ಮಂಗಳೂರಿನಲ್ಲಿ ಕುಡುಕನಿಗೆ ಸಿಕ್ಕಿದ್ದ 10 ಲಕ್ಷ ರೂಪಾಯಿ ಪೊಲೀಸರ ಪಾಲು
ಮಂಗಳೂರು, ಡಿಸೆಂಬರ್, 06: ಮಂಗಳೂರಿನ ಕಂಕನವಾಡಿಯ ದಾರಿಯಲ್ಲಿ ಕುಡುಕನಿಗೆ ಸಿಕ್ಕಿದ್ದ 10 ಲಕ್ಷ ರೂಪಾಯಿ ಗಂಟೊಂದು ಅರ್ಧಗಂಟೆಯಲ್ಲೇ ಪೊಲೀಸರ ಪಾಲಾಗಿದೆ. ಇದೀಗ ವಾರ ಕಳೆದರೂ ಹಣ ವಾರಸುದಾರರಿಲ್ಲದೆ ಪೊಲೀಸ್ ಠಾಣೆಯಲ್ಲಿಯೇ ಕೊಳೆಯುತ್ತಿದೆ.
ನವೆಂಬರ್ 27 ರಂದು ಪಂಪ್ವೆಲ್ ಬಳಿ ವೈನ್ ಶಾಪ್ನಲ್ಲಿ ಶಿವರಾಜ್ ಎಂಬಾತ ಮದ್ಯ ಸೇವಿಸಿ ಹೊರಗಡೆ ನಿಂತಿದ್ದ. ಆಗ ಹೊರಗಡೆ ಬೈಕ್ ಪಾರ್ಕಿಂಗ್ ಸ್ಥಳದಲ್ಲಿ ಚೀಲವೊಂದು ಅನಾಥವಾಗಿ ಬಿದ್ದಿತ್ತು. ಈ ಚೀಲ ಶಿವರಾಜ್ ಹಾಗೂ ಮತ್ತೋರ್ವ ಕೂಲಿ ಕಾರ್ಮಿಕನ ಕಣ್ಣಿಗೆ ಬಿದ್ದಿತ್ತು. ತಕ್ಷಣ ಶಿವರಾಜ್ ಚೀಲವನ್ನು ಎತ್ತಿ ನೋಡಿದಾಗ 500, 2000 ರೂಪಾಯಿ ಮುಖಬೆಲೆಯ ಕಂತೆ ಕಂತೆ ನೋಟುಗಳು ಕಂಡುಬಂದಿವೆ. ಆಗ ಇಬ್ಬರೂ ರಾಶಿ ಹಣವನ್ನು ನೋಡಿ ಆಶ್ಚರ್ಯಚಿಕಿತರಾಗಿದ್ದಾರೆ.

ಕುಡುಕನ ಕೈಯಲ್ಲಿ ನೋಟುಗಳ ಬಂಡಲ್ ಪತ್ತೆ
ನೋಟುಗಳ ಕಂತೆಯನ್ನು ತೆಗೆದುಕೊಂಡು ಮತ್ತೆ ಮದ್ಯ ಕುಡಿಯಲು ಕುಳಿತಿದ್ದಾರೆ. ಬಂಡಲ್ನಿಂದ ಎರಡು ನೋಟು ಎಳೆದು ಮತ್ತೆ ವೈನ್ ಶಾಪ್ನೊಳಗೆ ಕಾಲಿಟ್ಟಿದ್ದಾರೆ. ಬಳಿಕ ಹೊರಬಂದ ಇಬ್ಬರೂ ಅನತಿ ದೂರ ಸಾಗಿದ್ದಾರೆ. ಆಗ ಕೂಲಿ ಕಾರ್ಮಿಕ ತನಗೇನು ಇಲ್ಲವೇ ಎಂದಾಗ 2,000, 500 ರೂಪಾಯಿ ಮುಖಬೆಲೆಯ ಬಂಡಲ್ ಒಂದನ್ನು ಶಿವರಾಜ್ ಆತನ ಕೈಗೆ ನೀಡಿದ್ದಾನೆ. ಉಳಿದ ನೋಟುಗಳ ಕಂತೆಯನ್ನು ಹಿಡಿದು ಮುಂದಕ್ಕೆ ಹೋಗಲಾಗದ ಶಿವರಾಜ್ ಮತ್ತೆ ವೈನ್ಶಾಪ್ಗೆ ಹೋಗಿ ಕಂಠಪೂರ್ತಿ ಮದ್ಯ ಇಳಿಸಿದ್ದಾನೆ.

ದೂರು ದಾಖಲಿಸದ ಪೊಲೀಸರು
ಅಲ್ಲಿಂದ ಹೊರಬರುವಾಗ ಕಂಕನಾಡಿ ಠಾಣಾ ಪೊಲೀಸರು ಈತನನ್ನು ಠಾಣೆಗೆ ಕರೆದೊಯ್ದಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಅಲ್ಲಿ ತಾನು ಒಂದು ಬಂಡಲ್ ಹಣವನ್ನು ಕೂಲಿ ಕಾರ್ಮಿಕನಿಗೆ ನೀಡಿದ್ದನ್ನು ಆತ ತಿಳಿಸಿದ್ದಾನೆ. ಆದರೆ ಆತನನ್ನು ಹುಡುಕಾಡಿದರೂ ಈವರೆಗೆ ಪತ್ತೆಯಾಗಿಲ್ಲ. ಇದೀಗ ವಾರಸುದಾರರಿಲ್ಲದೇ ಹಣ ಕಂಕನಾಡಿ ಠಾಣೆಯಲ್ಲಿಯೇ ಕೊಳೆಯುತ್ತಿದೆ. ಮೂಲಗಳ ಮಾಹಿತಿಯ ಪ್ರಕಾರ ಈ ಹಣ ಅಡಿಕೆ ವ್ಯಾಪರಸ್ಥರಿಗೆ ಸೇರಿದ್ದಾಗಿದ್ದು, ಹಣ ಕಳೆದುಹೋದ ದಿನದಂದೇ ಕಂಕನಾಡಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಆದರೆ ಪೊಲೀಸರು ಇದು ನಿಮ್ಮ ಹಣ ಅಲ್ಲ ಅಂತಾ ಹಿಂದೆ ಅವರನ್ನು ಕಳುಹಿಸಿದ್ದರು. ಹತ್ತು ಲಕ್ಷ ರೂಪಾಯಿ ಇರಲಿಲ್ಲ, ಇದ್ದದ್ದು 49 ಸಾವಿರ ರೂಪಾಯಿ ಮಾತ್ರ ಅನ್ನುವುದು ಪೊಲೀಸರ ವಾದವಾಗಿದೆ. ಆದರೂ ಈ ಬಗ್ಗೆ ದೂರು ದಾಖಲಾಗಿಲ್ಲ. ಈವರೆಗೆ ಪೊಲೀಸರು ಪ್ರಕರಣವನ್ನು ದಾಖಲಿಸಿಲ್ಲ ಅನ್ನುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications