ಕಲ್ಲಡ್ಕ ಮುಸ್ಲಿಂ ಯುವಕರ ಮೇಲೆ ದಾಳಿಯಲ್ಲಿ ಪ್ರಭಾಕರ್ ಭಟ್ ಕೈವಾಡ?
ಮಂಗಳೂರು, ಮೇ 30 : ಕಲ್ಲಡ್ಕ ಚೂರಿ ಇರಿತ ಪ್ರಕರಣದಲ್ಲಿ ಮಿಥುನ್ ಮತ್ತಿತರರು ಭಾಗಿಯಾಗಿಲ್. ಅವರ ಮೇಲೆ ದಾಖಲಿಸಿರುವ ಪ್ರಕರಣ ಕೈ ಬಿಡಬೇಕು ಎಂದು ಪ್ರಭಾಕರ ಭಟ್ ಪೊಲೀಸರ ಮೇಲೆ ಒತ್ತಡ ಹಾಕುತ್ತಿರುವುದು ಖಂಡನೀಯ ಎಂದು ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೊಡಾಜೆ ಆರೋಪಿಸಿದ್ದಾರೆ.
ಮೇ 26ರಂದು ನಮಾಝ್ ಮುಗಿಸಿ ಮನೆಗೆ ತೆರಳುತ್ತಿದ್ದ ಮುಹಮ್ಮದ್ ಹಾಶಿರ್ ಮತ್ತು ಮುಹಮ್ಮದ್ ಮಾಶೂಕ್ ಮೇಲೆ ಕಾರಿನಲ್ಲಿ ಬಂದು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಕೃತ್ಯದಲ್ಲಿ ಪ್ರಭಾಕರ್ ಭಟ್ ಅವರ ಕೈವಾಡವಿರುವ ಸಾಧ್ಯತೆ ಇದೆ. ಹಾಗಾಗಿ ತಕ್ಷಣ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಹನೀಫ್ ಖಾನ್ ಕೊಡಾಜೆ ಆಗ್ರಹಿಸಿದರು. [ಕಲ್ಲಡ್ಕದಲ್ಲಿ ಮುಸ್ಲಿಂ ಯುವಕರ ಮೇಲೆ ಹಿಂದೂಗಳ ಹಲ್ಲೆ]
ಪೊಲೀಸ್ ಇಲಾಖೆ ಮಿಥುನ್ ನ ಮೇಲೆ ಗೂಂಡಾ ಕಾಯ್ದೆ ದಾಖಲಿಸಬೇಕು ಮತ್ತು ಆತನನ್ನು ಗಡಿಪಾರು ಮಾಡಬೇಕು. ಇನ್ನು ಪ್ರಕರಣವನ್ನು ಅತ್ಯಂತ ಚಾಕಚಕ್ಯತೆಯಿಂದ ನಿಭಾಯಿಸಿ ಜಿಲ್ಲಾ ಎಸ್ಪಿ ಭೂಷಣ್ ಗುಲಾಬ್ ರಾವ್ ಬೊರಸೆಗೆ ಅಭಿನಂದನೆ ಸಲ್ಲಿಸಿದರು.
Comments
English summary
I think Kalladka Bhat is directly involved in the attack, and the accused are under his protection. Kalladka Bhat should be arrested and investigation should be done”, said the district president of SDPI Haneef Kodaje in a press meet held at Hotel Woodlands here on May 30.
Story first published: Tuesday, May 30, 2017, 19:10 [IST]