Get Updates
Get notified of breaking news, exclusive insights, and must-see stories!

'ಬಿಜೆಪಿ ಕಾರ್ಯಕರ್ತರ ಮನೇಲಿ ಬೇಯುತ್ತಿರುವುದು ಅನ್ನ ಭಾಗ್ಯದ ಅಕ್ಕಿ'

ಮಂಗಳೂರು, ಏಪ್ರಿಲ್ 08:ರಸ್ತೆಯಲ್ಲಿ ಮೋದಿ ಮೋದಿ ಎಂದು ಕೂಗುವ ಬಿಜೆಪಿ ಕಾರ್ಯಕರ್ತರ ಮನೆಯಲ್ಲಿ ಬೇಯುತ್ತಿರುವುದು ರಾಜ್ಯ ಸರಕಾರದ ಅನ್ನ ಭಾಗ್ಯದ ಅಕ್ಕಿ ಎಂದು ಮಾಜಿ ಸಚಿವ ರಮಾನಾಥ್ ರೈ ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಬಂಟ್ವಾಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ, ಕಾರ್ಯಕರ್ತರಿಗೆ ಈ ಬಾರಿಯ ಚುನಾವಣಾ ಪ್ರಚಾರಕ್ಕೆ ವಿಷಯವೇ ಇಲ್ಲ. ಅವರು ಕೇವಲ 'ಮತ್ತೊಮ್ಮೆ ಮೋದಿ. ಮತ್ತೊಮ್ಮೆ ಮೋದಿ' ಎಂದು ಪ್ರಚಾರ ಮಾಡುತ್ತಿದ್ದಾರೆ. ಆದರೆ, ಅವರ ಮನೆಯಲ್ಲಿ ಬೇಯುತ್ತಿರುವುದು ಮಾತ್ರ ಈ ಹಿಂದಿನ ಸಿದ್ದರಾಮಯ್ಯ ಸರಕಾರದ ಅನ್ನಭಾಗ್ಯದ ಅಕ್ಕಿ ಎಂದು ಕಿಡಿಕಾರಿದರು.

ಈ ಚುನಾವಣೆ ಯಾರೊಬ್ಬರ ಶಕ್ತಿ ಪ್ರದರ್ಶನವಲ್ಲ. ದೇಶದ ಭವಿಷ್ಯವನ್ನು ರೂಪಿಸುವ ಮತ್ತು ತೀರ್ಮಾನ ಮಾಡುವ ಚುನಾವಣೆ. ಈ ದೇಶಕ್ಕೆ ಯಾರು ಬೇಕು? ಯಾರು ಬೇಡ? ಎಂಬ ನಿರ್ಧಾರವನ್ನು ಮುಂದಿಟ್ಟುಕೊಂಡು ಈ ಚುನಾವಣೆ ಎದುರಿಸುತ್ತಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Ramanath Rai slams BJP in Mangaluru

ಈ ಬಾರಿಯ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದೇ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ರಮಾನಾಥ್ ರೈ, ನರೇಂದ್ರ ಮೋದಿ ಬರಲೂಬಾರದು, ಒಂದು ವೇಳೆ ಬಂದರೆ ಅದರಿಂದ ದೇಶದ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಅಪಾಯ ಖಂಡಿತ ಎಂದು ಆತಂಕ ವ್ಯಕ್ತಪಡಿಸಿದರು.

ಈ ಚುನಾವಣೆ ಸಂವಿಧಾನದ ಅಳಿವು-ಉಳಿವಿನ ಪ್ರಶ್ನೆಯಾಗಿದೆ. ನರೇಂದ್ರ ಮೋದಿ ಸಮಾಜವನ್ನು ವಿಭಜಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ದೇಶದ ಪ್ರಧಾನಿಯೇ ಸಮಾಜವನ್ನು ಒಡೆಯುವ ಹೇಳಿಕೆ ನೀಡಿದರೆ ಈ ಸಮಾಜ ಎಲ್ಲಿಗೆ ಹೋಗಿ ತಲುಪಬಹುದು ಎಂದು ರಮಾನಾಥ್ ರೈ ಪ್ರಶ್ನಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+