ಕರಾವಳಿಗರ ಬಹು ನಿರೀಕ್ಷಿತ ಕಂಬಳ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ
ನವದೆಹಲಿ, ಜುಲೈ 3: ಕರಾವಳಿ ಕರ್ನಾಟಕದ ಕಂಬಳ ಪ್ರೀಯರ ಬಹು ನಿರೀಕ್ಷಿತ ಕಂಬಳ ವಿಧೇಯಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಈ ಮೂಲಕ ಕಂಬಳ ಆಚರಣೆಗೆ ಇದ್ದ ಎಲ್ಲಾ ಅಡೆತಡೆಗಳು ನಿವಾರಣೆಯಾಗಿದೆ.
ಇಂದು ರಾಷ್ಟ್ರಪತಿಗಳು 'ಕರ್ನಾಟಕ ಪ್ರಾಣಿ ಹಿಂಸಾಚಾರ ತಡೆಗಟ್ಟುವ (ತಿದ್ದುಪಡಿ) ವಿಧೇಯಕ - 2017'ಕ್ಕೆ ಅಂಕಿತ ಹಾಕುವ ಮೂಲಕ ತುಳುನಾಡಿನ ಜಾನಪದ ಕ್ರೀಡೆಗೆ ಮತ್ತೆ ಚಾಲನೆ ದೊರಕಿದಂತಾಗಿದೆ. ಇದರ ಜತೆಗೆ ಉತ್ತರ ಕರ್ನಾಟಕದ ಎತ್ತಿನಗಾಡಿ ಓಟಕ್ಕೂ ಹಾದಿ ಸುಗಮವಾಗಿದೆ.

ಈ ಹಿಂದೆ ರಾಜ್ಯ ಸರ್ಕಾರ ವಿಧಾನ ಮಂಡಲದಲ್ಲಿ ಕಂಬಳ ತಿದ್ದುಪಡಿ ವಿಧೇಯಕ ಮಂಡಿಸಿತ್ತು. ಎಲ್ಲರ ಒಮ್ಮತಾಭಿಪ್ರಾಯದಿಂದ ಈ ವಿಧೇಯಕವನ್ನು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಿಕೊಡಲಾಗಿತ್ತು.

ಆದರೆ, ಇದು ಕೇಂದ್ರದ ವಿಷಯವಾಗಿದ್ದರಿಂದ ರಾಜ್ಯಪಾಲರು ಪ್ರಸ್ತಾವನೆಯನ್ನು ರಾಷ್ಟ್ರಪತಿಗಳ ಅಂಗೀಕಾರಕ್ಕೆ ಕಳುಹಿಸಿದ್ದರು. ಇದೀಗ ಇಂದು ಕಂಬಳ ತಿದ್ದುಪಡಿ ವಿಧೇಯಕಕ್ಕೆ ರಾಷ್ಟ್ರಪತಿ ಸಹಿ ಹಾಕಿದ್ದಾರೆ.
ಈ ಮೂಲಕ ತುಳುನಾಡಿನ ಕೋಣಗಳು ಮತ್ತೆ ಕೆಸರು ಗದ್ದೆಗಿಳಿಯಲಿದ್ದು ಕಂಬಳ ಪ್ರೀಯರ ಕಣ್ಮನ ತಣಿಸಲಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications