Breaking:ಇದು ಹಿಂದುತ್ವ ವಿರೋಧಿ ಸರಕಾರ; ಪ್ರಮೋದ್ ಮುತಾಲಿಕ್ ಆಕ್ರೋಶ
ಮಂಗಳೂರು, ಜುಲೈ 29: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸದಂತೆ ನಿಷೇಧಾಜ್ಞೆ ಹೊರಡಿಸಿರುವ ಬಗ್ಗೆ ಆಕ್ರೋಶ ಹೊರ ಹಾಕಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇದು ಹಿಂದುತ್ವ ವಿರೋಧಿ ಸರಕಾರ ಎಂದಿದ್ದಾರೆ.
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ದ.ಕ ಜಿಲ್ಲೆ ಪ್ರವೇಶಿಸದಂತೆ ಹೆಜಮಾಡಿಯಲ್ಲಿ ಪೊಲೀಸರು ತಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ನಗರ ಮ್ಯಾಜಿಸ್ಟ್ರೇಟ್ ಮುತಾಲಿಕ್ ವಿರುದ್ಧ ನಿಷೇಧಾಜ್ಞೆ ಹೊರಡಿಸಿದ್ದಾರೆ.
ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬದವರನ್ನು ಭೇಟಿಯಾಗಲು ಉಡುಪಿಯಿಂದ ಹೊರಟಿದ್ದ ಅವರನ್ನು ಹೆಜಮಾಡಿಯಲ್ಲಿ ಪೊಲೀಸರು ತಡೆ ಹಿಡಿದಿದ್ದಾರೆ.

ಈ ಬಗ್ಗೆ ಕಿಡಿ ಕಾರಿರುವ ಅವರು ಸರಕಾರವನ್ನು ಟೀಕಿಸಿ ವಿಡಿಯೋ ಬಿಡುಗಡೆ ಮಾಡಿದ್ದಾರೆ.
"ಇವತ್ತು ನಾನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದ ಹಿಂದೂ ಕಾರ್ಯಕರ್ತನ ಹತ್ಯೆ ಹಿನ್ನೆಲೆ ಅವರ ತಂದೆ ತಾಯಿ, ಸಹೋದರಿ ಹೆಂಡತಿಗೆ ಸಾಂತ್ವನ ಹೇಳಲು ಉಡುಪಿಯಿಂದ ಹೊರಟೆ. ನನ್ನನ್ನು ಹೆಜಮಾಡಿಯಲ್ಲಿ ಪೊಲೀಸರು ತಡೆದಿದ್ದಾರೆ. ಪೊಲೀಸರು ಜಿಲ್ಲಾಧಿಕಾರಿ ನನ್ನನ್ನು ಬ್ಯಾನ್ ಮಾಡಿರುವ ಆದೇಶ ಪತ್ರವನ್ನು ತೋರಿಸಿ ನನ್ನ ತಡೆದಿದ್ದಾರೆ. ಇವರು ತಡೆಯುತ್ತಿರುವುದು ಪ್ರಮೋದ್ ಮುತಾಲಿಕ್ ಅವರನ್ನಲ್ಲ. ಹಿಂದು ನಾಯಕನನ್ನು, ಹಿಂದುತ್ವವನ್ನು ತಡೆಯುತ್ತಿದ್ದಾರೆ. ಹಿಂದೂ ವಿರೋಧಿ ನೀತಿ ತೋರಸುತ್ತಿದ್ದಾರೆ' ಎಂದರು.
"ಕಾಂಗ್ರೆಸ್ ಸರಕಾರ ನನ್ನನ್ನು ತಡೆದಿದ್ದರೇ ಒಪ್ಪಬಹುದಿತ್ತು. ಕಾಂಗ್ರೆಸ್ ಹಿಂದೂ ವಿರೋಧಿ. ಮುಸ್ಲಿಂ ಓಲೈಕೆಯಲ್ಲಿ ಬಂದಂತಹ ಕಾಂಗ್ರೆಸ್ ನನ್ನನ್ನು ಹಲವು ಜಿಲ್ಲೆಗಳಲ್ಲಿ ಹಲವು ಬಾರಿ ಬ್ಯಾನ್ ಮಾಡಿದೆ. ಅದರ ವಿರುದ್ಧ ನಾನು ಪ್ರತಿಭಟಿಸಿದ್ದೇನೆ. ಅವರನ್ನು ಒಪ್ಪುತ್ತೇನೆ. ಆದರೆ, ಹಿಂದೂತ್ವದ ಆಧಾರದ ಮೇಲೆ, ಹಿಂದೂಗಳ ಮತಗಳ ಆಧಾರದಲ್ಲಿ ಬಂದಂತ ನೀವು ಹಿಂದು ನಾಯಕನನ್ನು , ಹಿಂದುತ್ವ ವಿರೋಧಿಯಾಗಿ ನನ್ನನ್ನು ತಡೆದಿದ್ದಿರಿ. ನಿಮ್ಮದೆ ಪಕ್ಷದ ಕಾರ್ಯಕರ್ತರೇ ಸಾವಿರಾರು ಸಂಖ್ಯೆಯಲ್ಲಿ ರಾಜೀನಾಮೆ ಕೊಟ್ಟು ನಿಮ್ಮನ್ನು ಉಗಿಯುತ್ತಿದ್ದಾರೆ" ಎಂದು ಆಕ್ರೋಶ ಹೊರಹಾಕಿದರು.

ಪ್ರವೀಣ್ ನೆಟ್ಟಾರು ಅವರ ಕುಟುಂಬವನ್ನು ಭೇಟಿಯಾಗಲು ಬಯಸಿದ್ದ ಪ್ರಮೋದ್ ಮುತಾಲಿಕ್ ಅವರನ್ನು ನಗರದ ಪರಿಸ್ಥಿತಿಯ ಸೂಕ್ಷ್ಮತೆಯನ್ನು ಪರಿಗಣಿಸಿ ಅವರ ಪ್ರವೇಶವನ್ನು ನಿರಾಕರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರವೇಶ ನಿರಾಕರಣೆ ಹಿನ್ನೆಲೆ ಪ್ರಮೋದ್ ಮುತಾಲಿಕ್ ಮತ್ತು ಅವರ ಶ್ರೀರಾಮ ಸೇನೆ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
Recommended Video
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications