ಬೆಳಗ್ಗೆ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಅವರು ನಾಳೆ ಶುಕ್ರವಾರದಿಂದ ಬೈಕ್ನಲ್ಲಿ ಹಿಂಬದಿ ಪುರುಷ ಸವಾರರು ಸಂಚರಿಸುವಂತಿಲ್ಲ. ಹಿರಿಯ ನಾಗರಿಕರು ಮತ್ತು ಮಕ್ಕಳ ಹೊರತು ಯುವಕರು ಬೈಕ್ ಹಿಂದೆ ಕೂತು ಸಂಚರಿಸುವಂತಿಲ್ಲ. ಸಂಜೆ ನಂತರ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿರುವ ಕಾರಣಕ್ಕೆ ಸಂಜೆ 6ಗಂಟೆಯಿಂದ ಬೆಳಗ್ಗೆ 6ಗಂಟೆವರೆಗೆ ಬೈಕ್ನಲ್ಲಿ ಹಿಂದೆ ಕೂತು ಸಂಚರಿಸಲು ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿತ್ತು.

ಬೈಕ್ ಸವಾರರ ಜತೆಗೆ ಸಹ ಸವಾರರು ಅನೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ. ಇತರ ರಾಜ್ಯಗಳಂತೆ ಜಿಲ್ಲೆಯಲ್ಲೂ ಬೈಕ್ ಸವಾರರ ಮೇಲೆ ನಿಗಾ ಇಡಲಾಗುವುದು ಎಂದು ಅಧಿಕಾರಿಗಳ ಜತೆ ಸಭೆ ನಡೆಸಿ ನಂತರ ಸುದ್ದಿಗಾರರಿಗೆ ಅಲೋಕ್ ಕುಮಾರ್ ತಿಳಿಸಿದ್ದರು. ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ದೃಷ್ಟಿಯಿಂದ ಬೈಕ್ ಹಿಂಬದಿ ಕೂತು ಸಂಚಾರಕ್ಕೆ ಅವಕಾಶ ನಿರಾಕರಿಸಲಾಗಿದೆ. ಇದು ನಾಳೆಯಿಂದಲೇ ಜಾರಿ ಬರಲಿದೆ ಎಂದಿದ್ದರು.

ನಿರ್ಬಂಧ ನೀರ್ಧಾರ ವಾಪಾಸ್ ಏಕೆ?
ಹತ್ಯೆ, ಕೋಮು ಗಲಭೆ ಸೇರಿದಂತೆ ಅನೇಕ ಅಹಿತಕರ ಘಟನೆಗಳ ಹಿನ್ನೆಲೆ ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ನಿರ್ಬಂಧಗಳನ್ನು ಈಗಾಗಲೇ ವಿಧಿಸಲಾಗಿದೆ. ಇದರ ಮಧ್ಯೆ ಯುವಕರಿಗೆ ಬೈಕ್ ಹಿಂಬದಿ ಸವಾರರಿಗೆ ಸಂಚಾರ ಅವಕಾಶ ನಿರಾಕಿಸುವ ಅಗತ್ಯತೆ ಇಲ್ಲ. ಈ ನಿಯಮಗದ ಅಗತ್ಯತೆ ಇಲ್ಲ ಎಂದು ಪರಿಗಣಿಸಿ ಆದೇಶ ವಾಪಸ್ ಪಡೆಯಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದರು.
-
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications