ವಿಜಯಾ ಬ್ಯಾಂಕ್ ವಿಲೀನ: ದಕ್ಷಿಣ ಕನ್ನಡ ಜಿಲ್ಲಾ ಬಂದ್ ನೀರಸ
ಮಂಗಳೂರು, ಜನವರಿ 09: ವಿಜಯಾ ಬ್ಯಾಂಕ್ ವಿಲೀನ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕರೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರು ಸೇರಿದತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಂದ್ ಕರೆಗೆ ಯಾವ ರೀತಿಯಲ್ಲೂ ಸ್ಪಂದನೆ ದೊರೆತಿಲ್ಲ.
ಭಾರತ್ ಬಂದ್ LIVE: ಬಿಎಂಟಿಸಿ ಬಸ್ ಸಂಪೂರ್ಣ ಸ್ಥಗಿತ
ಮಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಜನಜೀವನ ಸಾಮಾನ್ಯ ವಾಗಿದೆ. ವಿಜಯಾ ಬ್ಯಾಂಕ್ ಅನ್ನು ಬ್ಯಾಂಕ್ ಆಫ್ ಬರೋಡಾ, ದೇನಾ ಬ್ಯಾಂಕ್ನೊಂದಿಗೆ ವಿಲೀನ ಮಾಡುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ ಜವನರಿ 9ರಂದು ಮಂಗಳೂರು ಬಂದ್ಗೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕರೆ ನೀಡಿತ್ತು.
ಭಾರತ ಬಂದ್ ಗೆ ಕರಾವಳಿಯಲ್ಲಿ ಇಂದು ಕೂಡ ನೀರಸ ಪ್ರತಿಕ್ರಿಯೆ
ಇದೀಗ ಯುವ ಕಾಂಗ್ರೆಸ್ ಕರೆನೀಡಿದ್ದ ಜಿಲ್ಲಾ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಖಾಸಗಿ, ಸರ್ಕಾರಿ ಬಸ್ಗಳ ಸಂಚಾರ ಯಥಾ ಸ್ಥಿತಿಯಲ್ಲಿದೆ.
ಟ್ಯಾಕ್ಸಿ ಹಾಗೂ ಕ್ಯಾಬ್ ಸಂಚಾರವೂ ಎಂದಿನಂತೆ ಮುಂದುವರೆದಿದೆ. ಅಂಗಡಿ- ಮುಂಗಟ್ಟು , ಹೋಟೆಲ್ ಗಳು ಎಂದಿನಂತೆ ತೆರೆದಿವೆ. ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿದೆ.