ರಮಾನಾಥ್ ರೈ ಧರ್ಮಸ್ಥಳಕ್ಕೆ ಆಣೆ-ಪ್ರಮಾಣಕ್ಕೆ ಬರಲಿ: ಹರಿಕೃಷ್ಣ ಬಂಟ್ವಾಳ ಸವಾಲ್
ಮಂಗಳೂರು, ಜನವರಿ 1: ಜನಾರ್ದನ ಪೂಜಾರಿ ಅವರನ್ನು ರಮಾನಾಥ್ ರೈ ಅವಹೇಳನಕಾರಿಯಾಗಿ ನಿಂದಿಸಿರುವ ಬಗ್ಗೆ ಆಣೆ ಪ್ರಮಾಣಕ್ಕೆ ಸಿದ್ಧರಿರುವುದಾಗಿ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಜನಾರ್ದನ ಪೂಜಾರಿ ಅವರ ವಿಚಾರದಲ್ಲಿ ರಮಾನಾಥ ರೈ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಕಾಂಗ್ರೆಸ್ ಮುಖಂಡ ಅರುಣ್ ಕುವೆಲ್ಲೋ ಮತ್ತು ನಾನು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ಸಿದ್ಧರಿರುವುದಾಗಿ ಅವರು ಸ್ಪಷ್ಟಪಡಿಸಿದರು. ಸಚಿವ ರಮಾನಾಥ ರೈ ಬೈದದ್ದು ಕಾಂಗ್ರೆಸ್ ಮುಖಂಡ ಅರುಣ್ ಕುವೆಲ್ಲೊ ಮುಂದೆ ಹೊರತು ಜನಾರ್ದನ ಪೂಜಾರಿ ಕುಟುಂಬದ ಮುಂದೆಯಲ್ಲ. ಧರ್ಮಸ್ಥಳಕ್ಕೆ ಆಣೆ ಪ್ರಮಾಣಕ್ಕೆ ಬಂದರೆ ಮುಂದೆ ತೊಂದರೆಯಾಗಬಹುದು ಎಂಬ ಕಾರಣಕ್ಕೆ ರೈ ಆಣೆ ಪ್ರಮಾಣಕ್ಕೆ ಬರುವುದಿಲ್ಲ ಎಂದು ಅವರು ಹೇಳಿದರು.
ಪೂಜಾರಿಯವರ ಕುಟುಂಬದವರು ಬರುವುದಿಲ್ಲವೆಂದು ಗೊತ್ತಿದ್ದೇ ರಮಾನಾಥ್ ರೈ , ಪೂಜಾರಿ ಅವರ ಕುಟುಂಬದವರನ್ನು ಆಣೆ ಪ್ರಮಾಣಕ್ಕೆ ಕರೆಯುತ್ತಿದ್ದಾರೆ. ಆಣೆ ಪ್ರಮಾಣದ ಸವಾಲನ್ನು ರಮಾನಾಥ ರೈ ಸ್ವೀಕರಿಸಿ ಯಾವುದೇ ದಿನಾಂಕ ನಿಗದಿಪಡಿಸಲಿ ನಾವು ಬರುತ್ತೇವೆ ಎಂದು ಅವರು ಹೇಳಿದರು.
ನಾನು ಕಾಂಗ್ರೆಸ್ ನಲ್ಲಿ ಇರುವ ಸಂಧರ್ಭದಲ್ಲಿ ರಮಾನಾಥ್ ರೈ 1985 ರಲ್ಲಿ ನನಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡುವುದಾಗಿ, ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸುವುದಾಗಿ ಹೇಳಿ ಮೋಸ ಮಾಡಿದ್ದಾರೆ. ಕಳೆದ ಬಾರಿ ರೈ ನನಗೆ ಎಂಎಲ್ಸಿ ಸೀಟು ಕೊಡುವುದಾಗಿ ಹೇಳಿ ಮುಖ್ಯಮಂತ್ರಿ ಅವರಲ್ಲಿ ಪ್ರತಾಪ್ ಚಂದ್ರ ಶೆಟ್ಟಿಯವರ ಹೆಸರು ಪ್ರಸ್ತಾಪಿಸಿ ಮೋಸ ಮಾಡಿದ್ದಾರೆ ಎಂದು ಹರಿಕೃಷ್ಣ ಬಂಟ್ವಾಳ್ ಆರೋಪಿಸಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications