ನಾಗಪಾತ್ರಿ ನಾಗರಾಜ್ ಭಟ್ ಗೆ ಪ್ರೊ.ನರೇಂದ್ರ ನಾಯಕ್ ಹಾಕಿದ ಸವಾಲೇನು?
ಮಂಗಳೂರು, ನವೆಂಬರ್. 28: ಉಡುಪಿಯ ಹೆಬ್ರಿ ತಾಲೂಕಿನ ಮುದ್ರಾಡಿ ಎಂಬಲ್ಲಿ ಇತ್ತೀಚೆಗೆ ನಾಗ ಪವಾಡ ನಡೆಯಿತು. ಮಣ್ಣಲ್ಲಿ ಹುದುಗಿದ್ದ ಸಾವಿರಾರು ವರ್ಷ ಹಳೆಯ ನಾಗವಿಗ್ರಹವೊಂದು ಪವಾಡ ಸದೃಶವಾಗಿ ಪತ್ತೆಯಾಗಿದ್ದು, ಶಿವಮೊಗ್ಗದ ತೀರ್ಥಹಳ್ಳಿಯ ಆಧ್ಯಾತ್ಮಿಕ ಚಿಂತಕ ನಾಗಪಾತ್ರಿ ನಾಗರಾಜ್ ಭಟ್ ಹೇಳಿದ ನುಡಿ ಸತ್ಯವಾಗಿತ್ತು. ಈ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಇದೀಗ ನಾಗ ಪವಾಡದ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ಈ ನಡುವೆ ಪವಾಡ ನಡೆಸಿದ ನಾಗಪಾತ್ರಿ ನಾಗರಾಜ್ ಭಟ್ ಅವರಿಗೆ ಖ್ಯಾತ ವಿಚಾರವಾದಿ ಪ್ರೊ.ನರೇಂದ್ರ ನಾಯಕ್ ಸವಾಲು ಹಾಕಿದ್ದಾರೆ. ತಾವು ಒಡ್ಡುವ ಸವಾಲನ್ನು ನಾಗರಾಜ್ ಭಟ್ ಜಯಿಸಿದರೆ ತನ್ನ ಆಸ್ತಿಯನ್ನು ಸಂಪೂರ್ಣ ಅವರಿಗೆ ನೀಡಿ, ಸಾಯುವವರೆಗೆ ಅವರ ಗುಲಾಮನಾಗುವೆ ಎಂದು ಘೋಷಿಸಿದ್ದಾರೆ.
ನಾಗಪಾತ್ರಿ ನಾಗರಾಜ್ ಭಟ್ ಮುದ್ರಾಡಿಯಲ್ಲಿ ಉದ್ಯಮಿ ಗಂಗಾಧರ ಶೆಟ್ಟಿ ಎಂಬುವವರ ಮನೆಯ ಒಳಗೆ ಅಗೆಸಿ ಸಾವಿರಾರು ವರ್ಷ ಹಳೆಯ ನಾಗನ ಮೂರ್ತಿಯನ್ನು ಹೊರತೆಗೆದು ಪವಾಡ ಸೃಷ್ಟಿಸಿದ್ದರು. ಅಷ್ಟೇ ಅಲ್ಲ, ಇದರ ಸತ್ಯಾಸತ್ಯತೆ ಬಗ್ಗೆ ಚರ್ಚೆ ಆರಂಭವಾದ ಬೆನ್ನಿಗೆ ಮಾಧ್ಯಮಗಳ ಮುಂದೆ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಗ್ರಾಮಪಂಚಾಯ್ತಿಯ ಮರಗಳಲೆ ಗ್ರಾಮದ ವೆಂಕಟಪ್ಪ ಪೂಜಾರಿಯವರ ಮಗ ನಾಗಪ್ಪ ಪೂಜಾರಿಯವರ ಮನೆಯ ಹಿಂಭಾಗದ ನಾಗರ ಬನದಲ್ಲಿ ನಾಗಬಿಂಬ ಮತ್ತು ತ್ರಿಶೂಲ ಹೊರತೆಗೆದಿದ್ದರು.
ಈ ಹಿನ್ನೆಲೆಯಲ್ಲಿ ಖ್ಯಾತ ವಿಚಾರವಾದಿ ನರೇಂದ್ರ ನಾಯಕ್ ಈಗ ನಾಗಪಾತ್ರಿ ನಾಗರಾಜ್ ಭಟ್ ಅವರಿಗೆ ಸವಾಲು ಹಾಕಿದ್ದಾರೆ. ಮುಂದೆ ಓದಿ...

ಯಾವ ಪೆಟ್ಟಿಗೆಯಲ್ಲಿ ನಾಗನ ಮೂರ್ತಿ ಇದೆ?
ನಾಗರಾಜ್ ಭಟ್ ನೀಡುವ ನಾಗನ ಕಲ್ಲನ್ನು ಒಂದು ಪೆಟ್ಟಿಗೆಗೆ ಹಾಕಿ ಅದರಲ್ಲಿ ಮಣ್ಣು ತುಂಬಿ. ನಂತರ ಅಷ್ಟೇ ಭಾರವಿರುವ ಅಂತಹದ್ದೇ ಹತ್ತು ಪೆಟ್ಟಿಗೆ ಇಡಲಾಗುವುದು. ನಾಗನ ಮೂರ್ತಿ ಇರುವ ಪೆಟ್ಟಿಗೆಯಲ್ಲಿ ನಾಗನ ಮೂರ್ತಿಗೆ ಒಂದು ಕರೆನ್ಸಿ ನೋಟು ಅಂಟಿಸಲಾಗುವುದು. ಸವಾಲು ಸ್ವೀಕರಿಸಿದ ಜ್ಯೋತಿಷಿ ಯಾವ ಪೆಟ್ಟಿಗೆಯಲ್ಲಿ ನಾಗನ ಮೂರ್ತಿ ಇದೆ ಎಂದು ಹೇಳಬೇಕು.

ಕರೆನ್ಸಿ ಮೌಲ್ಯ ತಿಳಿಸಲಿ
ಜ್ಯೋತಿಷಿಗೆ ಭೂಮಿಯ ಒಳಗಿದ್ದ ನಾಗನ ಮೂರ್ತಿ ಹೇಗಿರುತ್ತದೆ ಎಂದು ಚಿತ್ರ ಬರೆಯುವಷ್ಟು ತಿಳಿದಿರುವುದರಿಂದ ನಾಗನ ಮೂರ್ತಿ ಇಡಲಾದ ಪೆಟ್ಟಿಗೆಯಲ್ಲಿರುವ ಕರೆನ್ಸಿ ಯಾವ ದೇಶದ್ದು, ಅದರ ಮೌಲ್ಯ ಎಷ್ಟು ಮತ್ತು ಅದರ ಸೀರಿಯಲ್ ನಂಬರ್ ಏನು ಎಂಬುದನ್ನು ತಿಳಿಸಬೇಕು.

ಆಸ್ತಿಯನ್ನು ಕೊಡುತ್ತೇನೆ
ಜ್ಯೋತಿಷಿ ಅವರು ಇದನ್ನು ಮಾಡಲು ಸಾಧ್ಯವಾದರೆ ತನ್ನ ಆಸ್ತಿಯನ್ನು ಪೂರ್ತಿ ಅವರಿಗೆ ಕೊಡುತ್ತೇನೆ ಎಂದು ನರೇಂದ್ರ ನಾಯಕ್ ಸವಾಲು ಹಾಕಿದ್ದಾರೆ.

ಈ ಕೆಲಸವನ್ನು ಬಿಡಬೇಕು
ಒಂದು ವೇಳೆ ನಾಗರಾಜ್ ಭಟ್ ಇದರಲ್ಲಿ ವಿಫಲರಾದರೆ ಅವರು ನಾನು ಹೇಳಿದ್ದೆಲ್ಲ ಸುಳ್ಳು ಎಂದು ಘೋಷಿಸಿ ಈ ಕೆಲಸವನ್ನು ಬಿಡಬೇಕು ಎಂದು ಹೇಳಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications