ಡಿಜಿಟಲ್ ಮಾಧ್ಯಮಗಳಲ್ಲಿ ಹೆಚ್ಚಿನ ಅವಕಾಶಗಳಿವೆ: ಹಿರಿಯ ಪತ್ರಕರ್ತ ಕುಮಾರನಾಥ್
ಮೂಡುಬಿದಿರೆ, ಜುಲೈ 24: ಪತ್ರಿಕೋದ್ಯಮದ ಅಸ್ಮಿತೆ ಮುದ್ರಣಾ ಮಾಧ್ಯಮದಲ್ಲಿ ಅಡಗಿದ್ದು, ಪತ್ರಿಕೋದ್ಯಮದ ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನವನ್ನು ಮುದ್ರಣ ಮಾಧ್ಯಮದಲ್ಲಿ ಪ್ರಾರಂಭಿಸಿದರೆ, ಮಾಧ್ಯಮ ಲೋಕದಲ್ಲಿ ಉನ್ನತ ಸ್ಥಾನವನ್ನು ಏರಬಹುದು ಎಂದು ಹಿರಿಯ ಪತ್ರಕರ್ತ ಯು.ಕೆ. ಕುಮಾರನಾಥ್ ತಿಳಿಸಿದರು.
ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಇಂದು ಕುವೆಂಪು ಸಭಾಭವನದಲ್ಲಿ ಆಯೋಜಿಸಿದ್ದ 'ಪತ್ರಿಕಾ ದಿನಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದಿಟ್ಟತನ ಹಾಗೂ ನೇರನುಡಿ ಪತ್ರಕರ್ತರಿಗೆ ಇರಬೇಕಾದ ಪ್ರಮುಖ ಗುಣಗಳಾಗಿದ್ದು, ಹೊಸತನದ ಆಳವಡಿಕೆ ಪ್ರತಿ ಹಂತದಲ್ಲೂ ಅಗತ್ಯವಿದೆ ಎಂದು ಹೇಳಿದರು. ನವಮಾಧ್ಯಮಗಳ ಅನ್ವೇಷಣೆಯಿಂದ ಪತ್ರಿಕೋದ್ಯಮ ಎಂಬ ಕ್ಷೇತ್ರ ವಿಸ್ತಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಮಾಧ್ಯಮಗಳಲ್ಲಿ ಹೆಚ್ಚಿನ ಅವಕಾಶಗಳು ಲಭ್ಯವಿದ್ದು, ಆ ಕ್ಷೇತ್ರಕ್ಕೆ ಬೇಕಾದ ಕೌಶಲ್ಯಗಳನ್ನು ಬೆಳಸಿಕೊಳ್ಳುವ ಅಗತ್ಯವಿದೆ. ನಿರಂತರ ಓದು, ವಿಷಯ ಜ್ಞಾನ, ಸೃಜನಾಶೀಲತೆ, ಪಾರದರ್ಶಕತೆ ಮಾತ್ರ ಉತ್ತಮ ಪತ್ರಕರ್ತರನ್ನು ಸೃಷ್ಟಿಸಬಲ್ಲದು ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಮ್. ಮೋಹನ ಆಳ್ವ ' ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಬಹುಮುಖ್ಯವಾಗಿದ್ದು, ಪತ್ರಕರ್ತರು ರಚನಾತ್ಮಕ ಬರವಣಿಗೆಯ ಮೂಲಕ ಸುಸ್ಥಿರ ಸಮಾಜ ನಿರ್ಮಿಸಲು ಶ್ರಮಿಸಬೇಕು ಎಂದು ಹೇಳಿದರು.
ಮಾಧ್ಯಮ ಜನರ ಮನಸ್ಸನ್ನು ಕಟ್ಟುವ ಕೆಲಸಮಾಡಬೇಕೇ ಹೊರತು, ಮನಸ್ಸನ್ನು ಒಡೆಯುವ, ಸಮಾಜದಲ್ಲಿ ಅಶಾಂತಿಯನ್ನು ನಿರ್ಮಿಸುವ ಕೆಲಸದಲ್ಲಿ ತೊಡಗಬಾರದು ಎಂದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications