5 ಲಕ್ಷ ಮೌಲ್ಯದ ಆಭರಣ ಹಿಂತಿರುಗಿಸಿದ ಪ್ರಾಮಾಣಿಕ ಆಟೋ ಚಾಲಕ
ಮಂಗಳೂರು, ಆಗಸ್ಟ್ 26: ಪ್ರಾಮಾಣಿಕತೆ, ನೀತಿವಂತಿಕೆಯಿಂದ ಬದುಕುವವರ ಸಂಖ್ಯೆ ಬಹಳ ಕಡಿಮೆ ಆಗ್ತಿದೆ ಎಂಬುದು ಇತ್ತೀಚೆಗೆ ಪದೇಪದೇ ಕೇಳಿಬರುತ್ತಿರುವ ಕಂಪ್ಲೇಂಟು. ಅದರಲ್ಲೂ ಬೇರೆಯವರ ಆಸ್ತಿ, ಹಣ ಸಿಕ್ಕಿದರೆ ಒಳಗೆ ಹಾಕಿಕೊಳ್ಳೋಣ ಅಂತ ಯೋಚಿಸುವವರ ಸಂಖ್ಯೆಯೇ ಹೆಚ್ಚು.
ಅಂತಹದರಲ್ಲಿ ಮಂಗಳೂರಿನ ಆಟೋ ಚಾಲಕ ಪ್ರತಾಪ್ ಶೆಟ್ಟಿ ಅವರು ತಮ್ಮ ಆಟೋದಲ್ಲಿ ಸಿಕ್ಕ 5 ಲಕ್ಷ ರು. ಬೆಲೆ ಬಾಳುವ ಚಿನ್ನಾಭರಣಗಳನ್ನು ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ. ಹಣಕ್ಕಾಗಿ ಹಾಡ ಹಗಲೇ ಕೊಲೆ, ಸುಲಿಗೆ ಮಾಡುವ ದಿನಮಾನದಲ್ಲಿ ಈ ಆಟೋಚಾಲಕ ತಮ್ಮ ಪ್ರಾಮಾಣಿಕತೆ ಮೆರೆದಿದ್ದಾರೆ.[ನನಗೆ ಮಂಗಳೂರು ಇಷ್ಟ. ಮಂಗಳೂರು ಹೆವೆನ್ : ರಮ್ಯಾ]

'ಪರರ ಸೊತ್ತು ಪಾಷಾಣಕ್ಕೆ ಸಮ' ಎಂಬ ಗಾದೆ ಮಾತಿನಂತೆ ತಮಗೆ ಸಿಕ್ಕಿದ ಚಿನ್ನಾಭರಣವನ್ನು ನಿಷ್ಠಾವಂತರಾಗಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ದಂಪತಿ ಆಟೋ ಹಿಡಿದು ಕುಲಾಯಿಯಲ್ಲಿ ನಡೆಯುವ ಮದುವೆ ಸಮಾರಂಭಕ್ಕೆ ತೆರಳುವಾಗ ತಮ್ಮ 5 ಲಕ್ಷ ರು. ಬೆಲೆ ಬಾಳುವ ಚಿನ್ನಾಭರಣಗಳನ್ನು ಮರೆತು ಹೋಗಿದ್ದರು. ದಂಪತಿ ದೀಪ್ತಿ ಮತ್ತು ಪ್ರಶಾಂತ್ ಮೂಲತಃ ಬೆಂಗಳೂರಿನವರು. ಮದುವೆ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಬಂದಿದ್ದರು.[ಮಾಜಿ ಸಂಸದೆ ರಮ್ಯಾ ಕಾರಿಗೆ ಹಿಂದೂ ಸಂಘಟನೆಗಳಿಂದ ಮುತ್ತಿಗೆ]
ಪ್ರತಾಪ್ ಶೆಟ್ಟಿ ಅವರು ಚಿನ್ನಾಭರಣವಿದ್ದ ಬ್ಯಾಗನ್ನು ಯಥಾಸ್ಥಿಯಲ್ಲಿ ಮಂಗಳೂರಿನ ಉತ್ತರ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ. ಅವರ ಪ್ರಾಮಾಣಿಕತೆಯನ್ನು ಮೆಚ್ಚಿದ ಕಮಿಷನರ್ ಎಂ. ಚಂದ್ರಶೇಖರ್ ಅವರು 5000 ರು. ನಗದು ಬಹುಮಾನ ಮತ್ತು ಪ್ರಶಂಸಾ ಪಾತ್ರವನ್ನು ನೀಡಿ, ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications