Get Updates
Get notified of breaking news, exclusive insights, and must-see stories!

ಪುತ್ತೂರು: ರನ್ನಿಂಗ್‌ ರೇಸ್‌ನಲ್ಲಿ ಸೋಲು: ಸಾವಿಗೆ ಶರಣಾದ ಪಿಯು ವಿದ್ಯಾರ್ಥಿನಿ

ಮಂಗಳೂರು, ನವೆಂಬರ್‌ 27: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರಕ್ಕೆ ಮನನೊಂದು ವಿದ್ಯಾರ್ಥಿನಿ ಸಾವಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿದಲ್ಲಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ(17) ಮೃತ ದುರ್ದೈವಿ.

ಮೃತ ನಿಶಾ ಅಥ್ಲೆಟಿಕ್‌ ಆಗಿದ್ದು, ರನ್ನಿಂಗ್ ರೇಸ್‌ನಲ್ಲಿ ಕಳೆದ ಕೆಲ ವರ್ಷಗಳಿಂದ ಮೈಲುಗೈ ಸಾಧಿಸಿದ್ದಳು. ಈ ಬಾರಿ ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದಳು. ರನ್ನಿಂಗ್ ರೇಸ್‌ನಲ್ಲಿ ಸೋಲುಕಂಡಿದಕ್ಕೆ ತೀವ್ರ ಬೇಸರಗೊಂಡಿದ್ದ ನಿಶಾಬ ಳಿಕ ಖಿನ್ನತೆಗೊಳಗಾಗಿದ್ದಾಳೆ ಎನ್ನಲಾಗಿದೆ.

PUC Student Ends Her Life For Not Getting Prize In Running Race At Puttur

ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ಕಳೆದ ವಾರ ನಿಶಾ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದಾಳೆ. ಬಳಿಕ ತೀವ್ರ ವಾಂತಿಯಾಗುತ್ತಿದ್ದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ತಿಳಿದು ಬಂದಿದ್ದು, ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ನಿಶಾಳನ್ನು ಪರೀಕ್ಷಿಸಿದ ವೈದ್ಯರು ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ಯುವಂತೆ ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1.57 ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ: ಮೂವರ ಬಂಧನ

ಮಂಗಳೂರಿನ ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ 1.57 ಕೋಟಿ ರೂಪಾಯಿ ಮೌಲ್ಯದ ತಿಮಿಂಗಿಲ ವಾಂತಿ (ಅಂಬರ್ ಗ್ರೀಸ್)ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರು ಮೂಲದ ಸದ್ಯ ಬಂಟ್ವಾಳ ತಾಲೂಕಿನ ವಿಟ್ಲ ಮಂಗಿಲಪದವು ನಿವಾಸಿಗಳಾದ ಪ್ಯಾರೇಜಾನ್ (37), ಬದ್ರುದ್ದೀನ್ (28), ತಮಿಳುನಾಡಿನ ನಾಗಪಟ್ಟಿನಂ ಜಿಲ್ಲೆಯ ಸನ್ನಿಧಿ ಕೋಯಿಲ್ ಟೆಂಪಲ್ ಸ್ಟ್ರೀಟ್ ನಿವಾಸಿ ರಾಜೇಶ್ ಆರ್.(22) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಮಂಗಳೂರಿನ ಪಂಪ್‌ವೆಲ್‌ ಬಳಿಯ ಇಂಡಿಯಾನ ಆಸ್ಪತ್ರೆಯ ಬಳಿ ಮೂವರು ಸ್ವಿಫ್ಟ್ ಕಾರಿನಲ್ಲಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್)ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಬಗ್ಗೆ ಬಂದ ಖಚಿತ ಮಾಹಿತಿಯನ್ವಯ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.

ಬಂಧಿತರಿಂದ 1.575 ಕೆಜಿ ತೂಕದ 1,57,50,000 ರೂ. ಮೌಲ್ಯದ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್) ಹಾಗೂ ಕಾರು, ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ವಶಕ್ಕೆ ಪಡೆದ ವಸ್ತುಗಳ ಮೌಲ್ಯ 1,62,80,000 ರೂಪಾಯಿ ಆಗಬಹುದೆಂದು ಅಂದಾಜಿಸಲಾಗಿದೆ.

Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+