ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಬರಿಮಲೆ ತೀರ್ಪಿನ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

|
Google Oneindia Kannada News

ಮಂಗಳೂರು, ಅಕ್ಟೋಬರ್. 10: ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಗಳೂರಿನಲ್ಲೂ ವಿರೋಧದ ಕೂಗು ಬಲಪಡೆಯುತ್ತಿದೆ. ಮಂಗಳೂರಿನ ಅಯ್ಯಪ್ಪ ಸೇವಾ ಸಮಿತಿ ಮತ್ತು ಹಿಂದೂ ಸಂಘಟನೆಗಳ ಆಶ್ರಯದಲ್ಲಿ ಮಂಗಳವಾರ ಸಂಜೆ (ಅ.09) ಮಂಗಳೂರಿನ ಕದ್ರಿ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆದಿದೆ.

ಶಬರಿಮಲೆ ತೀರ್ಪಿನ ವಿರುದ್ಧ ಅ.9 ರಂದು ಮಂಗಳೂರಲ್ಲಿ ಬೃಹತ್ ಪ್ರತಿಭಟನೆಶಬರಿಮಲೆ ತೀರ್ಪಿನ ವಿರುದ್ಧ ಅ.9 ರಂದು ಮಂಗಳೂರಲ್ಲಿ ಬೃಹತ್ ಪ್ರತಿಭಟನೆ

ಸಭೆಯಲ್ಲಿ ನೂರಾರು ಮಂದಿ ಮಹಿಳೆಯರು, ಅಯ್ಯಪ್ಪ ಸ್ವಾಮಿ ಭಕ್ತರು ಭಾಗವಹಿಸಿ ಸುಪ್ರೀಂ ಆದೇಶದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೈಯಲ್ಲಿ ಪ್ಲೆಕ್ ಕಾರ್ಡ್ ಗಳನ್ನು ಹಿಡಿದು ಸೇವ್ ಶಬರಿಮಲೆ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಸಭೆ ಆರಂಭಕ್ಕೂ ಮುನ್ನ ಅಯ್ಯಪ್ಪ ಸ್ವಾಮಿಯ ಶರಣು ಘೋಷ, ಭಕ್ತಿಗೀತೆಗಳನ್ನು ಹಾಡಲಾಯಿತು.

 ಶಬರಿಮಲೆಗೆ ಪಂದಳ ರಾಜಮನೆತನದವರು ಕಾಲಿಡುವುದಿಲ್ಲ: ವೈರಲ್ ಆದ ಪ್ರಕಟಣೆ ಶಬರಿಮಲೆಗೆ ಪಂದಳ ರಾಜಮನೆತನದವರು ಕಾಲಿಡುವುದಿಲ್ಲ: ವೈರಲ್ ಆದ ಪ್ರಕಟಣೆ

Protest against Sabarimala verdict held on Tuesday

ಪ್ರತಿಭಟನಾ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಹಿಂದೂ‌ ಸಂಘಟನೆ ಗಳ ಮುಖಂಡರು ಶಬರಿ ಮಲೆ ಅತ್ಯಂತ ಪರಿಶುದ್ಧ ಕ್ಷೇತ್ರವಾಗಿದೆ. ಮಹಿಳೆಯರ ಪ್ರವೇಶ ವಿಚಾರವನ್ನಿಟ್ಟುಕೊಂಡು ಹಿಂದೂ ಧರ್ಮ ಒಡೆಯುವ ಕೆಲಸವಾಗುತ್ತಿದೆ. ಕೇರಳ ಜನ ಈಗಾಗಲೇ ಆಂದೋಲನ ನಡೆಸುತ್ತಿದ್ದು, ಕೇರಳದ ಜನರ ಜೊತೆ ಮಂಗಳೂರಿಗರು ಕೈಜೋಡಿಸುವುದಾಗಿ ತಿಳಿಸಿದ್ದಾರೆ.

 'ಸ್ವಲ್ಪ ತಡೀರಿ...' ಶಬರಿಮಲೆ ಮೇಲ್ಮನವಿಗೆ ಸುಪ್ರೀಂ ಪ್ರತಿಕ್ರಿಯೆ! 'ಸ್ವಲ್ಪ ತಡೀರಿ...' ಶಬರಿಮಲೆ ಮೇಲ್ಮನವಿಗೆ ಸುಪ್ರೀಂ ಪ್ರತಿಕ್ರಿಯೆ!

Protest against Sabarimala verdict held on Tuesday

ಸುಪ್ರೀಂ ಕೋರ್ಟ್ ಆದೇಶದ ಕುರಿತು ರಾಷ್ಟ್ರಪತಿಗಳು ಹಾಗೂ ಪ್ರಧಾನಮಂತ್ರಿ ಮಧ್ಯ ಪ್ರವೇಶಿಸಿ ಜನರ ನಂಬಿಕೆಯನ್ನು ಉಳಿಸಬೇಕಾಗಿ ಮನವಿ ಮಾಡಿದರು.

English summary
Various Hindu organisations staged protest against SC verdict on Shabarimala on October 09 in Mangaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X