ಲಂಚ ಸ್ವೀಕರಿಸುತ್ತಿದ್ದಾಗ ಪುತ್ತೂರು ತಹಶೀಲ್ದಾರ್ ಎಸಿಬಿ ಬಲೆಗೆ
ಮಂಗಳೂರು ಜೂನ್ 21: ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಪುತ್ತೂರು ತಹಶೀಲ್ದಾರ್ ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ. ತಹಶೀಲ್ದಾರ್ ಡಾ.ಪ್ರದೀಪ್ ಕುಮಾರ್ ಗುರುವಾರ ಸಂಜೆ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಕಾಲೇಜು ವಿದ್ಯಾರ್ಥಿಗಳಿಗೆ ಕೊಕೇನ್ ಮಾರುತ್ತಿದ್ದ ವ್ಯಕ್ತಿ ಬಂಧನ
ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯ ವೇಳೆ ಅಧಿಕಾರಿಗಳಿಗೆ ಊಟ, ಉಪಹಾರ ಸರಬರಾಜು ಮಾಡಿದ ಕೆಟರಿಂಗ್ ಮಾಲೀಕರೊಬ್ಬರಿಗೆ ಬಿಲ್ ಪಾವತಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗಿದೆ. ಬಿಲ್ ಪಾವತಿಸಬೇಕಾದರೆ ತನಗೆ 1 ಲಕ್ಷದ 25 ಸಾವಿರ ರೂಪಾಯಿ ಲಂಚ ನೀಡಬೇಕು ಎಂದು ಪ್ರದೀಪ್ ಕುಮಾರ್ ಬೇಡಿಕೆ ಇರಿಸಿದ್ದು, ಈ ಬಗ್ಗೆ ಪೈ ಕೆಟರಿಂಗ್ ಮಾಲೀಕ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು.
ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಬಂಧನ
ಗುರುವಾರ ಸಂಜೆ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಪ್ರದೀಪ್ ಕುಮಾರ್ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಪ್ರದೀಪ್ರವರನ್ನು ವಶಕ್ಕೆ ಪಡೆದ ಎಸಿಬಿ ಅಧಿಕಾರಿಗಳು ದರ್ಬೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.