ಮಂಗಳೂರಿನಲ್ಲಿ ಅಕ್ರಮ ಮರಳು ಅಡ್ಡೆಗೆ ದಾಳಿ: 30 ಲಾರಿ, 20 ದೋಣಿಗಳು ವಶಕ್ಕೆ
ಮಂಗಳೂರು, ಜನವರಿ 15: ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳು ಮಾಫಿಯಾ ಮೇಲೆ ದಾಳಿ ಮುಂದುವರೆದಿದೆ. ಇಂದು ಬೆಳ್ಳಂಬೆಳಗ್ಗೆ ಮಂಗಳೂರು ಹೊರವಲಯದ ಅಕ್ರಮ ಮರಳು ಸಂಗ್ರಹ ಘಟಕಗಳ ಮೇಲೆ ಪೊಲೀಸರ ತಂಡ ದಾಳಿ ನಡೆಸಿದೆ.
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು, ಮುತ್ತೂರು, ಮಳಲಿ ಸೇರಿದಂತೆ ವಿವಿಧ ಕಡೆಗಳಲ್ಲಿ ಮಂಗಳೂರು ಉತ್ತರ ಉಪವಿಭಾಗದ ರೌಡಿ ನಿಗ್ರಹ ದಳವು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀ ಶ್ರೀನಿವಾಸ ಗೌಡ ರವರ ನೇತೃತ್ವದಲ್ಲಿ ದಾಳಿ ನಡೆಸಿದೆ.

ಈ ಸಂದರ್ಭದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ಮಾಡಿ, ಅಪಾರ ಪ್ರಮಾಣದ ಮರಳು, ಅಕ್ರಮ ಮರಳು ಸಾಗಾಟಕ್ಕೆ ಬಳಸಲಾಗುತ್ತಿದ್ದ 30 ಲಾರಿಗಳು, 20 ಕ್ಕೂ ಹೆಚ್ಚು ಬೋಟ್ ಗಳನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡಿರುವ ಲಾರಿ, ಬೋಟ್ ಹಾಗೂ ಅಪಾರ ಪ್ರಮಾಣದ ಮರಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಪೊಲೀಸರು ಹಸ್ತಾಂತರಿಸಿದ್ದಾರೆ.












Click it and Unblock the Notifications