'ರಾಜ್ಯದ ನೀರಿನ ಸಮಸ್ಯೆಗೆ ರಾಜಕಾರಣಿಗಳೇ ಕಾರಣ'
ಮಂಗಳೂರು, ಡಿಸೆಂಬರ್, 02: ರಾಜ್ಯದಲ್ಲಿ ತಲೆದೋರಿರುವ ನೀರಿನ ಸಮಸ್ಯೆಗಳಿಗೆ ಮತ್ತು ಹಲವು ನೀರಾವರಿ ಯೋಜನೆಗಳು ಪೂರ್ಣಗೊಳ್ಳದಿರುವುದಕ್ಕೆ ರಾಜಕಾರಣಿಗಳ ನಿರ್ಲಕ್ಷ್ಯತೆ ಮತ್ತು ಆಸೆಬುರುಕತನ ಕಾರಣ ಎಂದು ಆರೋಪಿಸಿದ್ದಾರೆ.
ಮೂಡಬಿದ್ರೆಯ ಆಳ್ವಾಸ್ ನುಡಿಸಿರಿಯಲ್ಲಿ ವೇದಿಕೆ ಹಂಚಿಕೊಂಡ ಪ್ರಮುಖ ಹೋರಾಟಗಾರರಾದ ವಿಕಾಸ್ ಸೊಪಿನ್ ಮಹದಾಯಿ ಹೋರಾಟದ ಬಗ್ಗೆ ಮಾತನಾಡಿದರೆ, ಕೆ. ಸಿ ಬಸವರಾಜ್ ಕಾವೇರಿ ಹೋರಾಟ ಮತ್ತು ದಿನೇಶ್ ಹೊಳ್ಳ ನೇತ್ರಾವತಿ, ಎತ್ತಿನಹೊಳೆ ತಿರುವು ಯೋಜನೆಯ ವಿರುದ್ದದ ಹೋರಾಟದ ಬಗ್ಗೆ ಮಾತನಾಡಿ ತಮ್ಮ ಚಿಂತನೆ ಹರಿಯಬಿಟ್ಟಿದ್ದಾರೆ.['ಮಳೆ ನೀರು ಸಂಗ್ರಹಿಸದಿದ್ದರೆ ದಂಡ ಗ್ಯಾರಂಟಿ']

ಎತ್ತಿನಹೊಳೆ ಯೋಜನೆಯ ಲಾಭ ಕರಾವಳಿ ಜಿಲ್ಲೆಗಾಗಲೀ, ಬರಪೀಡಿತ ಪ್ರದೇಶಗಳಿಗಾಗಲೀ ಬೇಡ, ಇದು ಬೇಕಾಗಿರುವುದು ಸರ್ಕಾರಕ್ಕೆ ಮಾತ್ರ ಎಂದು ಹೋರಾಟಗಾರ ವಿಕಾಸ್ ಸೊಪಿನ್ ವ್ಯಂಗ್ಯವಾಗಿ ಮಾತನಾಡಿದ್ದಾರೆ.
ರಾಜ್ಯದಲ್ಲಿ ದೊರೆಯುವ ನೀರಿನ ಪ್ರಮಾಣ 4400 ಟಿಎಂಸಿ ಎಂದು ಅಂದಾಜಿಸಲಾಗಿದೆ. ಆದರೆ ಕೇವಲ ಅರ್ಧದಷ್ಟು ನೀರು ಮಾತ್ರ ಬಳಕೆಯಾಗಿದೆ. ಕೃಷ್ಣ ಮತ್ತು ಕಾವೇರಿ ನದಿಗಳಿಂದ ಸಂಗ್ರಹಿಸಲಾದ ನೀರನ್ನು ಬಳಸಿಕೊಳ್ಳಲು ಸರ್ಕಾರ ವಿಫಲವಾಗಿದೆ.[ನಿಮಗಿದು ತಿಳಿದಿರಲಿ: ಕಳಸಾ ಬಂಡೂರಿ ಕುಡಿಯುವ ನೀರು ಹೋರಾಟ]
ಇದೇ ವೇಳೆ ನೆರೆಯ ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳು ತಮ್ಮ ಪಾಲಿಗೆ ಹಂಚಲಾದ ನೀರನ್ನು ಸರಿಯಾಗಿ ಉಪಯೋಗಿಸಿಕೊಂಡಿವೆ. ಸರ್ಕಾರ ಎಚ್ಚೆತ್ತುಕೊಂಡು ರಾಜ್ಯದ ನೀರಿನ ಪಾಲನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಇದು ಸಕಾಲ ಎಂದು ವಿಕಾಸ್ ಕಿವಿಮಾತು ಹೇಳಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications