ವೈರಲ್ ಆಯ್ತು ಅರಣ್ಯ ಸಚಿವ ರಮಾನಾಥ್ ರೈ ಡ್ಯಾನ್ಸ್
ದ.ಕ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಬಂಟ್ವಾಳದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುವ ಮೂಲಕ ಗಣೇಶೋತ್ಸವ ಸಂಭ್ರಮಕ್ಕೆ ಕಳೆ ಹೆಚ್ಚಿಸಿದರು.
Recommended Video

ಮಂಗಳೂರು, ಆಗಸ್ಟ್ 28: ದ.ಕ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಬಂಟ್ವಾಳದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುವ ಮೂಲಕ ಗಣೇಶೋತ್ಸವ ಸಂಭ್ರಮಕ್ಕೆ ಕಳೆ ಹೆಚ್ಚಿಸಿದರು.
ಹೌದು ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟುವಿನಲ್ಲಿ ನಡೆಯುತ್ತಿರುವ 14 ನೇ ವರ್ಷದ ಗಣೇಶೋತ್ಸವದಲ್ಲಿ ಪಾಲ್ಗೊಂಡ ಸಚಿವರು ಡ್ಯಾನ್ಸ್ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಹಾಗೂ ಇಲ್ಲಿನ ಗಣೇಶೊತ್ಸವದ ಗೌರವಧ್ಯಕ್ಷರು ಅಗಿರುವ ಸಚಿವ ರಮಾನಥ ರೈ ಮತ್ತು ಇವರ ನೇತೃತ್ವದಲ್ಲಿ ಗಣೇಶೊತ್ಸವ ನಡೆಯುತ್ತಿದೆ ಎನ್ನುವುದು ಮತ್ತೊಂದು ವಿಶೇಷ.

ಬೆಂಗಳೂರಿನ ಜ್ಯೂನಿಯರ್ ರಾಜ್ ಕುಮಾರ್ ಖ್ಯಾತಿಯ ಅಶೋಕ್ ಭಸ್ತಿ ಬಳಗದಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೆಜ್ಜೆ ಹಾಕಿದರು ಡಾ. ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಉಪೇಂದ್ರ ಮತ್ತು ದುನಿಯ ವಿಜಯ್ ರನ್ನು ಹೋಲುವ ನಾಲ್ಕು ಕಲಾವಿದರೊಂದಿಗೆ ಹೆಜ್ಜೆ ಹಾಕಿದ್ದು ವಿಶೇಷ. ಬ್ಯುಸಿಯಾಗಿರುವ ಸಚಿವರ ಲವಲವಿಕೆ ಇದೀಗ ಮನೆ ಮಾತಾಗಿದೆ.
ಇನ್ನು ಕಳೆದ ವಾರವಷ್ಟೇ ಉಡುಪಿಯಲ್ಲಿ ಗಣೇಶ ಚತುರ್ಥಿಯ ಪ್ರಯುತ ಶುಭಾಶಯ ತಿಳಿಸಲು ಆಗಮಿಸಿದ ಮಾಜಿ ಕೇಂದ್ರ ಸಚಿವ ಹಾಗೂ ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಆಸ್ಕರ್ ಫೆರ್ನಾಂಡಿಸ್ ಕೂಡ ಹುಲಿವೇಷ ತಂಡದೊಂದಿಗೆ ಹೆಜ್ಜೆ ಹಾಕಿ ನರ್ತಿಸಿ ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು.

ರೈಗಳ ಈ ಡ್ಯಾನ್ಸಿಂಗ್ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಆಸ್ಕರ್ ಫರ್ನಾಂಡೀಸ್ ಮಾತ್ರ ಅಲ್ಲ ರೈಗಳು ಕೂಡ ಒಂದು ಒಳ್ಳೆ ಡ್ಯಾನ್ಸರ್ ಎಂಬುದು ಅವರ ಸಹಪಾಠಿಗಳ ಮಾತು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications