ಚಂದ್ರಗ್ರಹಣ: ಶುಕ್ರವಾರ ಸಂಜೆಯ ನಂತರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನವಿಲ್ಲ
ಮಂಗಳೂರು, ಜುಲೈ.26: ಈ ವರ್ಷದ ಎರಡನೇ ಹಾಗೂ ಶತಮಾನದ ಅತಿ ದೊಡ್ಡ ಕೇತುಗ್ರಸ್ತ ಚಂದ್ರ ಗ್ರಹಣ ನಾಳೆ ಸಂಭವಿಸಲಿದೆ. ಈ ಶತಮಾನದ ಸುದೀರ್ಘ ಚಂದ್ರಗ್ರಹಣ ಎಂಬ ಕಾರಣಕ್ಕೆ ಈ ಗ್ರಹಣದ ಬಗ್ಗೆ ಕುತೂಹಲ ಹೆಚ್ಚಾಗಿದೆ.
ನಾಳೆ ಚಂದ್ರ ಗ್ರಹಣ ಸಂಭವಿಸುತ್ತಿರುವುದರಿಂದ ದಕ್ಷಿಣಕನ್ನಡ ಜಿಲ್ಲೆಯ ದೇವಸ್ಥಾನಗಳಲ್ಲಿನ ಪೂಜಾ ವೇಳಾ ಪಟ್ಟಿಗಳಲ್ಲಿ ಬದಲಾವಣೆ ಮಾಡಲಾಗಿದೆ. ಅದಲ್ಲದೆ, ದೇವರ ದರ್ಶನದ ಅವಧಿಯಲ್ಲೂ ತುಸು ವ್ಯತ್ಯಾಸ ಮಾಡಲಾಗಿದೆ.
ನಾಳೆ ಚಂದ್ರ ಗ್ರಹಣ ಸಂಭವಿಸಲಿರುವ ಹಿನ್ನೆಲೆಯಲ್ಲಿ ಸುಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ನಾಳೆ 7 ಗಂಟೆಯ ಬಳಿಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ.

ಹಗಲಿನಲ್ಲಿ ನಡೆಯುವ ಮಧ್ಯಾಹ್ನದ ಪೂಜೆ ಹಾಗೂ ಇತರ ಸೇವೆಗಳು ಎಂದಿನಂತೆ ನಿಗದಿತ ಸಮಯಕ್ಕೆ ನಡೆಯಲಿದ್ದು, ರಾತ್ರಿ ನಡೆಯುವ ಮಹಾ ಪೂಜೆ ಸಂಜೆ 6.30ಕ್ಕೆ ನೆರವೇರುವುದು ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಅಲ್ಲದೆ ಸಂಜೆ ನಡೆಯುವ ಆಶ್ಲೇಷ ಬಲಿ ಸೇವೆ ಕೂಡ ಚಂದ್ರ ಗ್ರಹಣದ ಹಿನ್ನಲೆಯಲ್ಲಿ ಇರುವುದಿಲ್ಲ ಹಾಗೂ ರಾತ್ರಿ ದೇವಸ್ಥಾನದಲ್ಲಿ ನಡೆಯುವ ಅನ್ನಸಂತರ್ಪಣೆ ಕೂಡ ನಡೆಯುವುದಿಲ್ಲ ಎಂದು ದೇಗುಲದ ಮುಖ್ಯ ಕಾರ್ಯ ನಿರ್ವಣಾಧಿಕಾರಿ ರವೀಂದ್ರ ಎಂ. ಎಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದರೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೇತುಗ್ರಸ್ತಚಂದ್ರ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ದೇವಾಲಯದ ನಡೆಯುವ ವಿಧಿವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಎಂದಿನಂತೆ ನಾಳೆ ಶ್ರೀ ಕ್ಷೇತ್ರದಲ್ಲಿ ಧರ್ಮಸ್ಥಳದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಲಿದೆ..ಅನ್ನ ಸಂತರ್ಪಣೆಯೂ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸಂಜೆ 5:30 ರಿಂದ 7:30 ರವರೆಗೆ ದೇವಾಲಯದಲ್ಲಿ ಗ್ರಹಣ ಶಾಂತಿ ಹೋಮ ನಡೆಯಲಿದೆ. ಸಂಜೆ 7:30 ಕ್ಕೆ ಸರಿಯಾಗಿ ದೇವಾಲಯದ ಬಾಗಿಲು ಮುಚ್ಚಲಿದೆ. ಜುಲೈ28 ರಂದು ಮಂಜಾನೆ ದೇವಾಲಯವನ್ನು ಶುದ್ಧಗೊಳಿಸಿ ನಂತರ ಪೂಜೆ ನೆರವೇರಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications