ಪುತ್ತೂರು: ಡಾಂಬರ್ನಲ್ಲಿ ಸಿಲುಕಿದ ನಾಗರಹಾವಿನ ರಕ್ಷಣೆ, ಯುವಕನ ಪ್ರಯತ್ನಕ್ಕೆ ಮೆಚ್ಚುಗೆ
ಮಂಗಳೂರು, ಡಿಸೆಂಬರ್ 21: ಡಾಂಬರ್ನಲ್ಲಿ ಸಿಲುಕಿದ ನಾಗರಹಾವೊಂದನ್ನು ಪುತ್ತೂರಿನ ಉರಗ ಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿದ್ದಾರೆ. ಡಾಂಬರ್ನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಹಾವನ್ನು ಎರಡು ದಿನಗಳ ಕಠಿಣ ಪರಿಶ್ರಮದೊಂದಿಗೆ ತೇಜಸ್ ರಕ್ಷಿಸಿದ್ದು, ತೇಜಸ್ ಕಾರ್ಯಕ್ಕೆ ಸಾಮಾಜಿಕ ತಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತೇಜಸ್ ತಾನು ಹಾವನ್ನು ರಕ್ಷಿಸುವ ಕಾರ್ಯಾಚರಣೆಯ ವಿಡಿಯೋವನ್ನು ತಮ್ಮ ಗೆಳೆಯರೊಂದಿಗೂ ಹಂಚಿಕೊಂಡಿದ್ದಾರೆ.
ಉರಿ ಬಿಸಿಲಿನಲ್ಲಿ ಡಾಂಬರ್ ರಸ್ತೆಯಲ್ಲಿ ಸಿಲುಕಿ ಹಾವು ಹಾಗೂ ಇತರ ಸಣ್ಣ ಪ್ರಾಣಿಗಳು ಒದ್ದಾಡೋದು ಸಾಮಾನ್ಯವಾಗಿದ್ದು, ಇಂಥ ಸಮಯದಲ್ಲಿ ಅವುಗಳನ್ನು ರಕ್ಷಿಸಲು ಹೋಗುವವರ ಸಂಖ್ಯೆ ಕಡಿಮೆಯೇ. ಅದರಲ್ಲೂ ವಿಷಜಂತುಗಳು ಸಿಲುಕಿಕೊಂಡಿದ್ದರೆ, ಅದರ ಬಳಿಗೂ ಹೋಗದೆ ಹಾವುಗಳನ್ನು ಅಲ್ಲೇ ಬಿಟ್ಟು ಹೋಗುವವರೇ ಹೆಚ್ಚು. ಆದರೆ ತೇಜಸ್ ಬನ್ನೂರು ಇಂಥಹ ಹಲವು ಕಾರ್ಯಗಳನ್ನು ಮಾಡಿದ್ದು, ಅದರಲ್ಲೂ ಹಾವುಗಳನ್ನು ರಕ್ಷಿಸಿ ಅವುಗಳಿಗೆ ಜೀವದಾನವನ್ನು ಮಾಡಿರುವ ಹಲವು ಉದಾಹರಣೆಗಳಿವೆ.

ಅದೇ ರೀತಿಯ ಒಂದು ಕಾರ್ಯಾಚರಣೆಯನ್ನು ತೇಜಸ್ ಬನ್ನೂರು ಪುತ್ತೂರಿನ ನೆಹರೂನಗರದಲ್ಲಿ ಮಾಡಿದ್ದಾರೆ. ನಗರದ ಮನೆಯೊಂದರಲ್ಲಿ ಡಾಂಬರ್ ಡಬ್ಬಿಗಳನ್ನು ಶೇಖರಿಸಿಟ್ಟ ಪ್ರದೇಶದಲ್ಲಿ ನಾಗರಹಾವು ಪತ್ತೆಯಾಗಿತ್ತು. ಹಾವೊಂದು ಡಾಂಬರ್ ಡಬ್ಬಿಗಳ ಅಂಚಿನಲ್ಲಿ ಹೋಗಿರುವುದನ್ನು ಗಮನಿಸಿದ್ದ ಮನೆ ಮಂದಿ ತೇಜಸ್ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ ತೇಜಸ್ ಅಲ್ಲಿಗೆ ಬರುವ ಮೊದಲೇ ಆ ಹಾವು ಅಲ್ಲಿಂದ ತಪ್ಪಿಸಿ ಬೇರೆ ಕಡೆಗೆ ಹೋಗಿತ್ತು.
ಡಾಂಬರ್ ಡಬ್ಬಿಗಳನ್ನು ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಡಬ್ಬದಿಂದ ನೆಲಕ್ಕೆ ಹರಿದಿದ್ದ ಡಾಂಬರ್ನಲ್ಲಿ ಮತ್ತೊಂದು ಹಾವು ಬಿದ್ದಿರುವುದು ತೇಜಸ್ ಗಮನಕ್ಕೆ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ತೇಜಸ್ ಹಾವನ್ನು ತನ್ನ ಬೇರೊಂದು ಕಡೆಗೆ ವರ್ಗಾಯಿಸಿ ಅಲ್ಲಿ ಹಾವಿನ ಚರ್ಮದಿಂದ ಡಾಂಬರ್ ಅನ್ನು ತೆಗೆಯುವ ಪ್ರಯತ್ನ ಮಾಡಿದ್ದಾರೆ.
ನಾಗರಹಾವಿನ ಚರ್ಮದಿಂದ ಡಾಂಬರ್ ತೆಗೆಯಲು ಎರಡು ದಿನಗಳ ಕಾಲ ಶ್ರಮಪಟ್ಟಿದ್ದಾರೆ. ನಾಗರಹಾವನ್ನು ಶುದ್ಧ ಕೊಬ್ಬರಿ ಎಣ್ಣೆಯಲ್ಲಿ ಒಂದು ದಿನ ಸಂಪೂರ್ಣ ಅದ್ದಿ ಇಟ್ಟು ಬಳಿಕ ಅದರ ಮೇಲಿಂದ ಡಾಂಬರ್ ಅನ್ನು ಬೇರ್ಪಡಿಸಿದ್ದಾರೆ. ಸುಮಾರು ಒಂದು ವರ್ಷ ಪ್ರಾಯದ ನಾಗರಹಾವು ಚೇತರಿಸಿಕೊಂಡ ಬಳಿಕ ಅದನ್ನು ಸುರಕ್ಷಿತವಾಗಿ ಕಾಡಿಗೆ ಬಿಡುವ ಕಾರ್ಯವನ್ನೂ ತೇಜಸ್ ಮಾಡಿದ್ದಾರೆ. ತೇಜಸ್ ಪ್ರಕಾರ ಡಾಂಬರ್ನಲ್ಲಿ ಸಿಕ್ಕಿಹಾಕಿಕೊಂಡ ಹಾವಿನ ಚರ್ಮಕ್ಕೆ ಕೊಂಚ ಹಾನಿಯಾಗಿದ್ದರೂ, ಇನ್ನು ಕೆಲವೇ ಹಾವಿಗೆ ಹೊಸ ಚರ್ಮ ಬರಲಿದೆ.
ಇದರಿಂದಾಗಿ ಈಗಿರುವ ಚರ್ಮ ಕಳಚಿ ಹೋಗಲಿದೆ. ಇದರಿಂದಾಗಿ ಹಾವಿಗೆ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ. ಹಾವಿನ ಎಲ್ಲಾ ಚಲನವಲನಗಳನ್ನು ಪರೀಕ್ಷಿಸಿದ ಬಳಿಕವೇ ಹಾವನ್ನ ಸುರಕ್ಷಿತ ಪ್ರದೇಶಕ್ಕೆ ಬಿಡಲಾಗಿದೆ. ತೇಜಸ್ ಬನ್ನೂರು ಈವರೆಗೆ ಇಂಥಹ ಹಲವು ರೀತಿಯ ಕಾರ್ಯಾಚರಣೆಗಳ ಮೂಲಕ ಮೂಕ ಪ್ರಾಣಿಗಳನ್ನು ರಕ್ಷಿಸಿದ್ದು, ಅದರಲ್ಲೂ ಹಾವುಗಳನ್ನು ರಕ್ಷಿಸಿ ಸಂರಕ್ಷಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications