ಮಂಗಳೂರು: ಪೊಲೀಸರನ್ನು ಕಂಡು ಫಲ್ಗುಣಿ ನದಿಗೆ ಹಾರಿ ಪ್ರಾಣ ತೆತ್ತ
ಶರೀಫ್ ಎಂಬಾತ ಅಕ್ರಮ ಮರುಳುಗಾರಿಕೆ ನಡೆಸುತ್ತಿದ್ದ ವೇಳೆ ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳುವ ಭರದಲ್ಲಿ ಫಲ್ಗುಣಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ಈ ಘಟನೆ ಮಂಗಳೂರಿನ ಮಾರ್ದಂಗಡಿ ಎಂಬಲ್ಲಿ ಬುಧವಾರ ನಡೆದಿದೆ.
ಮಂಗಳೂರು, ಅಕ್ಟೋಬರ್. 26 : ಅಕ್ರಮ ಮರಳುಗಾರಿಕೆ ದಂಧೆ ಮೇಲೆ ಪೊಲೀಸರು ನಡೆಸಿದ ದಾಳಿ ವೇಳೆ ವ್ಯಕ್ತಿಯೊಬ್ಬ ತಪ್ಪಿಸಿಕೊಳ್ಳಲು ಫಲ್ಗುಣಿ ನದಿಗೆ ಹಾರಿ ಸಾವನ್ನೊಪ್ಪಿರುವ ಘಟನೆ ಬುಧವಾರ ಮಂಗಳೂರು ತಾಲೂಕಿನ ಮುಲ್ಲರ ಪಟ್ಟಣದ ಮಾರ್ದಂಗಡಿ ಎಂಬಲ್ಲಿ ನಡೆದಿದೆ.
ನದಿಗೆ ಹಾರಿದ ವ್ಯಕ್ತಿಯನ್ನು ಶರೀಫ್ (30) ಎಂದು ಗುರುತಿಸಲಾಗಿದ್ದು. ಮಾರ್ದಂಗಡಿ ಎಂಬಲ್ಲಿ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದ ವೇಳೆ ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳುವ ಭರದಲ್ಲಿ ಫಲ್ಗುಣಿ ನದಿಗೆ ಹಾರಿದ್ದಾನೆ.

ಈಗಾಗಲೇ ಜಿಲ್ಲೆಯಾದ್ಯಂತ ಅಕ್ರಮಮರಳುಗಾರಿಕೆ ಹೆಚ್ಚಾಗುತ್ತಿದ್ದು ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ನಿಗಾ ಇಟ್ಟಿದ್ದಾರೆ. ಮಾರ್ದಂಗಡಿ ಬಳಿ ಅಕ್ರಮ ಮರುಳುಗಾರಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಆ ಸಂದರ್ಭದಲ್ಲಿ ಮರಳುಗಾರಿಕೆ ನಡೆಸುತ್ತಿದ್ದ ವೇಳೆ ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳುವ ಭರದಲ್ಲಿ ಶರೀಫ್ ನದಿಗೆ ಹಾರಿದ್ದಾನೆ. ನದಿಗೆ ಹಾರಿದ ಶರೀಫ್ ನನ್ನು ರಕ್ಷಿಸಲು ಸ್ಥಳಕ್ಕೆ ಅಗ್ನಿಶಾಮಕ ದಳದವರನ್ನು ಕರೆಸಿ ತೀವ್ರ ಹುಡುಕಾಟ ನಡೆಸಿದಾಗ ಶರೀಫ್ ನ ಮೃತದೇಹ ಪತ್ತೆಯಾಗಿದೆ.
ಇದರಿಂದ ರೊಚ್ಚಿಗೆದ್ದ ಸ್ಥಳಿಯರು ಪೊಲೀಸ್ ವಾಹನವನ್ನು ಜಖಂಗೊಳಿಸಿದ್ದಾರೆ. ಇದರಿಂದ ಮಾರ್ದಂಗಡಿ ಬಳಿ ಬಿಗುವಿನ ವಾತಾವರಣ ಉದ್ಭವವಾಗಿದೆ. ಸ್ಥಳಕ್ಕೆ ದ.ಕ ಜಿಲ್ಲಾ ಎಸ್ಪಿ ಭೂಷಣ್ ಭೇಟಿ ನೀಡಿದ್ದು. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications