ಮಂಗಳೂರು ಕಾರಾಗೃಹದಿಂದ ಕೈದಿ ಪರಾರಿ: ಜೈಲು ಅಧೀಕ್ಷಕ ವರ್ಗಾವಣೆ
ಮಾರ್ಚ್ 12ರಂದು ಜೈಲಿನಿಂದ ತಪ್ಪಿಸಿಕೊಂಡಿದ್ದ ಕೈದಿ; ಪ್ರಕರಣದ ತನಿಖೆಯಲ್ಲಿ ಸಿಬ್ಬಂದಿ ಕರ್ತವ್ಯ ಲೋಪ ಸಾಬೀತು; ಅಧೀಕ್ಷಕ ಕೃಷ್ಣಮೂರ್ತಿಗೆ ವರ್ಗಾವಣೆ ಶಿಕ್ಷೆ; ವಾರ್ಡನ್ ಗಳ ಅಮಾನತು.
ಮಂಗಳೂರು : ನಗರದ ಕೇಂದ್ರ ಕಾರಾಗೃಹದಿಂದ ಕೈದಿಯೊಬ್ಬ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಅಧಿಕಾರಿಗಳು ಲೋಪ ಎಸಗಿರುವುದು ತನಿಖೆಯಿಂದ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಜೈಲು ಅಧೀಕ್ಷಕ ಕೃಷ್ಣಮೂರ್ತಿ ಅವರನ್ನು ವರ್ಗಾವಣೆ ಮಾಡಲಾಗಿದೆ. ವಾರ್ಡನ್ ಎಸ್ ಕಠಾರಿ ಮತ್ತು ಬಿ ರಂಗಪ್ಪ ಅವರನ್ನೂ ಅಮಾನತು ಮಾಡಲಾಗಿದೆ.
ಜೈಲು ಅಧೀಕ್ಷಕ ಕೃಷ್ಣಮೂರ್ತಿ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ವರ್ಗಾವಣೆ ಮಾಡಲಾಗಿದ್ದರೆ, ಮಂಗಳೂರು ಉಪಕಾರಾಗೃಹದ ನೂತನ ಅಧಿಕ್ಷಕರಾಗಿ ಬೆಂಗಳೂರು ಪರಪ್ಪನ ಅಗ್ರಹಾರದಿಂದ ಸುರೇಶ್ ಅವರನ್ನು ನೇಮಕ ಮಾಡಿ ಬಂಧೀಖಾನೆ ಡಿಜಿಪಿ ಎಚ್ ಎನ್ ಸತ್ಯನಾರಾಯಣ ರಾವ್ ಆದೇಶ ಹೊರಡಿಸಿದ್ದಾರೆ.

ಮಂಗಳೂರು ಸಬ್ಜೈಲಿನಲ್ಲಿದ್ದ ಅತ್ಯಾಚಾರ ಯತ್ನ ಪ್ರಕರಣದ ವಿಚಾರಣಾಧೀನ ಕೈದಿ ಜಿನ್ನಪ್ಪ ಪರವ (43) ಮಾರ್ಚ್ 10ರಂದು ಮುಂಜಾನೆ 3.30ರ ಸುಮಾರಿಗೆ ಜೈಲಿನಿಂದ ಪರಾರಿಯಾಗಿದ್ದ. ಫೆ 12ರಂದು ಈ ಪ್ರಕರಣದ ವಿಶೇಷ ತನಿಖೆಗೆ ನಿಯೋಜನೆಗೊಂಡಿದ್ದ ಬೆಳಗಾವಿ ಡಿಐಜಿ ಟಿ ಪಿ ಶೇಷ ನೇತೃತ್ವದ ತಂಡ ಕಾರಾಗೃಹಕ್ಕೆ ಭೇಟಿ ನೀಡಿ ತನಿಖೆಯನ್ನು ನಡೆಸಿತ್ತು.
ಈ ತಂಡದಲ್ಲಿ ವಿಶೇಷ ಅಧಿಕಾರಿ ಎಸ್ ಆರ್ ಭಟ್ ಕೂಡಾ ಇದ್ದರು. ಬೆಳಿಗ್ಗೆ 8.15ಕ್ಕೆ ಜೈಲಿನೊಳಗೆ ಬಂದಿದ್ದ ಅಧಿಕಾರಿಗಳ ತಂಡ ಸುಮಾರು ಒಂದು ಗಂಟೆಯವರೆಗೂ ವಿಚಾರಣೆಯನ್ನು ಮುಂದುವರಿಸಿತ್ತು. ಅಲ್ಲಿನ ಇತರೆ ವಿಚಾರಣಾಧೀನ ಕೈದಿಗಳಿಂದಲೂ ಮಾಹಿತಿಯನ್ನು ಪಡೆದುಕೊಂಡಿತ್ತು.

ಜೈಲಿನಲ್ಲಿ ಭದ್ರತೆ ಕೊರತೆ ಇದೆ, ಲೋಪ ಎಸಗಲಾಗಿದೆ ಎನ್ನುವ ಸಮಗ್ರ ವರದಿಯನ್ನು ಬಂಧೀಖಾನೆ ಡಿಜಿಪಿ ಸತ್ಯನಾರಾಯಣ ಅವರಿಗೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಡಿಜಿಪಿ ಅವರು ಇದೀಗ ಅಧೀಕ್ಷಕ ಮತ್ತು ವಾರ್ಡನುಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications