ದಕ್ಷಿಣ ಕನ್ನಡದಲ್ಲಿ ಮತ್ತೆ ಸದ್ದು ಮಾಡಿದ ವಿಜಯ ಬ್ಯಾಂಕ್ ವಿಲೀನ ಪ್ರಕ್ರಿಯೆ
ಮಂಗಳೂರು, ಫೆಬ್ರವರಿ 24:ವಿಜಯ ಬ್ಯಾಂಕ್ ವಿಲೀನ ಪ್ರಕ್ರಿಯೆ ವಿಚಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಸದ್ದು ಮಾಡುತ್ತಿದ್ದು, ಮತ್ತೆ ರಾಜಕೀಯ ಕೆಸರೆರೆಚಾಟ ಆರಂಭವಾಗಿದೆ. ಈ ನಡುವೆ ವಿಜಯ ಬ್ಯಾಂಕ್ ಅನ್ನು ಗುಜರಾತ್ ಮೂಲದ ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಗೊಳಿಸುವ ಕೇಂದ್ರ ಸರಕಾರದ ನಿರ್ಧಾರದ ವಿರುದ್ಧ ಸರ್ವಪಕ್ಷಗಳ ಜನಪ್ರತಿನಿಧಿಗಳ ನಿಯೋಗ ದೆಹಲಿಗೆ ತೆರಳಲು ತೀರ್ಮಾನಿಸಿದೆ.
ವಿಜಯಾ ಬ್ಯಾಂಕ್ ಉಳಿಸಿ ಹೋರಾಟ ಸಮಿತಿಯು ದ.ಕ. ಮತ್ತು ಉಡುಪಿ ಜಿಲ್ಲೆಯ ಸರ್ವಪಕ್ಷಗಳ ಜನಪ್ರತಿನಿಧಿಗಳು ತಮ್ಮ ನಿಲುವು ವ್ಯಕ್ತಪಡಿಸುವುದಕ್ಕಾಗಿ ನಗರದ ಪುರಭವನದಲ್ಲಿ ಏರ್ಪಡಿಸಿದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಮಾನಾಥ ರೈ, ಕೆಲವರಿಗೆ ಸಮಸ್ಯೆಗಳು ಇತ್ಯರ್ಥವಾಗುವುದು ಇಷ್ಟವಿಲ್ಲ. ಸಮಸ್ಯೆಗಳು ಜೀವಂತವಾಗಿದ್ದರೆ ಮಾತ್ರ ರಾಜಕೀಯ ಬೇಳೆ ಬೇಯಿಸಲು ಸಾಧ್ಯ ಎಂದು ತಿಳಿದುಕೊಂಡಿದ್ದಾರೆ. ವಿಜಯ ಬ್ಯಾಂಕ್ ಅನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ, ಮುಲ್ಕಿ ಸುಂದರರಾಮ ಶೆಟ್ಟರ ಹೆಸರನ್ನು ನಗರದ ರಸ್ತೆಗಿಡುವ ವಿಚಾರದಲ್ಲಿ ರಾಜಕೀಯ ಮಾಡಿದವರು ಇದೀಗ ಅವರ ಫೋಟೋವನ್ನು ಬ್ಯಾಂಕಿನಿಂದ ಮೂಲೆಗೆ ಸರಿಸುವಾಗ ವೌನವಾಗಿದ್ದಾರೆ ಎಂದು ಕಿಡಿಕಾರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ನಾವು ರಸ್ತೆಯಲ್ಲಿ ನಿಂತು ಪ್ರತಿಭಟನೆ ಮಾಡಿದರೆ ಪ್ರಧಾನಿ, ವಿತ್ತ ಸಚಿವರಿಗೆ ತಲುಪುವುದಿಲ್ಲ. ದ.ಕ. ಮತ್ತು ಉಡುಪಿಯ ಬಿಜೆಪಿಯ ಸಂಸದರು, ವಿಧಾನ ಪರಿಷತ್ ಸದಸ್ಯರು, ಶಾಸಕರನ್ನು ಒಗ್ಗೂಡಿಸುವ ಜವಾಬ್ದಾರಿ ನನ್ನದು. ಸದಾನಂದ ಗೌಡ, ಮಲ್ಲಿಕಾರ್ಜುನ ಖರ್ಗೆ, ಆಸ್ಕರ್ ಫರ್ನಾಂಡಿಸ್, ವೀರಪ್ಪ ಮೊಯ್ಲಿ ಅವರನ್ನೂ ಒಳಗೊಂಡಂತೆ ಪ್ರಧಾನಿ, ವಿತ್ತ ಸಚಿವರ ಸಹಿತ ಸಂಬಂಧಪಟ್ಟವರನ್ನು ಕಂಡು ಭೇಟಿಯಾಗಿ ಅಹವಾಲು ಸಲ್ಲಿಸೋಣ ಎಂದು ಹೇಳಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications