ರಾಜಕೀಯ ಸಿನಿಮಾ ಹಾಗಲ್ಲ, ಅದು ರಿಯಾಲಿಟಿ ಶೋ: ಜಯಮಾಲಾ
ಮಂಗಳೂರು, ಜುಲೈ 23: ರಾಜಕೀಯ ಎನ್ನುವುದು ನಟನೆ ಅಲ್ಲ. ಅದೇನಿದ್ದರೂ ರಿಯಾಲಿಟಿ ಶೋ ಮಾತ್ರ. ಸರಕಾರದಲ್ಲಿ ನನಗೆ ವಹಿಸಿದ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವುದಷ್ಟೇ ನನ್ನ ಉದ್ದೇಶ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಅವರು ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮಹಿಳೆಯರು ನೆಮ್ಮದಿಯ ಜೀವನ ನಡೆಸುವಂತಾಗಬೇಕು. ತಾರತಮ್ಯ ಹೋಗಲಾಡಿಸಬೇಕು ಎನ್ನುವುದು ನನ್ನ ಕನಸು ಎಂದು ಅವರು ಆಭಿಪ್ರಾಯ ಪಟ್ಟರು.
ರಾಜ್ಯದಲ್ಲಿ ಸಾಂಸ್ಕೃತಿಕ ನೀತಿ ರೂಪಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದೇನೆ. ಸಾಂಸ್ಕೃತಿಕ ನೀತಿ ರೂಪಿಸುವ ಬಗ್ಗೆ ಪರ- ವಿರೋಧ ಅಭಿಪ್ರಾಯಗಳಿವೆ. ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಿ, ಸಾಂಸ್ಕೃತಿಕ ನೀತಿ ರೂಪಿಸಲಾಗುವುದು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನಕ್ಕೆ ಬರುವ ಅಕಾಡೆಮಿಗಳಿಗೆ ಈವರೆಗೆ 1 ಕೋಟಿ ರುಪಾಯಿ ಅನುದಾನ ನೀಡಲಾಗುತ್ತಿತ್ತು. ಇದೀಗ ಎಲ್ಲ ಅಕಾಡೆಮಿಗಳ ಅನುದಾನವನ್ನು 10 ಲಕ್ಷ ರೂಪಾಯಿ ಏರಿಕೆ ಮಾಡಲಾಗಿದೆ. ಮುಂದೆ ಅಕಾಡೆಮಿಗಳ ಕೆಲಸಗಳ ದಾಖಲು ಮಾಡುವ ಕಾರ್ಯಕ್ಕೂ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.
ಕರಾವಳಿಯಲ್ಲಿ ಕಾಂಗ್ರೆಸ್ನ ಅಭ್ಯರ್ಥಿಗಳು ಕಳೆದ ಚುನಾವಣೆಯಲ್ಲಿ ಸೋತಿರಬಹುದು. ಆದರೆ ಈ ಸಣ್ಣ ನೋವಿಗೆ ಚಿಂತೆ ಮಾಡಬೇಕಿಲ್ಲ. ಮುಂಬರುವ ಲೋಕಸಭೆ ಚುನಾವಣೆ ಎದುರಿಸಲು ಪಕ್ಷ ತಯಾರಾಗಿದ್ದು, ಕಾಂಗ್ರೆಸ್ ಗೆದ್ದು ಅಧಿಕಾರಕ್ಕೇರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಬರಿ ಮಲೆಗೆ ಮಹಿಳೆಯರ ಪ್ರವೇಶದ ಕುರಿತು ಮಾತನಾಡಿದ ಅವರು, ಜಗತ್ತಿನಲ್ಲಿ ಗಂಡಿಗೊಂದು, ಹೆಣ್ಣಿಗೊಂದು ಪ್ರತ್ಯೇಕ ದೇವರು ಸೃಷ್ಟಿಯಾಗಿಲ್ಲ. ಸಂಪ್ರದಾಯದ ಹೆಸರಿನಲ್ಲಿ ದೇವಸ್ಥಾನಕ್ಕೆ ಹೆಣ್ಣುಮಕ್ಕಳು ಹೋಗುವುದನ್ನು ತಡೆದರೆ ದೇಶ ನರಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications