ಬೆಳ್ತಂಗಡಿ: ಬ್ಯಾಂಕ್ ವಿರುದ್ಧ ಎಂಡೋಸಲ್ಫಾನ್ ಸಂತ್ರಸ್ತರ ಆಕ್ರೋಶ
ಮಂಗಳೂರು, ಜನವರಿ. 25 : ಎಂಡೋಸಲ್ಫಾನ್ ಪೀಡಿತ ಸಂತ್ರಸ್ತರಿಗೆ ಮಾಸಿಕ ವೇತನ ಜಮೆ ಮಾಡಲು ಬ್ಯಾಂಕ್ ಅಧಿಕಾರಿಯೊಬ್ಬರ ನಿರ್ಲಕ್ಷ್ಯ ಧೋರಣೆ ವಿರುದ್ಧ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಎಂಡೋ ಸಂತ್ರಸ್ಥರ ಕುಟುಂಬ ಸಿಡಿದೆದ್ದಿದೆ
ಬೆಳ್ತಂಗಡಿ ತಾಲೂಕಿನಲ್ಲಿ ಎಂಡೋಸಲ್ಫಾನ್ ಹಾಗೂ ವಿಕಲಚೇತನರಿಗೆ ಸರಿಯಾದ ಸಮಯಕ್ಕೆ ಮಾಸಿಕ ವೇತನ ಮುಟ್ಟುತ್ತಿಲ್ಲ. ಹಾಗೂ ಪುಂಜಾಲ ಕಟ್ಟೆಯ ಬ್ಯಾಂಕ್ ಅಧಿಕಾರಿಯೊಬ್ಬರು ಕಳೆದ ಹಲವು ತಿಂಗಳಿನಿಂದ ಸಂತ್ರಸ್ಥರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.[ಎಂಡೋಸಲ್ಫನ್ ಪೀಡಿತ ಒಂದೇ ಕುಟುಂಬದ ಐದು ಜನರು ಆತ್ಮಹತ್ಯೆ]

ಸಂತ್ರಸ್ಥರಿಗೆ ತಕ್ಷಣವೇ ಸ್ಪಂದಿಸುವ ಮೂಲಕ ಅವರ ನೆರವಿಗೆ ನಿಲ್ಲಬೇಕಾದ ಈ ಬ್ಯಾಂಕ್ ಅಧಿಕಾರಿ ಹಣ ಹಾಕದೇ ನಿರ್ಲಕ್ಷ್ಯ ತಾಳಿದ್ದಾರೆ ಎನ್ನಲಾಗಿದೆ. ಸುಮಾರು 7 ತಿಂಗಳ ಹಿಂದೆ ಹಾಗೂ ಇದೀಗ 2-3 ತಿಂಗಳಿನಿಂದ ಮಾಸಿಕ ವೇತನವನ್ನು ಸಂತ್ರಸ್ಥರ ಬ್ಯಾಂಕ್ ಖಾತೆಗೆ ಜಮೆ ಮಾಡಲು ನಿರಾಕರಿಸುತ್ತಿದ್ದಾರೆ .
ಹೀಗಾಗಿ ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗು ಎಂಡೋಸಲ್ಫಾನ್ ಸಂತ್ರಸ್ಥರಿಗೆ ತಕ್ಷಣವೇ ಸ್ಪಂದಿಸುವ ಮೂಲಕ ಸಮಸ್ಯೆಯನ್ನು ಪರಿಹರಿಸಬೇಕು ಎಂಬ ಆಗ್ರಹ ಕೇಳಿ ಬಂದಿದೆ.[ಎಂಡೋಸಲ್ಫಾನ್ ಸಂತ್ರಸ್ತರಿಗೆ ಮಾಸಿಕ ಸ್ಟೈಪೆಂಡ್]
ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ 92 ಗ್ರಾಮದಲ್ಲಿ ಎಂಡೋ ಪೀಡಿತರಿದ್ದು , ಕೆಲ ದಿನಗಳ ಹಿಂದೆಯಷ್ಟೇ ಮಾನಸಿಕವಾಗಿ ನೊಂದ ಕುಟುಂಬದ ನಾಲ್ವರು ಆತ್ಮಹತ್ಯೆ ಕೂಡಾ ಮಾಡಿಕೊಂಡಿದ್ದರು.
ಇಷ್ಟೆಲ್ಲಾ ಆದರೂ ಎಂಡೋ ಪೀಡಿತರನ್ನು ನಿರ್ಲಕ್ಷ್ಯದಿಂದ ಕಾಣಲಾಗುತ್ತಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಮತ್ತು ರಾಜಕಾರಣಿಗಳು ಸ್ಪಂಧಿಸಿ ಸಂತ್ರಸ್ತರಿಗೆ ಆಸರೆಯಾಗಬೇಕಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications