'ಪ್ರಿಯಾಂಕಾ ಸತ್ಯಾಸತ್ಯತೆಯ ಬಗ್ಗೆ ದೇಶದ ಜನರಿಗೆ ಅರಿವಿದೆ'
ಮಂಗಳೂರು, ಜನವರಿ 25: ದೇಶದಲ್ಲೇ ಅತ್ಯಂತ ದೊಡ್ಡ ಭೂ ಹಗರಣ ನಡೆಸಿರುವ ಗಾಂಧಿ ಕುಟುಂಬದ ಅಳಿಯ ರಾಬರ್ಟ್ ವಾಡ್ರಾ ಅವರ ಪತ್ನಿ ಪ್ರಿಯಾಂಕಾ ವಾಡ್ರಾ ಅವರನ್ನು ಈಗ ಕಾಂಗ್ರೆಸ್ ಸಕ್ರೀಯ ರಾಜಕಾರಣಕ್ಕೆ ತಂದಿದೆ. ಪ್ರಿಯಾಂಕಾ ಅವರ ಸತ್ಯಾಸತ್ಯತೆಯ ಬಗ್ಗೆ ದೇಶದ ಜನರಿಗೆ ಅರಿವಿದೆ ಎಂದು ಸಂಸದ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯ ಬಿ.ಸಿ.ರೋಡ್ ನಲ್ಲಿ ನಡೆದ ಪ್ರಧಾನಮಂತ್ರಿ ಉಜ್ವಲ ಅಡಿಗೆ ಅನಿಲ ವಿತರಣೆ ಹಾಗೂ ಫಲಾನುಭವಿಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ ಬಂದೊಡನೆ ಮೋದಿ ಅವರಿಗೆ ದಿಗಿಲು ಬಡಿದಂತಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಮರೆತಿದ್ದಾರೆ. ಆದರೆ ಪ್ರಿಯಾಂಕಾ ಯಾರು? ಅವರ ಹಿನ್ನೆಲೆ ಏನು? ಅವರ ಪತಿಯ ಹಿನ್ನೆಲೆ ಏನು? ಎಂಬುದು ದೇಶದ ಜನರಿಗೆ ಈಗಾಗಲೇ ಅರಿವಾಗಿದೆ ಎಂದು ಕಿಡಿಕಾರಿದರು.
ಎಸಿ ರೂಂನಲ್ಲಿ ಕುಳಿತು ಅಧ್ಯಯನ ನಡೆಸಿದ ಕಾಂಗ್ರೆಸ್ ಪಕ್ಷಕ್ಕೆ ಬಡತನದ ಅರಿವಿಲ್ಲ, ಕಡು ಬಡತನದಿಂದಲೇ ಬಂದ ಪ್ರಧಾನಿ ಮೋದಿ ಅವರಿಗೆ ಇರುವ ಬಡತನದ ಅರಿವಿನಿಂದಾಗಿಯೇ ಉಜ್ವಲ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಎಂದರು.

ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವ ರಮೇಶ್ ಜಿಗಜಣಗಿ, ಕೇಂದ್ರವನ್ನು ಆಳಿದ ಕಾಂಗ್ರೆಸ್ ಪಕ್ಷ ಬಡವರ ಹೆಸರು ಹೇಳಿಕೊಂಡು ಮತ ಪಡೆದು ಅಧಿಕಾರ ಪಡೆದುಕೊಂಡಿದೆ. ಆದರೆ ಬಡವರಿಗಾಗಿ ಯಾವುದೇ ಕಾರ್ಯಕ್ರಮಗಳನ್ನು ಹಾಕಿಕೊಂಡಿಲ್ಲ. ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಬಡವರಿಗಾಗಿಯೇ ಸುಮಾರು 40ಕ್ಕೂ ಮಿಕ್ಕಿದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂದು ಮೋದಿ ಅವರನ್ನು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ಉಜ್ವಲ ಅನಿಲ ಯೋಜನೆಯಡಿಯಲ್ಲಿ ನೊಂದಾಯಿತ ಫಲಾನುಭವಿಗಳಿಗೆ ಅಡುಗೆ ಅನಿಲ ವಿತರಣೆ ಮಾಡಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಫಲಾನುಭವಿಗಳು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications