ಮುಂದಿನ ಚುನಾವಣೆ ನಂತರ ರಮಾನಾಥ ರೈ ಶಾಶ್ವತ ವಿಶ್ರಾಂತಿ - ಸದಾನಂದ ಗೌಡ

ಮಂಗಳೂರು, ಜುಲೈ 13: "ಬಂಟ್ವಾಳ ಕ್ಷೇತ್ರ ದಲ್ಲಿ ಚುನಾವಣೆಗೆ ನಿಂತು ಗೆಲ್ಲುವಂತೆ ರಮಾನಾಥ್ ರೈ ನನಗೆ ಸವಾಲು ಹಾಕಿದ್ದಾರೆ. ರಮಾನಾಥ್ ರೈ ಸವಾಲು ಸ್ವೀಕರಿಸಿದ್ದೇನೆ. ಮೂರು ದಿನ ಬಂಟ್ವಾಳ ಕ್ಷೇತ್ರದಲ್ಲಿ ವಿಸ್ತಾರಕನಾಗಿ ಕೆಲಸ ಮಾಡಲಿದ್ದೇನೆ. ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದೇನೆ. ಮುಂದಿನ ಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತ ನನ್ನು ಚುನಾವಣೆಗೆ ನಿಲ್ಲಿಸುತ್ತೇನೆ. ರೈ ವಿರುದ್ದ ಗೆಲ್ಲಿಸಿ ತೋರಿಸುತ್ತೇನೆ," ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿಕೆ ನೀಡಿದರು.

ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, "ಮೊದಲೇ ರಮಾನಾಥ್ ರೈ ಆರೋಗ್ಯ ಸರಿಯಿಲ್ಲ. ರಮಾನಾಥ್ ರೈ ಗೆ ವಯಸ್ಸಾಗಿದೆ. ಅವರಿಗೆ ವಿಶ್ರಾಂತಿ ಬೇಕಾಗಿದೆ. ಮುಂದಿನ ಚುನಾವಣೆಯ ನಂತರ ಶಾಶ್ವತ ವಾಗಿ ವಿಶ್ರಾಂತಿ ನೀಡಲಿದ್ದೇವೆ," ಎಂದು ಅಪಹಾಸ್ಯ ಮಾಡಿದರು.

 Ramanath Rai is too old, let him have good rest at home - D V Sadananda Gowda

ಇನ್ನು, "ಇಂದು ಉಸ್ತುವಾರಿ ಸಚಿವ ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯಲಿರುವ ಶಾಂತಿ ಸಭೆ ಕೇವಲ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ರಮಾನಾಥ್ ರೈ ಬೆಂಬಲಿಗರ ಸಭೆ. ಹಿಂದೂ ಸಂಘಟನೆಗಳಿಗೆ ಶಾಂತಿ ಸಭೆಗೆ ಅಹ್ವಾನವಿಲ್ಲ.ಎಸ್.ಡಿ.ಪಿ.ಐ ಮತ್ತು ಪಿಎಫ್ಐ ಸಂಘಟನೆಗಳಿಗೆ ಅಹ್ವಾನ ನೀಡಲಾಗಿದೆ. ಇಂತಹ ಶಾಂತಿ ಸಭೆ ನಮಗೆ ಅಗತ್ಯ ಇಲ್ಲ," ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+