ಮಂಗಳೂರಿನಲ್ಲಿ ಆರ್ ಎಎಫ್ ಘಟಕ ಸ್ಥಾಪನೆ: ಗಲಭೆಕೋರರಿಗೆ ನಡುಕ ಶುರು
ಮಂಗಳೂರು, ಅಕ್ಟೋಬರ್. 09: ಕೋಮು ಘರ್ಷಣೆ, ಗಲಭೆಗಳಿಂದ ದೇಶದಲ್ಲಿ ಕುಖ್ಯಾತಿ ಗಳಿಸಿರುವ ಮಂಗಳೂರಿಗೆ ಕ್ಷಿಪ್ರ ಕಾರ್ಯಾಚರಣೆ ಪಡೆ ಆರ್ ಎಎಫ್ ತುಕಡಿಯನ್ನು ಖಾಯಂ ಆಗಿ ನಿಯೋಜನೆಗೊಳಿಸಲು ಕೇಂದ್ರ ಸರಕಾರ ತೀರ್ಮಾನಿಸಿದೆ.
ದೇಶದಲ್ಲಿರುವ ಒಟ್ಟು 10 ಆರ್ಎಎಫ್ ತುಕಡಿಗಳನ್ನು ಕೇಂದ್ರವಾಗಿರಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈಗ ಮತ್ತೆ 5 ಹೊಸ ಬೆಟಾಲಿಯನ್ ಗಳನ್ನು ಆಯೋಜಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಕಳೆದ ಜನವರಿಯಲ್ಲೇ 5 ಆರ್ಎಎಫ್ ಘಟಕವನ್ನು ಆರಂಭಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು. ಆದರೆ ಈಗ ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿದೆ.
ಉತ್ತರಪ್ರದೇಶದ ವಾರಾಣಸಿ, ರಾಜಸ್ಥಾನದ ಜೈಪುರ, ಬಿಹಾರ ಹಾಜಿಪುರ ಹರಿಯಾಣದ ನುಹ್ ಸೇರಿದಂತೆ ಕರ್ನಾಟಕದ ಮಂಗಳೂರಿನಲ್ಲಿ ಹೊಸ ಆರ್ಎಎಫ್ ಘಟಕ ಪ್ರಾರಂಭಿಸಲು ಕೇಂದ್ರ ತೀರ್ಮಾನಿಸಿದೆ.
ಈಗಾಗಲೇ ದೇಶದ ಹೈದರಾಬಾದ್, ಅಹಮದಾಬಾದ್, ಅಲಹಾಬಾದ್, ಮುಂಬೈ, ದೆಹಲಿ, ಆಲಿಘರ್, ಕೊಯಮತ್ತೂರ್, ಜಮ್ಶೆಡ್ ಪುರ್, ಭೋಪಾಲ್ ಹಾಗೂ ಮೀರತ್ ನಲ್ಲಿ ಆರ್ಎಎಫ್ ಪಡೆ ಕಾರ್ಯಾಚರಣೆ ನಡೆಸುತ್ತಿವೆ.

ಕಠಿಣ ತರಬೇತಿ ಪಡೆದ ಯೋಧರು
ದೇಶದಲ್ಲಿ ಎಲ್ಲೇ ಗಲಭೆ, ಕೋಮು ಘರ್ಷಣೆಯಾದರೂ ಆರ್ ಎಎಫ್ ಪಡೆಯ ಸಿಬ್ಬಂದಿಗಳು ಈ ಕೇಂದ್ರಗಳಿಂದಲೇ ನಿಗದಿತ ಸ್ಥಳಕ್ಕೆ ತಲುಪ ಬೇಕಾಗಿತ್ತು. ಪ್ರತಿ ಆರ್ ಎಎಫ್ ಘಟಕದಲ್ಲಿ 1 ಸಾವಿರ ಆರ್ ಎಎಫ್ ನ ಅತ್ಯಂತ ಕಠಿಣ ತರಬೇತಿ ಪಡೆದ ಯೋಧರಿರುತ್ತಾರೆ .

ಆರ್ ಎಎಫ್ ಘಟಕಗಳು ಆರಂಭ
ಇವರ ಬಳಿ ಗಲಭೆ ನಿಯಂತ್ರಣಕ್ಕೆ ಬಳಸಲಾಗುವ ಪಂಪ್ ಆಕ್ಷನ್ ಗನ್, ಟಿಯರ್ ಗ್ಯಾಸ್ ಶೆಲ್ ಸಿಡಿಸುವ ಗ್ರೆನೆಡ್ ಲಾಂಚರ್ ಸೇರಿದಂತೆ ಗಲಭೆ ನಿಯಂತ್ರಣಕ್ಕೆ ಬೇಕಾಗುವ ಎಲ್ಲಾ ಆಯುಧಗಳಿರುತ್ತವೆ .
ಆದರೆ ಈ ಪಡೆ ದೇಶದ ನಾನಾ ಭಾಗಗಳಿಗೆ ಸೂಕ್ತ ಸಮಯದಲ್ಲಿ ತಲುಪಲಾಗದ ಕಾರಣ ಗಲಭೆ ಪೀಡಿತ ಪ್ರದೇಶದಲ್ಲಿ ಸಾವು ನೋವು ಮತ್ತು ನಷ್ಟದ ಪ್ರಮಾಣ ಹೆಚ್ಚಾಗುತ್ತಿತ್ತು. ಇದನ್ನು ಮನಗಂಡ ಕೇಂದ್ರ ಸರಕಾರ ಈಗ ಮತ್ತೆ ಹೆಚ್ಚುವರಿ 5 ನೂತನ ಆರ್ ಎ ಎಫ್ ಘಟಕ ಗಳನ್ನು ಆರಂಭಿಸಲು ನಿರ್ಧರಿಸಿದೆ.

ಸರ್ಕಾರಕ್ಕೆ ಪ್ರಸ್ತಾವನೆ
ಮಂಗಳೂರಿನಲ್ಲಿ ನಿಯೋಜನೆಗೊಳ್ಳಲಿರುವ ಈ ನೂತನ ಆರ್ ಎಎಫ್ ಘಟಕಕ್ಕೆ ಎಲ್ಲಿ ಸ್ಥಳಾವಕಾಶ ನೀಡಲಾಗುವುದು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆರ್ಎಎಫ್ ಸ್ಥಾಪನೆ ಸಂಬಂಧ ಈ ಹಿಂದೆ ಮಂಗಳೂರು ಹೊರವಲಯದ ಬಜಪೆ ಮತ್ತು ಪಾವೂರಿನಲ್ಲಿ ಜಾಗ ಗುರುತಿಸಿ 2 ವರ್ಷದ ಹಿಂದೆ ಸರ್ಕಾರ ಪ್ರಸ್ತಾವನೆ ಕಳುಹಿಸಲಾಗಿದೆ.

ಮಂಗಳೂರಿನಿಂದ ಶೀಘ್ರ ರವಾನೆ
ಮಂಗಳೂರಿನಲ್ಲಿ ಆರ್ ಎ ಎಫ್ ಘಟಕ ಸ್ಥಾಪನೆಯ ವಿಚಾರ ಗಲಭೆ ಕೋರರಲ್ಲಿ ನಡುಕ ಹುಟ್ಟಿಸಿದೆ. ಮಂಗಳೂರು ಸೇರಿದಂತೆ ರಾಜ್ಯದ ಯಾವ ಮೂಲೆಯಲ್ಲೂ ಘರ್ಷಣೆ ಸಂಭವಿಸಿದರೂ ಈ ಪಡೆ ಮಂಗಳೂರಿನಿಂದ ಶೀಘ್ರವಾಗಿ ರವಾನೆಯಾಗಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications