ಆಟೋ ಚಾಲಕರ ಮೇಲೆ ಹಲ್ಲೆಗೆ ಮುಂದಾದ ಸಚಿವ ಜೈನ್
ಮಂಗಳೂರು, ಡಿ. 30 : ಪ್ರತಿಭಟನೆ ನಡೆಸುತ್ತಿದ್ದ ಆಟೋ ಚಾಲಕರ ಮೇಲೆ ಹಲ್ಲೆ ಮಾಡಲು ಮೀನುಗಾರಿಕಾ ಸಚಿವ ಅಭಯ್ ಚಂದ್ರ ಜೈನ್ ಯತ್ನಿಸಿದ ಘಟನೆ ಮಂಗಳೂರು ಸಮೀಪದ ಮುಲ್ಕಿಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಸಚಿವರ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಾರ್ವಜನಿಕರು ಇದನ್ನು ಖಂಡಿಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ರಸ್ತೆಗಳು ಹದಗೆಟ್ಟಿದ್ದು, ಇದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ ಎಂದು ಆಟೋ ಚಾಲಕರು ಮತ್ತು ವಿವಿಧ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಸಚಿವ ಅಭಯ್ ಚಂದ್ರ ಜೈನ್ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು.

ಇದರಿಂದ ಕೆರಳಿದ ಸಚಿವರು ಪ್ರತಿಭಟನೆ ನಡೆಸುತ್ತಿದ್ದವರ ಬಳಿಗೆ ಬಂದರು. ಪ್ರತಿಭಟನೆ ನಡೆಸುತ್ತಿದ್ದ ಆಟೋ ಚಾಲಕರ ಮೇಲೆ ಹಲ್ಲೆ ಮಾಡಲು ಮುಂದಾದರು. ಒಂದು ಹಂತದಲ್ಲಿ ಸಚಿವರು ಮತ್ತು ಪ್ರತಿಭಟನಾಕಾರರು ಕೈ ಕೈ ಮಿಲಾಯಿಸುವ ಹಂತಕ್ಕೆ ಪರಿಸ್ಥಿತಿ ತಲುಪಿತು.
ಸ್ಥಳದಲ್ಲಿ ಪರಿಸ್ಥಿತಿ ಕೈ ಮೀರುವ ಹಂತ ತಲುಪಿದ್ದರಿಂದ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಚಿವರ ಭದ್ರತಾ ಸಿಬ್ಬಂದಿ ಜೈನ್ ಅವರನ್ನು ಸಮಾಧಾನ ಪಡಿಸಿ ಸ್ಥಳದಿಂದ ಕರೆದುಕೊಂಡು ಹೋದರು. ರಸ್ತೆ ದುರಸ್ಥಿ ಮಾಡಿಸಿ ಎಂದು ಹೇಳಿದ ಆಟೋ ಚಾಲಕರ ಮೇಲೆಯೇ ಹಲ್ಲೆಗೆ ಮುಂದಾದ ಸಚಿವರ ಗುಂಡಾ ವರ್ತನೆಯನ್ನು ಆಟೋ ಚಾಲಕರು ಖಂಡಿಸಿ ಸ್ಥಳದಲ್ಲಿ ಪ್ರತಿಭಟನೆ ಮುಂದುವರೆಸಿದರು.
ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಪ್ರತಿಭಟನಾನಿರತರ ಮೇಲೆ ಹಲ್ಲೆ ಮಾಡಲು ಮುಂದಾದ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರತಿಭಟನಾ ನಿರತೆ ಸಮಸ್ಯೆಯನ್ನು ಆಲಿಸದೇ, ಸ್ಥಳದಿಂದ ಸಚಿವರು ತೆರಳಿದ್ದಕ್ಕೆ ಆಟೋ ಚಾಲಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಸಚಿವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜಿಲ್ಲೆಯ ವಿವಿಧ ಸಂಘಟನೆಗಳು ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿವೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications