ಮಂಗಳೂರಲ್ಲಿ ಮತ್ತೆ ಮಳೆ ಆರಂಭ:ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ
Recommended Video

ಮಂಗಳೂರು, ಸೆಪ್ಟೆಂಬರ್. 27: ಮಂಗಳೂರಿನಲ್ಲಿ ತಿಂಗಳ ಬಳಿಕ ಮತ್ತೆ ಮಳೆ ಆರಂಭವಾಗಿದೆ. ಇಂದು ಗುರುವಾರ ಬೆಳ್ಳಂಬೆಳಗ್ಗೆ ಮಂಗಳೂರಿನಲ್ಲಿ ಭಾರೀ ಸಿಡಿಲು ಗುಡುಗಿನೊಂದಿಗೆ ತುಂತುರು ಮಳೆಯಾಗುತ್ತಿದೆ. ಮಳೆಗಾಲದ ಕೊನೆಯಲ್ಲಿ ತುಂತುರು ಮಳೆ ಆರಂಭವಾಗಿದ್ದು, ಮತ್ತೆರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಗ್ಗೆ ಮಂಗಳೂರು ಸೇರಿದಂತೆ ಸುತ್ತಮುತ್ತ ಗುಡುಗು ಸಹಿತ ತುಂತುರು ಮಳೆ ಬೀಳುತ್ತಿದೆ. ಒಂದು ತಿಂಗಳಿಂದ ಪೂರ್ತಿ ಮಾಯವಾಗಿದ್ದ ಮಳೆ ಮತ್ತೆ ಆರಂಭವಾಗಿದ್ದು, ಬಿರುಬಿಸಿಲಿನ ವಾತಾವರಣದಲ್ಲಿ ತಂಪೆರಚಿದೆ. ಸದ್ಯ ಮಂಗಳೂರು, ಮೂಡಬಿದ್ರೆ, ಕಾರ್ಕಳ ಬಂಟ್ವಾಳ ಮಳೆಯಾಗುತ್ತಿದೆ.
ಸೆಪ್ಟೆಂಬರ್ ತಿಂಗಳ ಮೊದಲ ವಾರದಿಂದಲೇ ಕರಾವಳಿಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿತ್ತು. ಮಳೆ ಇಲ್ಲದೆ ಸುಡುಬಿಸಿಲು ಆವರಿಸಿ ಬಿರು ಬೇಸಗೆ ವಾತಾವರಣ ಸೃಷ್ಟಿಯಾಗಿತ್ತು.ಈಗ ಮಳೆಗಾಲದ ಕೊನೆಯಲ್ಲಿ ಮತ್ತೆ ಮಳೆ ಆರಂಭವಾಗಿರುವುದು ಕರಾವಳಿಗರಲ್ಲಿ ಮಂದಹಾಸ ಮೂಡಿಸಿದೆ.

ಈ ನಡುವೆ ಹವಾಮಾನ ಇಲಾಖೆಯಿಂದ ಭಾರೀ ಮಳೆಯ ಮುನ್ಸೂಚನೆ ದೊರೆತಿದೆ. ಸೆಪ್ಟೆಂಬರ್ 27 ರಿಂದ 30ರ ನಡುವೆ ಭಾರೀ ಮಳೆಯಾಗಲಿದ್ದು, ಈ ಮಧ್ಯೆ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಭಾರೀ ಮಳೆಯ ನಡುವೆ ಒಂದೂವರೆ ಮೀಟರ್ ಎತ್ತರಕ್ಕೆ ಸಮುದ್ರದ ಅಲೆಗಳು ಏಳುವ ಎಚ್ಚರಿಕೆ ರವಾನಿಸಲಾಗಿದ್ದು, ಪಶ್ಚಿಮ, ಪೂರ್ವ ಕರಾವಳಿ ಮತ್ತು ಲಕ್ಷದ್ವೀಪ ಪ್ರದೇಶಗಳಿಗೆ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ರವಾನಿಸಲಾಗಿದೆ.
-
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು











Click it and Unblock the Notifications