ನೇತ್ರಾವತಿ ಉಳಿಸಲು ಸೆ.15ರಂದು ದಿನಪೂರ್ತಿ ಹೆದ್ದಾರಿ ಬಂದ್
ಮಂಗಳೂರು, ಸೆಪ್ಟೆಂಬರ್, 12 : ಅತ್ತ ಉತ್ತರ ಕರ್ನಾಟಕದಲ್ಲಿ ಕಳಸಾ-ಬಂಡೂರಿ ಯೋಜನೆಗಾಗಿ ಹೋರಾಟ ನಡೆಯುತ್ತಿದೆ. ಇತ್ತ ದಕ್ಷಿಣ ಕನ್ನಡದಲ್ಲಿ ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟ ಕಾವು ಪಡೆದುಕೊಳ್ಳುತ್ತಿದೆ. ಸೆ.15ರಂದು ರಾಷ್ಟ್ರೀಯ ಹೆದ್ದಾರಿ 75ನ್ನು ಬಂದ್ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
'ಸೆ. 15ರ ಮಂಗಳವಾರ ಉಪ್ಪಿನಂಗಡಿ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ ಹಾಗೂ ಜೈಲ್ ಭರೋ ಚಳವಳಿ ಹಮ್ಮಿಕೊಳ್ಳಲಾಗಿದೆ' ಎಂದು ಉಪ್ಪಿನಂಗಡಿ ನೇತ್ರಾವತಿ ನದಿ ತಿರುವು ಯೋಜನೆ ವಿರೋಧಿ ಹೋರಾಟ ಸಮಿತಿ ಸಂಚಾಲಕ ಡಾ.ನಿರಂಜನ ರೈ ಹೇಳಿದ್ದಾರೆ. [ಎತ್ತಿನಹೊಳೆ ಕುಡಿಯುವ ನೀರಿಗಾಗಿ ಮಾತ್ರ]

'ಒಂದು ದಿನ ಪೂರ್ತಿ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಲಾಗಿದೆ ಅಗತ್ಯವಿದ್ದರೆ ರಾತ್ರಿಯೂ ಹೋರಾಟವನ್ನು ಮುಂದುವರೆಸುತ್ತೇವೆ. ಬೆಳಗ್ಗೆ 10 ಗಂಟೆಗೆ ಆರಂಭವಾಗಲಿರುವ ಪ್ರತಿಭಟನೆಯಲ್ಲಿ ಜನರು ಪಕ್ಷಾತೀತವಾಗಿ ಪಾಲ್ಗೊಳ್ಳಬೇಕು' ಎಂದು ನಿರಂಜನ ರೈ ಕರೆ ನೀಡಿದ್ದಾರೆ. ['ಎತ್ತಿನಹೊಳೆಯಿಂದ ನೇತ್ರಾವತಿ ಬರಿದಾಗುತ್ತೆ']
'ಎತ್ತಿನಹೊಳೆ ಯೋಜನೆಯ ಸಾಧಕ ಬಾಧಕಗಳನ್ನು ಚರ್ಚೆ ನಡೆಸದೇ ಅದನ್ನು ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಿಂದ ಕರಾವಳಿ ಬರಡಾಗಲಿದೆ. ನೇತ್ರಾವತಿ ನದಿಯನ್ನು ಆಶ್ರಯಿಸಿರುವ ಕರಾವಳಿ ಭಾಗದ ಜನರಿಗೆ ತೊಂದರೆಯಾಗಲಿದೆ' ಎಂದು ನಿರಂಜನ ರೈ ಹೇಳಿದರು. [ಎತ್ತಿನ ಹೊಳೆ ಯೋಜನೆ ಬಗ್ಗೆ ಓದಿ]
ಏನಿದು ಯೋಜನೆ? : ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಿಗೆ 24 ಟಿಎಂಸಿ ಕುಡಿಯುವ ನೀರು ಒದಗಿಸುವ ಯೋಜನೆ ಇದಾಗಿದೆ. 2014ರ ಮಾರ್ಚ್ 3ರಂದು ಈ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿದೆ.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ












Click it and Unblock the Notifications