ಮುತಾಲಿಕ್ ದಾಖಲೆ ಮುರಿಯುವಲ್ಲಿ ದಿನಕರ್ ವಿಫಲ
ಮಂಗಳೂರು, ಮಾ.25: ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಬಿಜೆಪಿ ಸೇರಿದ ಎರಡು ಗಂಟೆಯಲ್ಲಿ ಪಕ್ಷದಿಂದ ಹೊರ ಬಿದ್ದ ದಾಖಲೆಯನ್ನು ಮುರಿಯುವಲ್ಲಿ ದಿನಕರ್ ಮುಶೆಟ್ಟಿ ವಿಫಲವಾಗಿದ್ದಾರೆ. ಕಾಂಗ್ರೆಸ್ ಪಕ್ಷ ದಿನಕರ್ ಶೆಟ್ಟಿ ಅವರನ್ನು ಪಕ್ಷದಿಂದ ಹೊರಹಾಕಲು ಸುಮಾರು 8 ಗಂಟೆಗಳ ಕಾಲ ತೆಗೆದುಕೊಂಡಿದೆ.
ಮಂಗಳೂರಲ್ಲಿ ಶ್ರೀರಾಮಸೇನೆ ಕಾನೂನು ಸಲಹೆಗಾರ ನ್ಯಾಯವಾದಿ ದಿನಕರ ಶೆಟ್ಟಿ ಅವರು ಕಾಂಗ್ರೆಸ್ ಸೇರಿದ 8 ಗಂಟೆ ಒಳಗೆ ಹೊರ ದಬ್ಬಿಸಿಕೊಂಡಿದ್ದಾರೆ. ಸೋಮವಾರ ಮಧ್ಯಾಹ್ನ 12 ಗಂಟೆ ವೇಳೆಗೆ ನ್ಯಾಯವಾದಿ ದಿನಕರ ಶೆಟ್ಟಿ ಕಾಂಗ್ರೆಸ್ ಬಾವುಟ ಸ್ವೀಕರಿಸಿದ್ದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಅಭ್ಯರ್ಥಿ ಜನಾರ್ದನ ಪೂಜಾರಿ, ಆಸ್ಕರ್ ಫರ್ನಾಂಡೀಸ್, ರಮಾನಾಥ್ ರೈ ಸೇರಿದಂತೆ ಕರಾವಳಿ ಭಾಗದ ಹಿರಿಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ಆದರೆ, 2009ರ ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 28ನೇ ಆರೋಪಿಯಾಗಿರುವ ದಿನಕರ್ ಶೆಟ್ಟಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು. ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಮೋದ್ ಮುತಾಲಿಕ್ ಎಪಿಸೋಡ್ ರಿಪೀಟ್ ಆಯಿತು. ನಂತರ ಎಚ್ಚೆತ್ತುಕೊಂಡ ಕರ್ನಾಟಕ ಕಾಂಗ್ರೆಸ್ ನಾಯಕರು ದಿನಕರ್ ಶೆಟ್ಟಿ ಸೇರ್ಪಡೆಯನ್ನು ಹಿಂಪಡೆದುಕೊಂಡರು. ನಂತರ ಈ ಘಟನೆ ಬಗ್ಗೆ ಜನಾರ್ದನ ಪೂಜಾರಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದರು.

ಒಟ್ಟಾರೆ ಮಧ್ಯಾಹ್ನ ಸೇರ್ಪಡೆಗೊಂಡ ದಿನಕರ್ ಶೆಟ್ಟಿ ಅವರು ರಾತ್ರಿ ಹೊತ್ತಿಗೆಲ್ಲ ಪಕ್ಷದಿಂದ ಹೊರಬಿದ್ದರು. ಪಬ್ ದಾಳಿಯ ಆರೋಪಿ ಆಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಚುನಾವಣೆಯಲ್ಲಿ ಮುಜುಗರ ಎದುರಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಈ ತೀರ್ಮಾನ ಕೈಗೊಂಡಿದೆ. ಕಾಂಗ್ರೆಸ್ ನಲ್ಲಿರುವ ಪೂಜಾರಿ ನಿಷ್ಠ ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಬಣ ದಿನಕರ ಶೆಟ್ಟಿಯನ್ನು ಪಕ್ಷಕ್ಕೆ ಕರೆತರುವಲ್ಲಿ ಯತ್ನಿಸಿದ್ದು, ಪೂಜಾರಿ ವಿರೋಧಿಸುತ್ತಿರುವ ಐವನ್ ಡಿಸೋಜ ಬಣ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಸೋಮವಾರ ರಾತ್ರಿ ನೀಡಿರುವ ಪತ್ರಿಕಾ ಪ್ರಕಟಣೆ ನೀಡಿ 'ಮಾ.24ರಂದು ನ್ಯಾಯವಾದಿ ದಿನಕರ ಶೆಟ್ಟಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದರ ಬಗ್ಗೆ ಗೊಂದಲ ಉಂಟಾಗಿದ್ದು, ಅವರನ್ನು ಪಕ್ಷದ ಸದಸ್ಯರನ್ನಾಗಿ ಸೇರ್ಪಡೆಗೊಳಿಸದಿರಲು ತೀರ್ಮಾನಿಸಲಾಗಿದೆ' ಎಂದು ಘೋಷಿಸಿದರು. ಕೊನೆಗೆ ಪೂಜಾರಿ ಅವರ ಮಾತಿನಂತೆ ದಿನಕರ್ ಶೆಟ್ಟಿ ಸದಸ್ಯತ್ವವನ್ನು ರದ್ದುಗೊಳಿಸಲಾಯಿತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications