ಭಾರೀ ಮಳೆ: ಅಂಗರಗುಂಡಿ ರೈಲ್ವೆ ಅಂಡರ್ ಪಾಸ್ ಸಂಚಾರ ಸ್ಥಗಿತ
ಮಂಗಳೂರು, ಜೂನ್ 13 : ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಬೈಕಂಪಾಡಿ ಸಮೀಪದ ಅಂಗರಗುಂಡಿ ರೈಲ್ವೆ ಅಂಡರ್ ಪಾಸಿನಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಈ ಹಿನ್ನಲೆಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.
ಸಾರ್ವಜನಿಕರ ಬೇಡಿಕೆಯಂತೆ ಅಂಡರ್ ಪಾಸ್ ನಿರ್ಮಿಸಿ ಎರಡು ತಿಂಗಳ ಹಿಂದೆಯಷ್ಟೇ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದ್ದ ಬೈಕಂಪಾಡಿ ಸಮೀಪದ ಅಂಗರಗುಂಡಿ ರೈಲ್ವೆ ಅಂಡರ್ ಪಾಸ್ ಸಂಪೂರ್ಣ ಅವೈಜ್ಞಾನಿಕದಿಂದ ಕೂಡಿದೆ. ಇದರಿಂದ ಮಳೆ ಬಂದರೆ ಸಾಕು ನೀರು ತುಂಬಿಕೊಂಡು ಸಂಚಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸೋಮವಾರ ಸಂಜೆ ನೀರು ನಿಂತಿತ್ತಾದರೂ ಅದು ಹೇಗೋ ಒದ್ದಾಡಿಕೊಂಡು ವಾಹನ ಸವಾರರು ತೆರಳುತ್ತಿದ್ದರು. ಆದರೆ, ಇಂದು (ಮಂಗಳವಾರ) ನೀರಿನ ಮಟ್ಟ ಏರಿಕೆಯಾಗಿದ್ದು, ಭಾರೀ ವಾಹನಗಳಿಗೆ ತೆರಳಲು ಸಾಧ್ಯವಾಗಿಲ್ಲ.
ಅಂಡರ್ ಪಾಸ್ ನಿರ್ಮಾಣದ ಸಂದರ್ಭದಲ್ಲಿ ಪಕ್ಕದಲ್ಲಿ ಚರಂಡಿಗಳನ್ನು ನಿರ್ಮಿಸಿದ್ದರೂ ಅದರಲ್ಲಿ ನೀರು ಹರಿಯಲು ಸಾಧ್ಯವಾಗದೇ ರಸ್ತೆಯಲ್ಲೇ ಜಮಾವಣೆಯಾಗುತ್ತದೆ. ಇದೀಗ ನಮಗೆ ದ್ವೀಪದ ಅನುಭವವಾಗುತ್ತಿದೆ ಎಂದು ಸ್ಥಳೀಯ ನಿವಾಸಿ ಸೈದುದ್ದೀನ್ ದೂರಿದ್ದಾರೆ.
ಆದ್ದರಿಂದ ಈ ಬಗ್ಗೆ ರೈಲ್ವೇ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications