ಮಂಗಳೂರು : ಯೆಮನ್ನಿಂದ ಪಾರಾಗಿ ಬಂದ ರಾಜೇಶ್ ಅನುಭವ
ಮಂಗಳೂರು, ಏ.6 : 'ರಾತ್ರಿಯಾಗುತ್ತಿದ್ದಂತೆ ಸ್ಫೋಟದ ಶಬ್ದ, ದಟ್ಟ ಹೊಗೆ. ಒಂದು ದಿನ ನನ್ನ ರೂಂನ ಕೇವಲ 500 ಮೀ. ಅಂತರದಲ್ಲೇ ವೈಮಾನಿಕ ದಾಳಿ ನಡೆಯಿತು. ಹೆದರಿದ ನಾವು ಹೊರಗೆ ಹೋಗುವ ಸ್ಥಿತಿಯಲ್ಲಿ ಇರಲಿಲ್ಲ. ನಾನು ಬದುಕಿ ಉಳಿದು ಭಾರತಕ್ಕೆ ಬರುತ್ತೇನೆ ಎಂಬುದನ್ನು ಮರೆತು ಬಿಟ್ಟಿದ್ದೆ'.
15 ದಿನಗಳ ಕಾಲ ಯುದ್ಧಪೀಡಿತ ಯೆಮನ್ ದೇಶದಲ್ಲಿ ನರಕಯಾತನೆ ಅನುಭವಿಸಿ, ಶನಿವಾರ ಸುರಕ್ಷಿತವಾಗಿ ತವರಿಗೆ ಬಂದ ಪುತ್ತೂರು ಕೋಡಿಂಬಾಳದ ರಾಜೇಶ್ ಗುಂಡಿಮಜಲು ಚೆನ್ನಪ್ಪ (24) ಅವರು ತಮ್ಮ ಅನುಭವಗಳನ್ನು ಬಿಚ್ಚಿಟ್ಟಿದ್ದು ಹೀಗೆ. [ಭಾರತೀಯರೇ ಹೆದರದಿರಿ, ಏರ್ ಇಂಡಿಯಾ ಬರ್ತಾ ಇದೆ!]
ಶುಕ್ರವಾರ ಯೆಮನ್ನ ಸನಾ ವಿಮಾನ ನಿಲ್ದಾಣದಿಂದ ಆಫ್ರಿಕಾದ ಜಿಬೌಟಿ ವಿಮಾನ ನಿಲ್ದಾಣಕ್ಕೆ ಬಂದು, ಅಲ್ಲಿಂದ ರಾತ್ರಿ ಕೇರಳದ ಕೊಚ್ಚಿನ್ಗೆ ಬಂದಿಳಿದು, ಎರ್ನಾಕುಲಂ ಮೂಲಕ ರೈಲಿನಲ್ಲಿ ಮಂಗಳೂರು ರೈಲು ನಿಲ್ದಾಣಕ್ಕೆ ಆಗಮಿಸಿದ ರಾಜೇಶ್ನನ್ನು ಕುಟುಂಬದವರು ಆತ್ಮೀಯವಾಗಿ ಬರಮಾಡಿಕೊಂಡರು.

ಯೆಮನ್ಗೆ ಹೋಗಿದ್ದು : 2013ರ ಜ.28ರಂದು ಮೊದಲ ಬಾರಿಗೆ ಯೆಮನ್ ದೇಶಕ್ಕೆ ಏರ್ ಕಂಡೀಷನ್ ಎಂಜಿನಿಯರ್ ಆಗಿ ಕೆಲಸಕ್ಕೆ ಹೋಗಿದ್ದೆ. ಎರಡು ಬಾರಿಗೆ ಊರಿಗೆ ಬಂದಿದ್ದೆ. ಕಳೆದ ಮಾ.19ರಂದು ಖತಾರ್ ಮೂಲಕ ಯೆಮನ್ಗೆ ತೆರಳಿದ್ದೆ. ಮಾ. 20ರಂದು ನಾನು ತಲುಪುವ ಅರ್ಧ ಗಂಟೆ ಮೊದಲು ಎರಡು ಬಾಂಬ್ ಸ್ಫೋಟಗೊಂಡಿತ್ತು ಹಲವಾರು ಮಂದಿ ಸಾವಿಗೀಡಾಗಿದ್ದರು ಎಂದು ರಾಜೇಶ್ ಮಾತು ಆರಂಭಿಸಿದರು.
'ನಮಗೆ ರಾಯಭಾರ ಕಚೇರಿಯಿಂದ ಯಾವುದೇ ಸೂಚನೆ ಸಿಗಲಿಲ್ಲ. ಹಾಗಾಗಿ ವಿಮಾನ ನಿಲ್ದಾಣದಿಂದ ರೂಮಿಗೆ ತೆರಳಿ ಮರುದಿನ ಕೆಲಸಕ್ಕೂ ಹೋಗಿದ್ದೆವು. ಮಾ.25ರ ನಂತರ ಮತ್ತೆ ವೈಮಾನಿಕ ದಾಳಿ ಆರಂಭವಾಯಿತು. ಹಗಲು ಹೊತ್ತು ಆತಂಕದಲ್ಲೇ ದಿನ ಕಳೆಯಬೇಕಾಯಿತು'. ಮಾ. 29ರ ಬಳಿಕ ಹಗಲು-ರಾತ್ರಿ ವೈಮಾನಿಕ ದಾಳಿಗಳು ಆರಂಭವಾದವು' ಎಂದರು.
ಬಾಂಬ್ ಅಲ್ಲ ಗುಡುಗಿನ ಶಬ್ದ : 'ಯೆಮನ್ ತಲುಪಿದಾಗ ಮಳೆಯಾಗುತ್ತಿತ್ತು. ಆದ್ದರಿಂದ ಮೊದಲ ದಿನ ಬಾಂಬ್ ದಾಳಿ ಶಬ್ದವನ್ನು ಗುಡುಗಿನ ಶಬ್ದ ಎಂದು ತಿಳಿದಿದ್ದೆ. ಉಡುಪಿ ಮೂಲದ ನರ್ಸ್ ಪ್ರೇಮಾ ಅವರು ಕರೆ ಮಾಡಿ ವೈಮಾನಿಕ ದಾಳಿಯಾಗುತ್ತಿದೆ. ಮನೆಯಿಂದ ಹೊರಗೆ ಬರಬೇಡ ಎಂದು ಎಚ್ಚರಿಕೆ ನೀಡಿದರು' ಎಂದು ರಾಜೇಶ್ ಅಲ್ಲಿನ ಪರಿಸ್ಥಿತಿಯನ್ನು ಬಿಚ್ಚಿಟ್ಟರು.
'ನಮ್ಮ ರೂಂ ಪಕ್ಕದಲ್ಲಿ ದೇಶದ ಶಸ್ತ್ರಾಸ್ತ್ರಗಳ ಉಗ್ರಾಣವಿತ್ತು. ಅದರ ಮೇಲೆ ದಾಳಿಯಾಗುವ ಸಾಧ್ಯತೆ ಇದ್ದು, ನಮ್ಮ ಆತಂಕಕ್ಕೆ ಕಾರಣವಾಗಿತ್ತು. ಮನೆಗೆ ಕರೆ ಮಾಡುವಾಗ ಸ್ಫೋಟದ ಶಬ್ದ ಕೇಳಿಸುತ್ತಿದ್ದು, ಅವರು ಆತಂಕಪಡದಂತೆ ಸಮಾಧಾನ ಹೇಳುತ್ತಿದ್ದೆ' ಎಂದು ರಾಜೇಶ್ ಹೇಳಿದರು.
ಮರಳು ಬಿರುಗಾಳಿ ಕಾಪಾಡಿತು : 'ಎರಡು ದಿನಗಳಿಂದ ಅರಬ್ ರಾಷ್ಟ್ರಗಳಲ್ಲಿ ವಿಪರೀತ ಮರಳು ಬಿರುಗಾಳಿ ಬೀಸುತ್ತಿತ್ತು. ಇದರಿಂದ ವೈಮಾನಿಕ ದಾಳಿ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಯಿತು. ಈ ಅವಧಿಯಲ್ಲಿ ಧ್ವಂಸಗೊಂಡಿದ್ದ ವಿಮಾನ ನಿಲ್ದಾಣದ ನಿಯಂತ್ರಣ ಘಟಕಗಳನ್ನು ದುರಸ್ತಿಪಡಿಸಿ, ವಿಮಾನ ಹಾರಾಟವನ್ನು ಪುನಃ ಆರಂಭಿಸಿದರು ಎಂದು ರಾಜೇಶ್ ತಿಳಿಸಿದರು.
ಡಿವಿಎಸ್ ಕರೆ ಮಾಡಿದ್ದರು : ನಮ್ಮ ರೂಂ ಪಕ್ಕದಲ್ಲಿದ್ದ ಯೆಮನ್ ನಾಗರಿಕರು ಆಹಾರ ತಂದು ಕೊಡುತ್ತಿದ್ದರು. ಹೊರಗೆ ಹೋಗದಂತೆ ಜಾಗ್ರತೆ ವಹಿಸಿ, ಗೋಡೆ ಪಕ್ಕ ಕುಳಿತುಕೊಳ್ಳದಂತೆ ಸಲಹೆ ನೀಡುತ್ತಿದ್ದರು. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಕರೆ ಮಾಡಿ ಧೈರ್ಯ ತುಂಬಿದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರಿಗೆ ಕರೆ ಮಾಡಿ ತಿಳಿಸಿದ್ದರಿಂದ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿ ಅತ್ಯಂತ ಕ್ಷಿಪ್ರವಾಗಿ ಸ್ಪಂದಿಸಿದರು' ಎಂದು ರಾಜೇಶ್ ನೆನಪು ಮಾಡಿಕೊಂಡರು.
ಮೂರು ಗಂಟೆಗೆ ಕರೆ : ಶುಕ್ರವಾರ ಮುಂಜಾನೆ 3 ಗಂಟೆಗೆ ನಮಗೆ ಕರೆ ಬಂತು. ತಕ್ಷಣ ವಿಮಾನ ನಿಲ್ದಾಣಕ್ಕೆ ಬರುವಂತೆ ತಿಳಿಸಲಾಯಿತು. ಬೆಂಗಳೂರಿನ ಇಮ್ತಿಯಾಝ್, ಆಂಧ್ರಪ್ರದೇಶದ ವಿಶಾಖಪಟ್ಟಣದ ಕುಟುಂಬ ಜತೆ ನಾನು ವಿಮಾನ ಹತ್ತಿದ್ದೆ. ಆ ಕುಟುಂಬದಲ್ಲಿ ಒಬ್ಬ ವಿಕಲಚೇತನ ಮಗುವಿದ್ದ ಕಾರಣ ನಮಗೆ ಮೊದಲು ಬರುವ ಅವಕಾಶ ದೊರೆಯಿತು ಎಂದರು.
ಮತ್ತೆ ಹೋಗಲ್ಲ : ತಾನು ಕೆಲಸ ಮಾಡುತ್ತಿದ್ದ ಕಂಪನಿ ಎಲ್ಲ ಸಂಬಳ ನೀಡಿ ಕಳುಹಿಸಿ ಕೊಟ್ಟಿದೆ. ಯೆಮನ್ಗೆ ಮತ್ತೆ ತೆರಳುವ ಇಚ್ಛೆ ಇಲ್ಲ. ಭವಿಷ್ಯದಲ್ಲಿ ಏನು ಮಾಡಬೇಕು ಎಂದು ಆಲೋಚನೆ ಮಾಡಿಲ್ಲ ಎಂದು ರಾಜೇಶ್ ತಿಳಿಸಿದರು.
ಮಗನ ಕಂಡು ಗದ್ಗದಿತರಾದ ತಂದೆ: ದೂರದ ಯುದ್ಧಪೀಡಿತ ಯೆಮನ್ನ ಮೃತ್ಯು ದವಡೆಯಿಂದ ಸುರಕ್ಷಿತವಾಗಿ ಆಗಮಿಸಿದ್ದ ಮಗ ರಾಜೇಶ್ನನ್ನು ಅಪ್ಪಿ ಹಿಡಿದುಕೊಂಡ ತಂದೆ ಚೆನ್ನಪ್ಪ ಗೌಡ ಗದ್ಗದಿತರಾದರು. ಉಮ್ಮಳಿಸಿ ಬಂದ ದುಃಖ ತಾಳಲಾರದೆ ಕಣ್ಣೀರು ಹಾಕಿದಾಗ, ಮಗನ ಕಣ್ಣಾಲಿಗಳೂ ತುಂಬಿದವು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications