ಬಂದ್: ಸಂಘ ಪರಿವಾರದ ವಿರುದ್ಧ ರೈ, ಪೂಜಾರಿ ಅಸಮಾಧಾನ
ಸಂಘ ಪರಿವಾರಗಳು ಅಸ್ತಿತ್ವ ಸಾಧಿಸುವುದಕ್ಕೋಸ್ಕರ ಬಂದ್ ಗೆ ಕರೆ ನೀಡಿವೆ ಎಂದು ಕಾಂಗ್ರೆಸ್ ನಾಯಕರಾದ ಅರಣ್ಯ ಸಚಿವ ರಮಾನಾಥ್ ರೈ ಹಾಗೂ ಪೂಜಾರಿ ಹೇಳಿಕೆ.
ಮಂಗಳೂರು, ಫೆಬ್ರವರಿ 24 : 'ಕೇರಳ ಮುಖ್ಯಮಂತ್ರಿ ಪಿಣರಾಯ್ ಅವರು ಸಿಪಿಎಂ ಸಮಾರಂಭಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಂಘ ಪರಿವಾರ ಫೆ. 25ರಂದು ಮಂಗಳೂರು ಬಂದ್ ಗೆ ಕರೆ ನೀಡುವುದರ ಮೂಲಕ ಸಮಾಜದಲ್ಲಿ ಗೊಂದಲ ಸೃಷ್ಟಿಸುತ್ತಿದೆ' ಎಂದು ಅರಣ್ಯ ಸಚಿವ ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಮಾತನಾಡಿದ ಅವರು, ಸಂಘ ಪರಿವಾರ ಬಂದ್ ಕರೆ ನೀಡಿರುವುದು ಘರ್ಷಣೆಗೆ ದಾರಿ ಮಾಡಿಕೊಟ್ಟಿದೆ. ಇದರಿಂದ ಅಮಾಯಕರಿಗೆ ತೊಂದರೆ ಆಗುತ್ತದೆ. ಸಂಘ ಪರಿವಾರ ತನ್ನ ಅಸ್ತಿತ್ವಕ್ಕೆ ಹೋರಾಡುತ್ತಿದೆ. ಯಾವುದೇ ರೀತಿಯ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳುತ್ತೇವೆ. ಕಿಡಿಗೇಡಿಗಳನ್ನು ಪ್ರಚೋದಕರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ' ಎಂದು ಹೇಳಿದರು.['ಪಿಣರಾಯಿ ಬಂದರೆ ತೊಂದರೆ ಗ್ಯಾರಂಟಿ' ಜಗದೀಶ್ ಶೇಣವ ಎಚ್ಚರಿಕೆ]

ಪೂಜಾರಿ ಕಿಡಿ: ಇದೇ ವೇಳೆ ಬಂದ್ ಕುರಿತು ಮಾತನಾಡಿದ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ, ' ಬಂದ್ ಗೆ ಕರೆ ನೀಡುವ ಮೂಲಕ ಸಂಘಪರಿವಾರ ಸುಪ್ರೀಂ ಕೋರ್ಟ್ ನಿಯಮಗಳನ್ನು ಉಲ್ಲಂಘಿಸಿದೆ. ಹೀಗಾಗಿ ಸಂಘಪರಿವಾರದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ ಅವರು ಬಂದ್ ನಡೆಸಿದ್ದಲ್ಲಿ ಆಗುವ ನಷ್ಟವನ್ನ ಸಂಘಪರಿವಾರ ಭರಿಸಬೇಕೆಂದು ಆಗ್ರಹಿಸಿದರು.[ಪಿಣರಾಯಿ ಕಾರ್ಯಕ್ರಮಕ್ಕೆ 3,400 ಪೊಲೀಸರಿಂದ ಭದ್ರತೆ]

ಸುಪ್ರೀಂ ಕೋರ್ಟ್ ನ್ನ ಅವಮಾನ ಮಾಡುವ ಮೂಲಕ ಸಂಘಪರಿವಾರ ಇಡೀ ದೇಶವನ್ನೇ ಅಪಮಾನ ಮಾಡಿದೆ. ಕೂಡಲೇ ಸಂಘಪರಿವಾರ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ ಅವರು ಒಂದು ವೇಳೆ ಕ್ಷಮೆ ಕೇಳದಿದ್ದರೆ ದೇಶದ ಜನರೇ ತಕ್ಕ ಉತ್ತರ ನೀಡುತ್ತಾರೆ ' ಎಂದು ಎಚ್ಚರಿಕೆ ನೀಡಿದರು.[ದಕ್ಷಿಣ ಕನ್ನಡ ಬಂದ್ ಬಿಸಿ ಹೆಚ್ಚಳ : ಮದ್ಯ ಮಾರಾಟ ನಿಷೇಧ]
ಇದೇ ವೇಳೆ ಪಿಯುಸಿಎಲ್ ಸಂಘಟನೆ ಸೇರಿ ವಿವಿಧ ಸಂಘಟನೆಗಳು ಸಹ ಬಂದ್ ಗೆ ಆಕ್ರೋಶ ವ್ಯಕ್ತಪಡಿಸಿವೆ.[ಉಳ್ಳಾಲ ವಲಯದ ಸಿಪಿಐಂ ಕಚೇರಿಗೆ ದುಷ್ಕರ್ಮಿಗಳಿಂದ ಬೆಂಕಿ]
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications