ಕರಾವಳಿ ಜನರ ಆಶೀರ್ವಾದ ಕೇಳಲು ಆಗಮಿಸಿದ ರಾಹುಲ್ ಗಾಂಧಿ

Recommended Video

      ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ರಾಹುಲ್ ಗಾಂಧಿ | Oneindia kannada

      ಮಂಗಳೂರು, ಮಾರ್ಚ್ 20: ಕರಾವಳಿ ಜನರ ಆಶೀರ್ವಾದ ಕೇಳಲು ಬಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಇಂದು ರಾಜ್ಯ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು. ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವು ಹೂಗುಚ್ಛ ನೀಡಿ ಸ್ವಾಗತಿಸಿದರು.

      ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

      ತೆಂಕ ಎರ್ಮಾಳಿನ ಹೆಲಿಪ್ಯಾಡ್ ನಲ್ಲಿ ಬಂದಿಳಿದ ರಾಹುಲ್ ಗಾಂಧಿ ತೆಂಕ ಎರ್ಮಾಳಿನ ಪ್ರೌಢಶಾಲೆಗೆ ಹೋಗಿ ಅಲ್ಲಿನ ಮಕ್ಕಳ ಜೊತೆ ಬೆರೆತರು, ಮಕ್ಕಳ ಕೈಕುಲಿಕಿದ ರಾಹುಲ್ ಗಾಂಧಿ ಅವರೊಂದಿಗೆ ಕೆಲವು ಕಾಲಮಾತನಾಡಿ ಕುಷಲೋಪರಿ ವಿಚಾರಿಸಿದರು. ಅಲ್ಲಿಂದ ಮೀನುಗಾರರ ಭೇಟಿಗೆ ತೆರಳಿದ ರಾಹುಲ್ ಗಾಂಧಿ ಮೀನುಗಾರರ ಮುಖಂಡರೊಬ್ಬರ ಮನೆಗೆ ಹೋಗಿ ನೀರು ದೋಸೆ, ಚಟ್ನಿ ತಿಂದು ಖುಷಿಪಟ್ಟರು.

      ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸೇರಿದಂತೆ ಹಲವು ಮುಖಂಡರು ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದರು.

      Rahul Gandhi arrives at Mangaluru airport

      ಎರಡು ದಿನಗಳ ಪ್ರಚಾರ ಕಾರ್ಯಕ್ಕಾಗಿ ರಾಹುಲ್ ಗಾಂಧಿ ಅವರು ಆಗಮಿಸಿದ್ದು, ಎರಡು ದಿನಗಳ ತಮ್ಮ ಪ್ರವಾಸದಲ್ಲಿ ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಲಿರುವ ಅವರು, ನಂತರ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಿಗೂ ಭೇಟಿ ನೀಡಲಿದ್ದಾರೆ.

      Rahul Gandhi arrives at Mangaluru airport

      ಸ್ವಾಗತದ ಬಳಿಕ ರಾಹುಲ್ ಗಾಂಧಿ ಅವರು ಹೆಲಿಕಾಪ್ಟರ್‌ನಲ್ಲಿ ಉಡುಪಿಗೆ ತೆರಳಲಿದ್ದಾರೆ. ಇಂದು ಇಡೀ ದಿನ ಕರಾವಳಿ ಭಾಗದ ವಿವಿಧ ದೇವಾಲಯ, ಚರ್ಚ್ ಮತ್ತು ದರ್ಗಾಗಳಿಗೆ ಭೇಟಿ ನೀಡಲಿದ್ದಾರೆ. ಸಾರ್ವಜನಿಕ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+