ಪುತ್ತೂರು-ಉಪ್ಪಿನಂಗಡಿ ನಡುವೆ 4 ಪಥದ ರಸ್ತೆ ನಿರ್ಮಾಣ
ಮಂಗಳೂರು, ಜೂನ್ 21 : ಪುತ್ತೂರು-ಉಪ್ಪಿನಂಗಡಿ ಮಾರ್ಗವನ್ನು 4 ಪಥದ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗುತ್ತದೆ. 4.15 ಕೋಟಿ ರೂ.ಗಳ ಯೋಜನೆಗೆ ಈಗಾಗಲೇ ಒಪ್ಪಿಗೆ ಸಿಕ್ಕಿದೆ.
ಲೋಕೋಪಯೋಗಿ ಇಲಾಖೆಯ ಪುತ್ತೂರು ವಿಭಾಗ ಈ ಕಾಮಗಾರಿಯನ್ನು ಕೈಗೊಳ್ಳಲಿದೆ. ಮಾರ್ಚ್ ತಿಂಗಳಿನಲ್ಲಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಮಳೆಗಾಲ ಮುಗಿದ ಬಳಿಕ ಕಾಮಗಾರಿ ಆರಂಭವಾಗಲಿದೆ.
ಬೆಂಗಳೂರು-ಮೈಸೂರು ಮಾರ್ಗಕ್ಕಾಗಿ 200 ಮರಗಳಿಗೆ ಕೊಡಲಿ?
ಪುತ್ತೂರು-ಉಪ್ಪಿನಂಗಡಿ ರಸ್ತೆಯನ್ನು ಪಡೀಲ್ನಿಂದ ಕೆಮ್ಮಾಯಿ ಪೆಟ್ರೋಲ್ ಬಂಕ್ ವರೆಗೆ 800 ಮೀ.ರಸ್ತೆಯನ್ನು 4 ಪಥದ ರಸ್ತೆಯಾಗಿ ಮಾಡಲಾಗುತ್ತದೆ. ದಾರಂದಕುಕ್ಕು ಬಳಿಯಿಂದ ಕೋಡಿಂಬಾಂಡಿ ಶಾಲೆವರೆಗಿನ ರಸ್ತೆಯನ್ನು ಅಗಲೀಕರಣ ಮಾಡಿ, ಅಭಿವೃದ್ಧಿ ಪಡಿಸಲಾಗುತ್ತದೆ.
ಮಾರ್ಚ್ ತಿಂಗಳಿನಲ್ಲಿ ಈ ಯೋಜನೆಯ ಟೆಂಡರ್ ಪ್ರಕ್ರಿಯೆ ಮುಗಿದೆ. ಆದರೆ, ತಾಂತ್ರಿಕ ಕಾರಣಗಳಿಂದಾಗಿ ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಮಳೆಗಾಲ ಮುಗಿದ ಬಳಿಕ ಕಾಮಗಾರಿ ಆರಂಭವಾಗಲಿದೆ.
85 ಮರಕ್ಕೆ ಕೊಡಲಿ : ರಸ್ತೆ ಅಗಲೀಕರಣಕ್ಕಾಗಿ 85 ಮರಗಳನ್ನು ಕತ್ತರಿಸಬೇಕಿದೆ. ಇದಕ್ಕಾಗಿ ಅರಣ್ಯ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಕಳುಹಿಸಲಾಗಿದೆ. ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಪ್ರಕ್ರಿಯೆಯನ್ನು ಕೆಲವೇ ದಿನಗಳಲ್ಲಿ ಇಲಾಖೆ ಆರಂಭಿಸಲಿದೆ.