ನಳಿನ್ ಗೆ ಸ್ವಲ್ಪವೂ ಬುದ್ಧಿಯಿಲ್ಲ, ಸಂಸ್ಕಾರವಿಲ್ಲ: ಸಿದ್ದರಾಮಯ್ಯ
ಮಂಗಳೂರು, ನವೆಂಬರ್ 19: ದಕ್ಷಿಣ ಕನ್ನಡ ಸಂಸದ "ನಳಿನ್ ಕುಮಾರ್ ಕಟೀಲ್ ಗೆ ಸ್ವಲ್ಪವೂ ಬುದ್ಧಿಯಿಲ್ಲ, ಸಂಸ್ಕಾರವಿಲ್ಲ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರುವ ವದಂತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಮಧ್ವರಾಜ್ ತೇಜೋವಧೆ ಮಾಡೋಕೆ ಬಿಜೆಪಿಯವರು ಹೀಗೆ ಹೇಳುತ್ತಿದ್ದಾರೆ. ಇಮೇಜ್ ಹಾಳು ಮಾಡೋಕೆ ಇಂಥಹದ್ದನ್ನು ಹುಟ್ಟುಹಾಕುತ್ತಿದ್ದಾರೆ. ಪ್ರಮೋದ್ ಈ ಬಗ್ಗೆ ನೂರು ಬಾರಿ ಸ್ಪಷ್ಟೀಕರಣ ನೀಡಿದ್ದಾರೆ," ಎಂದು ವಿವರಣೆ ನೀಡಿದರು.

ಈ ಸಂದರ್ಭ ಪಕ್ಕದಲ್ಲೇ ಇದ್ದ ಪ್ರಮೋದ್ ಮಧ್ವರಾಜ್ ರನ್ನು ಕರೆದ ಸಿಎಂ, ಏನಯ್ಯಾ ಬಿಜೆಪಿಗೆ ಹೋಗ್ತ್ಯಾ? ಎಂದು ಪ್ರಶ್ನಿಸಿದರು. ಸಿಎಂ ಜತೆ ಧ್ವನಿ ಗೂಡಿಸಿದ ಮಧ್ವರಾಜ್ ಇದೆಲ್ಲಾ ಬಿಜೆಪಿಯ ಸೃಷ್ಟಿಸುತ್ತಿರುವ ಸುಳ್ಳು, ಗೊಂದಲ ಎಂದು ಹೇಳಿದರು.
"ಸಂಸದ ನಳಿನ್ ಕುಮಾರ್ ಕಟೀಲ್ ಏನು ಮಾತಾಡುತ್ತಾರೆ ಅಂತ ಅವರಿಗೇ ಗೊತ್ತಿಲ್ಲ. ಅವರಿಗೆ ಸ್ವಲ್ಪವೂ ಬುದ್ಧಿಯಿಲ್ಲ; ಸಂಸ್ಕಾರವಿಲ್ಲ," ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
"ನನ್ನ ಜತೆ ಬೇಕಾದಷ್ಟು ಮಂದಿ ಬಿಜೆಪಿಯವರು ಸಂಪರ್ಕದಲ್ಲಿದ್ದಾರೆ. ಬಹಳಷ್ಟು ಜನ ಆರ್.ಎಸ್.ಎಸ್ ನವರೂ ಇದ್ದಾರೆ. ಅದನ್ನೆಲ್ಲಾ ಹೇಳಲು ಆಗುತ್ತದಾ?" ಎಂದು ಪ್ರಶ್ನಿಸಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications