ಪುತ್ತೂರಿನ ಕೊಂಬೆಟ್ಟು ಕಾಲೇಜೀಗ ನ್ಯಾಪ್ಕಿನ್ ಗಳ ಡಂಪಿಂಗ್ ಯಾರ್ಡ್
ಮಂಗಳೂರು, ಆಗಸ್ಟ್ 4: ಸರಕಾರ ಘೋಷಿಸುವ ಹಲವು ಯೋಜನೆಗಳು ಅವುಗಳ ಸಮರ್ಪಕ ಅನುಷ್ಠಾನದ ಸಮಸ್ಯೆಯಿಂದ ವಿಫಲವಾಗುವುದಕ್ಕೆ ಸ್ಪಷ್ಟ ಉದಾಹರಣೆಯೊಂದು ಇಲ್ಲಿದೆ.
ಬಡ ಹೆಣ್ಣು ಮಕ್ಕಳಿಗೆ ಉಚಿತವಾಗಿ ನ್ಯಾಪ್ಕಿನ್ ನೀಡುವ ಯೋಜನೆ ಸರಕಾರದ ಬಳಿಯಿದೆ. ಆದರೆ ಇದು ಹೆಣ್ಣು ಮಕ್ಕಳನ್ನು ಮಾತ್ರ ತಲುಪಿಲ್ಲ. ಪುತ್ತೂರು ತಾಲೂಕಿನ 12 ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯರಿಗೆ ನೀಡಬೇಕಾಗಿದ್ದ ಲಕ್ಷಾಂತರ ಮೌಲ್ಯದ ನ್ಯಾಪ್ಕಿನ್ ಗಳು ಇದೀಗ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯರ್ಥವಾಗುತ್ತಿವೆ.

ಇತರ ಕಾಲೇಜುಗಳಿಗೆ ಸರಕಾರದ ಯಾವುದೇ ಆದೇಶ ಇಲ್ಲದ ಹಿನ್ನಲೆಯಲ್ಲಿ ಯಾವ ಕಾಲೇಜುಗಳೂ ಈ ನ್ಯಾಪ್ಕಿನ್ ಗಳನ್ನು ಕೊಂಬೆಟ್ಟು ಕಾಲೇಜಿನಿಂದ ಕೊಂಡೊಯ್ಯಲು ಹಿಂದೇಟು ಹಾಕುತ್ತಿರುವುದೇ ಇದಕ್ಕೆ ಕಾರಣವಾಗಿದೆ.
ಕೊಂಬೆಟ್ಟು ಕಾಲೇಜಿನ ಸಿಬ್ಬಂದಿವರ್ಗ ಈಗಾಗಲೇ ಹಲವು ಕಾಲೇಜುಗಳಿಗೆ ಈ ಬಗ್ಗೆ ಮಾಹಿತಿಯನ್ನು ನೀಡಿದ್ದರೂ, ಯಾವ ಕಾಲೇಜುಗಳೂ ಶಿಕ್ಷಣ ಇಲಾಖೆಯ ಅನುಮತಿಯಿಲ್ಲದ ಕಾರಣ ನ್ಯಾಪ್ಕಿನ್ ಗಳನ್ನು ಪಡೆಯಲು ಹಿಂದೇಟು ಹಾಕುತ್ತಿದೆ. ಲೋಡುಗಟ್ಟಲೆ ನ್ಯಾಪ್ಕಿನ್ ಗಳು ಇದೀಗ ಕಾಲೇಜಿನಲ್ಲಿ ಡಂಪ್ ಆಗಿದ್ದು, ಬಡ ವಿದ್ಯಾರ್ಥಿನಿಯರಿಗೆ ತಲುಪಬೇಕಾದ ವ್ಯವಸ್ಥೆ ಮಣ್ಣು ಪಾಲಾಗುತ್ತಿದೆ.

ಸರಕಾರ ಶಾಲೆ ಹಾಗೂ ಕಾಲೇಜುಗಳಲ್ಲಿ ಕಲಿಯುತ್ತಿರುವ ಬಡ ವಿದ್ಯಾರ್ಥಿನಿಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರದ ವತಿಯಿಂದಲೇ ನ್ಯಾಪ್ಕಿನ್ ಗಳನ್ನು ಉಚಿತವಾಗಿ ವಿತರಿಸುವ ಜನಪರ ಯೋಜನೆಯನ್ನು ಆರಂಭಿಸಲಾಗಿತ್ತು. ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡಿಲ್ಲವೇ ಎನ್ನುವ ಸಂಶಯ ಇದೀಗ ಕಾಡತೊಡಗಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications