ಹತಾಶ ರೇವಣ್ಣರಿಂದ ದೇವಸ್ಥಾನದೊಳಗೆ ಮಾಧ್ಯಮದವರ ಮೇಲೆ ಬೈಗುಳ
Recommended Video
ಮಂಗಳೂರು, ಜುಲೈ 14: ಕರ್ನಾಟಕ ರಾಜಕೀಯದ ಬಿಕ್ಕಟ್ಟಿನಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗಿಂತ ಹೆಚ್ಚು ಚಿಂತೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರಿಗೇ ಇದ್ದಂತಿದೆ. ಸರಕಾರ ಉಳಿಯಲಿ ಎಂದು ಗುಡಿ- ಗುಂಡಾರಗಳನ್ನು ಸುತ್ತುತ್ತಿರುವ ಸಚಿವರು ಕಟೀಲು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿದ ವೇಳೆ ಪತ್ರಕರ್ತರನ್ನು ನಿಂದಿಸಿದ್ದಾರೆ.
ದೇವಸ್ಥಾನದೊಳಗೇ ರೇವಣ್ಣ ಅವರು ಆಡಿದ ಮಾತುಗಳು ಆಕ್ರೋಶಕ್ಕೆ ಕಾರಣ ಆಗಿದೆ. "ಕಚಡಾ ನನ್ನ ಮಕ್ಳಾ, ನಾಚಿಕೆ ಆಗೊಲ್ಲವಾ?" ಎಂದು ಫೋಟೋ ತೆಗೆಯುತ್ತಿದ್ದ ಹಾಗೂ ವಿಡಿಯೋ ಮಾಡುತ್ತಿದ್ದ ಪತ್ರಕರ್ತರನ್ನು ನಿಂದಿಸಿದ್ದಾರೆ. ಇದರ ಜತೆಗೆ ಪೊಲೀಸರಿಗೆ ಸೂಚನೆ ನೀಡಿ, ಫೋಟೋ- ವಿಡಿಯೋ ಕೂಡ ಡಿಲೀಟ್ ಮಾಡಿಸಿದ್ದಾರೆ.
ಇಷ್ಟೆಲ್ಲ ಆದ ನಂತರ ತರಾತುರಿಯಲ್ಲಿ ಪ್ರಸಾದ ತೆಗೆದುಕೊಂಡು ಅಲ್ಲಿಂದ ರೇವಣ್ಣ ಹೊರಟುಬಿಟ್ಟಿದ್ದಾರೆ. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರಕಾರದ ಅಸ್ಥಿರತೆ ಕಾಣಿಸಿಕೊಂಡ ದಿನದಿಂದ ಅಥವಾ ಅದಕ್ಕೂ ಮುನ್ನ, ಅಂದರೆ ಲೋಕಸಭಾ ಚುನಾವಣೆ ಘೋಷಣೆ ಆದಂದಿನಿಂದ ದೇವಸ್ಥಾನ- ಹೋಮ, ಹವನ ಎಂದು ಸುತ್ತಾಡುತ್ತಿರುವ ಸಚಿವ ರೇವಣ್ಣ ಅವರು ಹೋದ ಕಡೆಯೆಲ್ಲ ಮಾಧ್ಯಮದವರು ಹಿಂಬಾಲಿಸುತ್ತಾರೆ, ಸುದ್ದಿ ಮಾಡುತ್ತಾರೆ.

ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ರೇವಣ್ಣ ತೆರಳಿದಾಗಲೂ ಮಾಧ್ಯಮದವರು ಸುದ್ದಿಗಾಗಿ ತೆರಳಿದ್ದಾರೆ. ಆದರೆ ಮೈತ್ರಿ ಸರಕಾರದ ಸ್ಥಿತಿ ಮತ್ತಷ್ಟು ವಿಷಮಗೊಂಡಿರುವುದರಿಂದ ಹತಾಶೆಗೆ ಒಳಗಾದಂತೆ ಇರುವ, ಜತೆಗೆ ಕಡತ ವಿಲೇವಾರಿ, ಬಡ್ತಿ ಇತ್ಯಾದಿಗಳಲ್ಲಿ ಸಕ್ರಿಯರಾಗಿದ್ದಾರೆ ಎಂಬ ಮಾಧ್ಯಮಗಳ ವರದಿಯಿಂದ ಸಿಟ್ಟಾಗಿರಬಹುದಾದ ರೇವಣ್ಣ ಮಾಧ್ಯಮದವರನ್ನು ನಿಂದಿಸಿದ್ದಾರೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications