ಪಿಲಿಕುಳ ನಿಸರ್ಗಧಾಮಕ್ಕೆ ಖಾಸಗಿ ವಾಹನ ಪ್ರವೇಶ ಇಲ್ಲ
ಮಂಗಳೂರು, ಮೇ 29: ಮಂಗಳೂರಿನ ಪ್ರಸಿದ್ಧ ಪಿಲಿಕುಳ ನಿಸರ್ಗಧಾಮದಲ್ಲಿ ಖಾಸಗಿ ವಾಹನ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಿಸರ್ಗಧಾಮದಲ್ಲಿ ಸುತ್ತಾಡಲು ಬಗ್ಗಿಗಳ (ವೀಕ್ಷಣಾ ವಾಹನ) ವ್ಯವಸ್ಥೆ ಮಾಡಲಾಗಿರುವ ಹಿನ್ನೆಲೆಯಲ್ಲಿ ಖಾಸಗಿ ವಾಹನ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ನಿಸರ್ಗಧಾಮದ ಪ್ರವೇಶ ದ್ವಾರದಲ್ಲೇ ನಿರ್ಮಿಸಲಾದ ಕೌಂಟರ್ಗಳಲ್ಲಿ ಪ್ರವಾಸಿಗರ ವಿಹಾರದ ವಾಹನಗಳಿಗೆ ಟಿಕೆಟ್ ಲಭ್ಯವಿದೆ. ಹಾಗಾಗಿ ಈಗ ಖಾಸಗಿ ವಾಹನಗಳಿಗೆ ನಿಸರ್ಗಧಾಮದೊಳಗೆ ಪ್ರವೇಶವಿಲ್ಲ. ಬಸ್ಗಳಲ್ಲಿ ಹಾಗೂ ಇತರ ವಾಹನಗಳಲ್ಲಿ ಆಗಮಿಸುವ ಪ್ರವಾಸಿಗರು ಕೌಂಟರ್ನಲ್ಲಿ ನಿಸರ್ಗಧಾಮದೊಳಗೆ ಪ್ರವೇಶದ ಟಿಕೆಟ್ ಪಡೆಯಬೇಕು. ಅಗತ್ಯವಿದ್ದಲ್ಲಿ ಬಗ್ಗಿಗಳಿಗಾಗಿ ಟಿಕೆಟ್ ಪಡೆಯಬಹುದು. ರಾಜ್ಯದ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಒಂದು ಕೋಟಿ ರೂಪಾಯಿಯ ನೆರವಿನಿಂದ ಬ್ಯಾಟರಿ ಚಾಲಿತ ಬಗ್ಗಿ ಸೇವೆ ಆರಂಭಿಸಲಾಗಿದೆ. ಈ ದೊಡ್ಡ ವಾಹನಗಳಲ್ಲಿ 10 ಮಂದಿ ಪ್ರಯಾಣಿಸಲು ಸ್ಥಳಾವಕಾಶವಿದೆ.

ಪ್ರಾಣಿ ಸಂಗ್ರಹಾಲಯದಲ್ಲಿ ಸುತ್ತಾಡಬೇಕಿದ್ದರೆ, ಪ್ರವಾಸಿಗರು ಒಳಗಿರುವ ಸಣ್ಣ ಬಗ್ಗಿಗಳ ಸೇವೆ ಪಡೆಯಬಹುದು. ಇದಕ್ಕೆ ಪ್ರತ್ಯೇಕ ಟಿಕೆಟ್ ಇದೆ. ಪ್ರವೇಶದ್ವಾರದಲ್ಲಿ ಲಭ್ಯವಿರುವ ಬಗ್ಗಿಗಳಲ್ಲಿ ಮಕ್ಕಳಿಗೆ 10 ರೂಪಾಯಿ ಮತ್ತು ಹಿರಿಯರಿಗೆ 25 ರೂಪಾಯಿ ನಿಗದಿಪಡಿಸಲಾಗಿದೆ. ಇದರಲ್ಲಿ ದಿನವಿಡೀ ಒಂದು ಕಡೆಯಿಂದ ಮತ್ತೊಂದು ಕಡೆಗೆ ಪ್ರಯಾಣಿಸಬಹುದು. ಪ್ರಾಣಿ ಸಂಗ್ರಹಾಲಯದೊಳಗೆ ವೃದ್ಧರು ಮತ್ತು ಮಕ್ಕಳು ಖಾಸಗಿ ಬಗ್ಗಿಗಳಲ್ಲಿ ಪ್ರಯಾಣಿಸಲು ಅವಕಾಶವಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications